<p><strong>ಉಪ್ಪಿನಂಗಡಿ: </strong>ಪಟ್ಟಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವ ಮುಗಿದು ಹೋಗುವ ಸಮಯದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ, ಪರಸ್ಪರ ಕಲ್ಲು ತೂರಾಟ ನಡೆದು ಸಬ್ ಇನ್ಸ್ಪೆಕ್ಟರ್ ಸಹಿತ ಐವರು ಗಾಯಗೊಂಡಿದ್ದಾರೆ. <br /> <br /> ಎರಡೂ ಗುಂಪುಗಳಿಂದ ಕಲ್ಲು ತೂರಾಟ ನಡೆದಿದ್ದು, ಸುಬ್ರಹ್ಮಣ್ಯ ಸಬ್ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ಅವರ ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಉಳಿದಂತೆ ಗಣೇಶ್, ಸುರೇಶ್, ಕೇಶವ, ಮುಸ್ತಫಾ ಎಂಬುವವರು ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.<br /> <br /> ಸಮಾಜೋತ್ಸವ ಮುಗಿದು ಹೋಗುತ್ತಿದ್ದಾಗ ಒಂದು ಗುಂಪು ಮಸೀದಿ ಬಳಿ ತಲುಪಿದಾಗ ಘೋಷಣೆ ಕೂಗಲಾರಂಭಿಸಿತು. ಇದರಿಂದ ಕ್ರೋಧಗೊಂಡ ಇನ್ನೊಂದು ಗುಂಪು ವಿರುದ್ಧ ಘೋಷಣೆ ಕೂಗಲಾರಂಭಿಸಿತು. <br /> <br /> ಅಷ್ಟರಲ್ಲಿ ಘರ್ಷಣೆ ಆರಂಭವಾಗಿ ಉಪ್ಪಿನಂಗಡಿ ಪೇಟೆಯ ತುಂಬ ಎರಡೂ ಧರ್ಮದ ಜನ ಜಮಾಯಿಸತೊಡಗಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಪೊಲೀಸರು ಲಾಠಿ ಪ್ರಹಾರ ಮಾಡಿ ಜನರನ್ನು ಚದುರಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ: </strong>ಪಟ್ಟಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವ ಮುಗಿದು ಹೋಗುವ ಸಮಯದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ, ಪರಸ್ಪರ ಕಲ್ಲು ತೂರಾಟ ನಡೆದು ಸಬ್ ಇನ್ಸ್ಪೆಕ್ಟರ್ ಸಹಿತ ಐವರು ಗಾಯಗೊಂಡಿದ್ದಾರೆ. <br /> <br /> ಎರಡೂ ಗುಂಪುಗಳಿಂದ ಕಲ್ಲು ತೂರಾಟ ನಡೆದಿದ್ದು, ಸುಬ್ರಹ್ಮಣ್ಯ ಸಬ್ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ಅವರ ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಉಳಿದಂತೆ ಗಣೇಶ್, ಸುರೇಶ್, ಕೇಶವ, ಮುಸ್ತಫಾ ಎಂಬುವವರು ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.<br /> <br /> ಸಮಾಜೋತ್ಸವ ಮುಗಿದು ಹೋಗುತ್ತಿದ್ದಾಗ ಒಂದು ಗುಂಪು ಮಸೀದಿ ಬಳಿ ತಲುಪಿದಾಗ ಘೋಷಣೆ ಕೂಗಲಾರಂಭಿಸಿತು. ಇದರಿಂದ ಕ್ರೋಧಗೊಂಡ ಇನ್ನೊಂದು ಗುಂಪು ವಿರುದ್ಧ ಘೋಷಣೆ ಕೂಗಲಾರಂಭಿಸಿತು. <br /> <br /> ಅಷ್ಟರಲ್ಲಿ ಘರ್ಷಣೆ ಆರಂಭವಾಗಿ ಉಪ್ಪಿನಂಗಡಿ ಪೇಟೆಯ ತುಂಬ ಎರಡೂ ಧರ್ಮದ ಜನ ಜಮಾಯಿಸತೊಡಗಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಪೊಲೀಸರು ಲಾಠಿ ಪ್ರಹಾರ ಮಾಡಿ ಜನರನ್ನು ಚದುರಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>