<p><strong>ನವದೆಹಲಿ (ಪಿಟಿಐ): </strong>ಬಜೆಟ್ನ್ಲ್ಲಲಿನ ತೆರಿಗೆ ಹೆಚ್ಚಳ ಪ್ರಸ್ತಾವ ವಿರೋಧಿಸಿ ಚಿನ್ನಾಭರಣ ವರ್ತಕರು ನಡೆಸುತ್ತಿರುವ ಪ್ರತಿಭಟನೆಯು ಸೋಮವಾರ ಹಿಂಸೆಗೆ ತಿರುಗಿದ ಘಟನೆ ನಡೆದಿದೆ.ಮುಂಬೈನಲ್ಲಿ ವರ್ತಕರು ಪೊಲೀಸರ ಜತೆ ಸಂಘರ್ಷಕ್ಕೆ ಇಳಿದರೆ, ಗಾಜಿಯಾಬಾದ್ನಲ್ಲಿ ಹಲವಾರು ರೈಲಗಳ ಸಂಚಾರಕ್ಕೆ ಅಡ್ಡಿಪಡಿಸಿದರು.<br /> <br /> ಮುಂಬೈನ ಝವೇರಿ ಬಜಾರ್, ನವದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವರ್ತಕರು ಕಳೆದ ಮೂರು ವಾರಗಳಿಂದ ಧರಣಿ ನಡೆಸುತ್ತಿದ್ದಾರೆ. ಮುಂಬೈನಲ್ಲಿ ಪೊಲೀಸರು ವರ್ತಕರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು.<br /> <br /> ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಚಿನ್ನದ ಆಮದು ಮೇಲಿನ ಸುಂಕವನ್ನು ಶೇ 2ರಿಂದ ಶೇ 4ಕ್ಕೆ ಏರಿಸಲು ಮತ್ತು ಬ್ರಾಂಡೆಡ್ರಹಿತ ಚಿನ್ನಾಭರಣಗಳ ಮೇಲೆ ಅಬಕಾರಿ ಸುಂಕ ವಿಧಿಸಲು ಉದ್ದೇಶಿಸಿರುವುದಕ್ಕೆ ವರ್ತಕರು ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.<br /> <br /> ದೇಶದಲ್ಲಿನ ಬಹುತೇಕ ಚಿನ್ನಾಭರಣ ಮಾರಾಟ ಸಂಸ್ಥೆಗಳು ಕೂಡ ವಹಿವಾಟು ಸ್ಥಗಿತಗೊಳಿಸಿ, ಚಳವಳಿಗೆ ಬೆಂಬಲ ಸೂಚಿಸಿವೆ.ಕೇಂದ್ರ ಸರ್ಕಾರವು ತೆರಿಗೆ ಹೆಚ್ಚಳ ಪ್ರಸ್ತಾವ ಕೈಬಿಡುವ ನಿರ್ಧಾರ ಪ್ರಕಟಿಸುವವರೆಗೆ ಈ ಪ್ರತಿಭಟನೆ ಮುಂದುವರೆಯಲಿದೆ ಎಂದು ಅಖಿಲ ಭಾರತ್ ಸರಾಫ್ ಸಂಘದ ಅಧ್ಯಕ್ಷ ಶೀಲ್ಚಂದ್ ಜೈನ್ ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಬಜೆಟ್ನ್ಲ್ಲಲಿನ ತೆರಿಗೆ ಹೆಚ್ಚಳ ಪ್ರಸ್ತಾವ ವಿರೋಧಿಸಿ ಚಿನ್ನಾಭರಣ ವರ್ತಕರು ನಡೆಸುತ್ತಿರುವ ಪ್ರತಿಭಟನೆಯು ಸೋಮವಾರ ಹಿಂಸೆಗೆ ತಿರುಗಿದ ಘಟನೆ ನಡೆದಿದೆ.ಮುಂಬೈನಲ್ಲಿ ವರ್ತಕರು ಪೊಲೀಸರ ಜತೆ ಸಂಘರ್ಷಕ್ಕೆ ಇಳಿದರೆ, ಗಾಜಿಯಾಬಾದ್ನಲ್ಲಿ ಹಲವಾರು ರೈಲಗಳ ಸಂಚಾರಕ್ಕೆ ಅಡ್ಡಿಪಡಿಸಿದರು.<br /> <br /> ಮುಂಬೈನ ಝವೇರಿ ಬಜಾರ್, ನವದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವರ್ತಕರು ಕಳೆದ ಮೂರು ವಾರಗಳಿಂದ ಧರಣಿ ನಡೆಸುತ್ತಿದ್ದಾರೆ. ಮುಂಬೈನಲ್ಲಿ ಪೊಲೀಸರು ವರ್ತಕರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು.<br /> <br /> ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಚಿನ್ನದ ಆಮದು ಮೇಲಿನ ಸುಂಕವನ್ನು ಶೇ 2ರಿಂದ ಶೇ 4ಕ್ಕೆ ಏರಿಸಲು ಮತ್ತು ಬ್ರಾಂಡೆಡ್ರಹಿತ ಚಿನ್ನಾಭರಣಗಳ ಮೇಲೆ ಅಬಕಾರಿ ಸುಂಕ ವಿಧಿಸಲು ಉದ್ದೇಶಿಸಿರುವುದಕ್ಕೆ ವರ್ತಕರು ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.<br /> <br /> ದೇಶದಲ್ಲಿನ ಬಹುತೇಕ ಚಿನ್ನಾಭರಣ ಮಾರಾಟ ಸಂಸ್ಥೆಗಳು ಕೂಡ ವಹಿವಾಟು ಸ್ಥಗಿತಗೊಳಿಸಿ, ಚಳವಳಿಗೆ ಬೆಂಬಲ ಸೂಚಿಸಿವೆ.ಕೇಂದ್ರ ಸರ್ಕಾರವು ತೆರಿಗೆ ಹೆಚ್ಚಳ ಪ್ರಸ್ತಾವ ಕೈಬಿಡುವ ನಿರ್ಧಾರ ಪ್ರಕಟಿಸುವವರೆಗೆ ಈ ಪ್ರತಿಭಟನೆ ಮುಂದುವರೆಯಲಿದೆ ಎಂದು ಅಖಿಲ ಭಾರತ್ ಸರಾಫ್ ಸಂಘದ ಅಧ್ಯಕ್ಷ ಶೀಲ್ಚಂದ್ ಜೈನ್ ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>