<p><strong>ಮುಂಬೈ: </strong>ಕನ್ನಡದ ಹಿರಿಯ ಸಾಹಿತಿ ಯಶವಂತ ಚಿತ್ತಾಲ ಅವರು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಶನಿವಾರ ನಿಧನ ಹೊಂದಿದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.<br /> <br /> ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ನಲವತ್ತು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ತಮ್ಮ ಕಥೆ ಕಾದಂಬರಿಗಳ ಮೂಲಕ ಕನ್ನಡದ ಸಾಹಿತ್ಯದ ಸಾಧ್ಯತೆಗಳನ್ನು ವಿಸ್ತರಿಸಿದ್ದು, ಯಶವಂತ ಚಿತ್ತಾಲರ ಪ್ರಮುಖ ಸಾಧನೆ.</p>.<p>ಕೊಂಕಣಿ – ಮರಾಠಿಯನ್ನು ಮನೆಮಾತಾಗಿ ಹೊಂದಿದ್ದ ಅವರು ತಮ್ಮ ಅಭಿವ್ಯಕ್ತಿ ಭಾಷೆಯನ್ನಾಗಿ ಆರಿಸಿಕೊಂಡಿದ್ದು ಕನ್ನಡವನ್ನು. ಉತ್ತರಕನ್ನಡ ಜಿಲ್ಲೆಯ ಹನೇಹಳ್ಳಿ ಚಿತ್ತಾಲರ ಹುಟ್ಟೂರು. ವಿಠೋಬಾ ಮತ್ತು ರುಕ್ಮಿಣಿ ಅವರ ತಂದೆ, ತಾಯಿ. ದಿವಂಗತ ಕವಿ ಗಂಗಾಧರ ಚಿತ್ತಾಲರು ಅವರ ಸಹೋದರ.<br /> <br /> ಯಶವಂತ ಚಿತ್ತಾಲರ ಪ್ರಾಥಮಿಕ ವಿದ್ಯಾಭ್ಯಾಸ ನಡೆದಿದ್ದು ಹನೇಹಳ್ಳಿ ಮತ್ತು ಕುಮಟಾದಲ್ಲಿ. ಮುಂಬೈ ಮತ್ತು ಅಮೆರಿಕದಲ್ಲಿ ಉನ್ನತ ವ್ಯಾಸಂಗ ಪಡೆದ ಅವರು ರಾಸಾಯನಿಕ ತಂತ್ರಜ್ಞರಾಗಿ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.<br /> <br /> ವೃತ್ತಿಯಲ್ಲಿನ ಅನುಭವಗಳನ್ನು, ಆಧುನಿಕ ಕೈಗಾರಿಕಾ ಜಗತ್ತಿನ ಕುರಿತ ತಮ್ಮ ವಿಶೇಷ ಒಳನೋಟಗಳನ್ನು ಸಾಹಿತ್ಯ ಕೃತಿಗಳನ್ನು ಮೂಡಿಸಿದ್ದಾರೆ. ಹನೇಹಳ್ಳಿ ಮತ್ತು ಮುಂಬೈ ಅವರ ಸಾಹಿತ್ಯ ಸೃಷ್ಟಿಯ ಪ್ರಮುಖ ದ್ರವ್ಯಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಕನ್ನಡದ ಹಿರಿಯ ಸಾಹಿತಿ ಯಶವಂತ ಚಿತ್ತಾಲ ಅವರು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಶನಿವಾರ ನಿಧನ ಹೊಂದಿದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.<br /> <br /> ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ನಲವತ್ತು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ತಮ್ಮ ಕಥೆ ಕಾದಂಬರಿಗಳ ಮೂಲಕ ಕನ್ನಡದ ಸಾಹಿತ್ಯದ ಸಾಧ್ಯತೆಗಳನ್ನು ವಿಸ್ತರಿಸಿದ್ದು, ಯಶವಂತ ಚಿತ್ತಾಲರ ಪ್ರಮುಖ ಸಾಧನೆ.</p>.<p>ಕೊಂಕಣಿ – ಮರಾಠಿಯನ್ನು ಮನೆಮಾತಾಗಿ ಹೊಂದಿದ್ದ ಅವರು ತಮ್ಮ ಅಭಿವ್ಯಕ್ತಿ ಭಾಷೆಯನ್ನಾಗಿ ಆರಿಸಿಕೊಂಡಿದ್ದು ಕನ್ನಡವನ್ನು. ಉತ್ತರಕನ್ನಡ ಜಿಲ್ಲೆಯ ಹನೇಹಳ್ಳಿ ಚಿತ್ತಾಲರ ಹುಟ್ಟೂರು. ವಿಠೋಬಾ ಮತ್ತು ರುಕ್ಮಿಣಿ ಅವರ ತಂದೆ, ತಾಯಿ. ದಿವಂಗತ ಕವಿ ಗಂಗಾಧರ ಚಿತ್ತಾಲರು ಅವರ ಸಹೋದರ.<br /> <br /> ಯಶವಂತ ಚಿತ್ತಾಲರ ಪ್ರಾಥಮಿಕ ವಿದ್ಯಾಭ್ಯಾಸ ನಡೆದಿದ್ದು ಹನೇಹಳ್ಳಿ ಮತ್ತು ಕುಮಟಾದಲ್ಲಿ. ಮುಂಬೈ ಮತ್ತು ಅಮೆರಿಕದಲ್ಲಿ ಉನ್ನತ ವ್ಯಾಸಂಗ ಪಡೆದ ಅವರು ರಾಸಾಯನಿಕ ತಂತ್ರಜ್ಞರಾಗಿ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.<br /> <br /> ವೃತ್ತಿಯಲ್ಲಿನ ಅನುಭವಗಳನ್ನು, ಆಧುನಿಕ ಕೈಗಾರಿಕಾ ಜಗತ್ತಿನ ಕುರಿತ ತಮ್ಮ ವಿಶೇಷ ಒಳನೋಟಗಳನ್ನು ಸಾಹಿತ್ಯ ಕೃತಿಗಳನ್ನು ಮೂಡಿಸಿದ್ದಾರೆ. ಹನೇಹಳ್ಳಿ ಮತ್ತು ಮುಂಬೈ ಅವರ ಸಾಹಿತ್ಯ ಸೃಷ್ಟಿಯ ಪ್ರಮುಖ ದ್ರವ್ಯಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>