<p><strong>ನವದೆಹಲಿ (ಪಿಟಿಐ):</strong> ಹಿಂದೂ ಮಹಾಸಾಗರ ವಲಯದ ರಾಷ್ಟ್ರಗಳು ಕಡಲ್ಗಳ್ಳರ ಹಾವಳಿ ಇರುವ ವ್ಯಾಪ್ತಿಯನ್ನು ಸ್ಪಷ್ಟವಾಗಿ ಗುರುತಿಸುವ ಜತೆಗೆ ವಿವಿಧ ರಾಷ್ಟ್ರಗಳ ನೌಕಾಪಡೆಗಳ ಕಾರ್ಯನಿರ್ವಹಣೆಯಲ್ಲಿ ಏಕರೂಪತೆ ಜಾರಿಗೊಳಿಸಬೇಕು ಎಂದು ಭಾರತ ಪ್ರತಿಪಾದಿಸಿದೆ.<br /> <br /> ದಕ್ಷಿಣ ಆಫ್ರಿಕಾದ ಕೇಪ್ಟೌನ್ನಲ್ಲಿ ಈಚೆಗೆ ನಡೆದ `ಹಿಂದೂ ಮಹಾಸಾಗರ ರಾಷ್ಟ್ರಗಳ ನೌಕಾಪಡೆಗಳ ಸಮಾವೇಶ~ದಲ್ಲಿ ಭಾರತದ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ನಿರ್ಮಲ್ ವರ್ಮ ಈ ಕುರಿತು ಪ್ರಸ್ತಾಪಿಸಿದರು.<br /> ಸರಕು ಸಾಗಣೆ ಹಡಗುಗಳಲ್ಲಿ ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವ ಅಗತ್ಯದ ಬಗ್ಗೆಯೂ ವರ್ಮ ದನಿ ಎತ್ತಿದರು. ಕೇರಳ ಕರಾವಳಿಯಲ್ಲಿ ಈಚೆಗೆ ಅಲ್ಲಿನ ಇಬ್ಬರು ಮೀನುಗಾರರನ್ನು ಇಟಲಿ ವಾಣಿಜ್ಯ ಹಡಗಿನ ಸಿಬ್ಬಂದಿ ಗುಂಡು ಹಾರಿಸಿ ಕೊಂದಿದ್ದರ ಹಿನ್ನೆಲೆಯಲ್ಲಿ ಈ ಕುರಿತು ಪ್ರಸ್ತಾಪಿಸಲಾಯಿತು ಎಂದು ಮೂಲಗಳು ತಿಳಿಸಿವೆ.<br /> <br /> ಹಡಗು ವಿಮೆ ಏಜೆನ್ಸಿಗಳು ಇಡೀ ಹಿಂದೂ ಮಹಾಸಾಗರ ವ್ಯಾಪ್ತಿಯನ್ನು ಕಡಲ್ಗಳ್ಳರ ಹಾವಳಿಯಿರುವ ಪ್ರದೇಶವೆಂದು ಗುರುತಿಸಿದ್ದು, ಇದರಿಂದ ವಿಮೆ ಮೊತ್ತ ದುಬಾರಿಯಾಗುತ್ತಿದೆ. ಹೀಗಾಗಿ ಈ ಪ್ರದೇಶದ ಮೂಲಕ ನಡೆಯುವ ಎಲ್ಲ ವಾಣಿಜ್ಯ ವಹಿವಾಟಿನ ಮೇಲೆ ದುಷ್ಪರಿಣಾಮವಾಗಿದೆ ಎಂದು ನೌಕಾಪಡೆಯ ಸಹಾಯಕ ಮುಖ್ಯಸ್ಥರಾದ ರೇರ್ ಅಡ್ಮಿರಲ್ ಮೊಂಟಿ ಖನ್ನಾ ಹೇಳಿದರು.<br /> <br /> ಸರಕು ಸಾಗಣೆ ಹಡಗುಗಳಲ್ಲಿ ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ನಿಯೋಜಿಸುವ ಕುರಿತು ಶೀಘ್ರವೇ ತೀರ್ಮಾನ ಹೊರಹೊಮ್ಮುವ ನಿರೀಕ್ಷೆ ಇದೆ ಎಂದೂ ತಿಳಿಸಿದ್ದಾರೆ.