<p><strong>ಶಿಡ್ಲಘಟ್ಟ:</strong> ಮಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 120 ಮಂದಿ ಹಿರಿಯ ನಾಗರಿಕರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗುತ್ತಿದ್ದು, ಅದನ್ನು ಬಳಸಿಕೊಂಡು ಸರ್ಕಾರದಿಂದ 13 ವಿಧದ ಸೌಲಭ್ಯಗಳನ್ನು ಪಡೆಯಬಹುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಶಾಂತ್ ತಿಳಿಸಿದರು.<br /> <br /> ತಾಲ್ಲೂಕಿನ ಮಳ್ಳೂರು ಪಂಚಾಯಿತಿ ಕಾರ್ಯಾಲಯದಲ್ಲಿ ಶುಕ್ರವಾರ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ಹಲ ಸೌಲಭ್ಯಗಳನ್ನು ನೀಡುತ್ತಿದೆ. ಗ್ರಾಮ ಪಂಚಾಯಿತಿಯು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನುಮೋದಿತವಾದ ಸಂಸ್ಥೆಯ ಸಹಕಾರದಿಂದ ಹಿರಿಯ ನಾಗರಿಕರಿಗೆ ಕಚೇರಿಗಳನ್ನು ತಿರುಗುವ ತೊಂದರೆ ತಪ್ಪಿಸಿ ಗುರುತಿನ ಚೀಟಿ ವಿತರಿಸುವ ಕಾರ್ಯವನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.<br /> <br /> ಅಂಗವಿಕಲರ ಆರೋಗ್ಯಾಧಿಕಾರಿ ಡಾ.ಶಾಂತಾ ಅರಸ್, ಜಂಗಮಕೋಟೆ ಹೋಬಳಿ ಗ್ರೇಡ್ 2 ತಹಶೀಲ್ದಾರ್ ವೆಂಕಟೇಶ್, ಶಶಾಂಕ್, ಮಧು, ರಾಮರೆಡ್ಡಿ, ಮಂಜುನಾಥ್, ಮುನಿಮಲ್ಲಪ್ಪ, ಮುನಿಶಾಮರೆಡ್ಡಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಮಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 120 ಮಂದಿ ಹಿರಿಯ ನಾಗರಿಕರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗುತ್ತಿದ್ದು, ಅದನ್ನು ಬಳಸಿಕೊಂಡು ಸರ್ಕಾರದಿಂದ 13 ವಿಧದ ಸೌಲಭ್ಯಗಳನ್ನು ಪಡೆಯಬಹುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಶಾಂತ್ ತಿಳಿಸಿದರು.<br /> <br /> ತಾಲ್ಲೂಕಿನ ಮಳ್ಳೂರು ಪಂಚಾಯಿತಿ ಕಾರ್ಯಾಲಯದಲ್ಲಿ ಶುಕ್ರವಾರ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ಹಲ ಸೌಲಭ್ಯಗಳನ್ನು ನೀಡುತ್ತಿದೆ. ಗ್ರಾಮ ಪಂಚಾಯಿತಿಯು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನುಮೋದಿತವಾದ ಸಂಸ್ಥೆಯ ಸಹಕಾರದಿಂದ ಹಿರಿಯ ನಾಗರಿಕರಿಗೆ ಕಚೇರಿಗಳನ್ನು ತಿರುಗುವ ತೊಂದರೆ ತಪ್ಪಿಸಿ ಗುರುತಿನ ಚೀಟಿ ವಿತರಿಸುವ ಕಾರ್ಯವನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.<br /> <br /> ಅಂಗವಿಕಲರ ಆರೋಗ್ಯಾಧಿಕಾರಿ ಡಾ.ಶಾಂತಾ ಅರಸ್, ಜಂಗಮಕೋಟೆ ಹೋಬಳಿ ಗ್ರೇಡ್ 2 ತಹಶೀಲ್ದಾರ್ ವೆಂಕಟೇಶ್, ಶಶಾಂಕ್, ಮಧು, ರಾಮರೆಡ್ಡಿ, ಮಂಜುನಾಥ್, ಮುನಿಮಲ್ಲಪ್ಪ, ಮುನಿಶಾಮರೆಡ್ಡಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>