<p>ನವದೆಹಲಿ (ಪಿಟಿಐ): ಇಂಡೋನೇಷ್ಯಾದ ಉತ್ತರ ಸುಮಾತ್ರಾ ಸಮೀಪ ಪಶ್ಚಿಮ ಕರಾವಳಿಯಾಚೆ ಕಡಲಗರ್ಭದಲ್ಲಿ ರಿಕ್ಟರ್ ಮಾಪಕದಲ್ಲಿ 8.9 ತೀವ್ರತೆಯ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಹಿಂದೂ ಮಹಾ ಸಾಗರ ಪ್ರದೇಶದ ಯಾವುದೇ ಭಾಗದಲ್ಲಿ ಸುನಾಮಿ ರಕ್ಕಸ ಅಲೆಗಳು ಏಳುವ ಸಾಧ್ಯತೆಗಳು ಇಲ್ಲ ಎಂದು ಭಾರತ ಬುಧವಾರ ಹೇಳಿದೆ.<br /> <br /> ಭೂಕಂಪದ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶಗಳಾದ ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಲ್ಲಿ ಸುನಾಮಿ ಅಲೆ ಅಪ್ಪಳಿಸುವ ಸಾಧ್ಯತೆ ಇದೆ ಎಂಬುದಾಗಿ ಭೂ ವಿಜ್ಞಾನ ಸಚಿವಾಲಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿತ್ತು.<br /> <br /> ನಂತರ ಈ ಎರಡೂ ಸಂಸ್ಥೆಗಳು ಹೊರಡಿಸಿದ ಪ್ರಕಟಣೆಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ರಾಷ್ಟ್ರದ ಬೇರಾವುದೇ ಭಾಗದಲ್ಲಿ ಸುನಾಮಿ ಸಾಧ್ಯತೆಗಳು ಇಲ್ಲ ಎಂದು ಸ್ಪಷ್ಟ ಪಡಿಸಿವೆ.<br /> <br /> ~ಯಾವುದೇ ನಿರ್ದಿಷ್ಟ ಬೆದರಿಕೆ ಇಲ್ಲ. ಕೇವಲ ಗಮನಿಸುವ ಹಾಗೂ ಎಚ್ಚರಿಕೆಯಿಂದ ಇರುವ ಕೆಲಸವನ್ನು ಮಾತ್ರ ನಿರ್ವಹಿಸುತ್ತಿದ್ದೇವೆ. ಹಿಂದೂ ಮಹಾಸಾಗರದಲ್ಲಿ ಯಾವುದೇ ಸುನಾಮಿ ಅಲೆಗಳು ಏಳುವ ಸಾಧ್ಯತೆಗಳು ಇಲ್ಲ~ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ ಡಿ ಎಂ ಎ) ಉಪಾಧ್ಯಕ್ಷ ಶಶಿಧರ ರೆಡ್ಡಿ ಪಿಟಿಐಗೆ ತಿಳಿಸಿದವು.<br /> <br /> ಸುಮಾತ್ರಾ ದ್ವೀಪದಲ್ಲಿ ಸಂಭವಿಸಿದ ಭೂಕಂಪವು ಸಾಮಾನ್ಯವಾಗಿ ಸುನಾಮಿ ಅಲೆಗಳನ್ನು ಸೃಷ್ಟಿಸುವಂತಹ ಮಾದರಿಯ ಭೂಕಂಪವಲ್ಲ ಎಂದು ಅವರು ನುಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಇಂಡೋನೇಷ್ಯಾದ ಉತ್ತರ ಸುಮಾತ್ರಾ ಸಮೀಪ ಪಶ್ಚಿಮ ಕರಾವಳಿಯಾಚೆ ಕಡಲಗರ್ಭದಲ್ಲಿ ರಿಕ್ಟರ್ ಮಾಪಕದಲ್ಲಿ 8.9 ತೀವ್ರತೆಯ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಹಿಂದೂ ಮಹಾ ಸಾಗರ ಪ್ರದೇಶದ ಯಾವುದೇ ಭಾಗದಲ್ಲಿ ಸುನಾಮಿ ರಕ್ಕಸ ಅಲೆಗಳು ಏಳುವ ಸಾಧ್ಯತೆಗಳು ಇಲ್ಲ ಎಂದು ಭಾರತ ಬುಧವಾರ ಹೇಳಿದೆ.<br /> <br /> ಭೂಕಂಪದ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶಗಳಾದ ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಲ್ಲಿ ಸುನಾಮಿ ಅಲೆ ಅಪ್ಪಳಿಸುವ ಸಾಧ್ಯತೆ ಇದೆ ಎಂಬುದಾಗಿ ಭೂ ವಿಜ್ಞಾನ ಸಚಿವಾಲಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿತ್ತು.<br /> <br /> ನಂತರ ಈ ಎರಡೂ ಸಂಸ್ಥೆಗಳು ಹೊರಡಿಸಿದ ಪ್ರಕಟಣೆಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ರಾಷ್ಟ್ರದ ಬೇರಾವುದೇ ಭಾಗದಲ್ಲಿ ಸುನಾಮಿ ಸಾಧ್ಯತೆಗಳು ಇಲ್ಲ ಎಂದು ಸ್ಪಷ್ಟ ಪಡಿಸಿವೆ.<br /> <br /> ~ಯಾವುದೇ ನಿರ್ದಿಷ್ಟ ಬೆದರಿಕೆ ಇಲ್ಲ. ಕೇವಲ ಗಮನಿಸುವ ಹಾಗೂ ಎಚ್ಚರಿಕೆಯಿಂದ ಇರುವ ಕೆಲಸವನ್ನು ಮಾತ್ರ ನಿರ್ವಹಿಸುತ್ತಿದ್ದೇವೆ. ಹಿಂದೂ ಮಹಾಸಾಗರದಲ್ಲಿ ಯಾವುದೇ ಸುನಾಮಿ ಅಲೆಗಳು ಏಳುವ ಸಾಧ್ಯತೆಗಳು ಇಲ್ಲ~ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ ಡಿ ಎಂ ಎ) ಉಪಾಧ್ಯಕ್ಷ ಶಶಿಧರ ರೆಡ್ಡಿ ಪಿಟಿಐಗೆ ತಿಳಿಸಿದವು.<br /> <br /> ಸುಮಾತ್ರಾ ದ್ವೀಪದಲ್ಲಿ ಸಂಭವಿಸಿದ ಭೂಕಂಪವು ಸಾಮಾನ್ಯವಾಗಿ ಸುನಾಮಿ ಅಲೆಗಳನ್ನು ಸೃಷ್ಟಿಸುವಂತಹ ಮಾದರಿಯ ಭೂಕಂಪವಲ್ಲ ಎಂದು ಅವರು ನುಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>