<br /> <br /> ಕೇಪ್ಟೌನ್ನಲ್ಲಿ ನಾಲ್ಕು ದಿನಗಳ ಕಾಲ ನಡೆದ ಸಮಾವೇಶದಲ್ಲಿ ಹಿಂದೂ ಮಹಾಸಾಗರ ವಲಯದ 35 ರಾಷ್ಟ್ರಗಳು ಹಾಗೂ ಈ ವ್ಯಾಪ್ತಿಗೆ ಹೊರತಾದ ಜರ್ಮನಿ, ಬ್ರೆಜಿಲ್, ಇಟಲಿ ಮತ್ತು ಚಿಲಿ ಭಾಗವಹಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಹಿಂದೂ ಮಹಾಸಾಗರ ವಲಯದ ರಾಷ್ಟ್ರಗಳು ಕಡಲ್ಗಳ್ಳರ ಹಾವಳಿ ಇರುವ ವ್ಯಾಪ್ತಿಯನ್ನು ಸ್ಪಷ್ಟವಾಗಿ ಗುರುತಿಸುವ ಜತೆಗೆ ವಿವಿಧ ರಾಷ್ಟ್ರಗಳ ನೌಕಾಪಡೆಗಳ ಕಾರ್ಯನಿರ್ವಹಣೆಯಲ್ಲಿ ಏಕರೂಪತೆ ಜಾರಿಗೊಳಿಸಬೇಕು ಎಂದು ಭಾರತ ಪ್ರತಿಪಾದಿಸಿದೆ.<br /> <br /> ದಕ್ಷಿಣ ಆಫ್ರಿಕಾದ ಕೇಪ್ಟೌನ್ನಲ್ಲಿ ಈಚೆಗೆ ನಡೆದ `ಹಿಂದೂ ಮಹಾಸಾಗರ ರಾಷ್ಟ್ರಗಳ ನೌಕಾಪಡೆಗಳ ಸಮಾವೇಶ~ದಲ್ಲಿ ಭಾರತದ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ನಿರ್ಮಲ್ ವರ್ಮ ಈ ಕುರಿತು ಪ್ರಸ್ತಾಪಿಸಿದರು.<br /> ಸರಕು ಸಾಗಣೆ ಹಡಗುಗಳಲ್ಲಿ ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವ ಅಗತ್ಯದ ಬಗ್ಗೆಯೂ ವರ್ಮ ದನಿ ಎತ್ತಿದರು. ಕೇರಳ ಕರಾವಳಿಯಲ್ಲಿ ಈಚೆಗೆ ಅಲ್ಲಿನ ಇಬ್ಬರು ಮೀನುಗಾರರನ್ನು ಇಟಲಿ ವಾಣಿಜ್ಯ ಹಡಗಿನ ಸಿಬ್ಬಂದಿ ಗುಂಡು ಹಾರಿಸಿ ಕೊಂದಿದ್ದರ ಹಿನ್ನೆಲೆಯಲ್ಲಿ ಈ ಕುರಿತು ಪ್ರಸ್ತಾಪಿಸಲಾಯಿತು ಎಂದು ಮೂಲಗಳು ತಿಳಿಸಿವೆ.<br /> <br /> ಹಡಗು ವಿಮೆ ಏಜೆನ್ಸಿಗಳು ಇಡೀ ಹಿಂದೂ ಮಹಾಸಾಗರ ವ್ಯಾಪ್ತಿಯನ್ನು ಕಡಲ್ಗಳ್ಳರ ಹಾವಳಿಯಿರುವ ಪ್ರದೇಶವೆಂದು ಗುರುತಿಸಿದ್ದು, ಇದರಿಂದ ವಿಮೆ ಮೊತ್ತ ದುಬಾರಿಯಾಗುತ್ತಿದೆ. ಹೀಗಾಗಿ ಈ ಪ್ರದೇಶದ ಮೂಲಕ ನಡೆಯುವ ಎಲ್ಲ ವಾಣಿಜ್ಯ ವಹಿವಾಟಿನ ಮೇಲೆ ದುಷ್ಪರಿಣಾಮವಾಗಿದೆ ಎಂದು ನೌಕಾಪಡೆಯ ಸಹಾಯಕ ಮುಖ್ಯಸ್ಥರಾದ ರೇರ್ ಅಡ್ಮಿರಲ್ ಮೊಂಟಿ ಖನ್ನಾ ಹೇಳಿದರು.<br /> <br /> ಸರಕು ಸಾಗಣೆ ಹಡಗುಗಳಲ್ಲಿ ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ನಿಯೋಜಿಸುವ ಕುರಿತು ಶೀಘ್ರವೇ ತೀರ್ಮಾನ ಹೊರಹೊಮ್ಮುವ ನಿರೀಕ್ಷೆ ಇದೆ ಎಂದೂ ತಿಳಿಸಿದ್ದಾರೆ.<br /> <br /> ಕೇಪ್ಟೌನ್ನಲ್ಲಿ ನಾಲ್ಕು ದಿನಗಳ ಕಾಲ ನಡೆದ ಸಮಾವೇಶದಲ್ಲಿ ಹಿಂದೂ ಮಹಾಸಾಗರ ವಲಯದ 35 ರಾಷ್ಟ್ರಗಳು ಹಾಗೂ ಈ ವ್ಯಾಪ್ತಿಗೆ ಹೊರತಾದ ಜರ್ಮನಿ, ಬ್ರೆಜಿಲ್, ಇಟಲಿ ಮತ್ತು ಚಿಲಿ ಭಾಗವಹಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>