<p><span style="font-size: 26px;"><strong>ಚನ್ನರಾಯಪಟ್ಟಣ</strong>: ಜಮ್ಮುವಿನ ಸಿಯಾಚಿನ್ ಪ್ರದೇಶದಲ್ಲಿ ಮೃತಪಟ್ಟ ಹವಾಲ್ದಾರ್ ಸಿ.ಯೋಗಾನಂದ ಅಂತ್ಯಕ್ರಿಯೆ ಜೂನ್ 11 (ಮಂಗಳವಾರ) ತಾಲ್ಲೂಕಿನ ಅಗ್ರಹಾರ ಗ್ರಾಮದಲ್ಲಿ ನಡೆಯಲಿದೆ.</span><br /> <br /> ಜಮ್ಮು ಪ್ರದೇಶದಿಂದ ಬೆಂಗಳೂರಿಗೆ ಸೋಮವಾರ ರಾತ್ರಿ 7.30ಕ್ಕೆ ವಿಮಾನದಲ್ಲಿ ಪಾರ್ಥಿವ ಶರೀರ ತರಲಾಯಿತು. ಮಂಗಳವಾರ ಮುಂಜಾನೆ ಬೆಂಗಳೂರಿನಿಂದ ಪಾರ್ಥಿವ ಶರೀರ ಹೊತ್ತ ವಾಹನ ಬೆಳಿಗ್ಗೆ 7 ಗಂಟೆಗೆ ಪಟ್ಟಣಕ್ಕೆ ಆಗಮಿಸಲಿದೆ. ಆ ನಂತರ ಹಾಸನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪಾರ್ಥಿವ ಶರೀರ ಇರಿಸಲಾಗುವುದು.<br /> <br /> ಶಾಂತಿಗ್ರಾಮ, ದೊಡ್ಡಕರಡೆ ಗ್ರಾಮದ ಮೂಲಕ ಪಾರ್ಥಿವ ಶರೀರವನ್ನು ಸ್ವಗ್ರಾಮ ಅಗ್ರಹಾರಕ್ಕೆ ತಂದು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು.<br /> <br /> ಈ ಬಗ್ಗೆ ಸೇನೆಯ ಅಧಿಕಾರಿಗಳು ಕುಟುಂಬದ ಸದಸ್ಯರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಚನ್ನರಾಯಪಟ್ಟಣ</strong>: ಜಮ್ಮುವಿನ ಸಿಯಾಚಿನ್ ಪ್ರದೇಶದಲ್ಲಿ ಮೃತಪಟ್ಟ ಹವಾಲ್ದಾರ್ ಸಿ.ಯೋಗಾನಂದ ಅಂತ್ಯಕ್ರಿಯೆ ಜೂನ್ 11 (ಮಂಗಳವಾರ) ತಾಲ್ಲೂಕಿನ ಅಗ್ರಹಾರ ಗ್ರಾಮದಲ್ಲಿ ನಡೆಯಲಿದೆ.</span><br /> <br /> ಜಮ್ಮು ಪ್ರದೇಶದಿಂದ ಬೆಂಗಳೂರಿಗೆ ಸೋಮವಾರ ರಾತ್ರಿ 7.30ಕ್ಕೆ ವಿಮಾನದಲ್ಲಿ ಪಾರ್ಥಿವ ಶರೀರ ತರಲಾಯಿತು. ಮಂಗಳವಾರ ಮುಂಜಾನೆ ಬೆಂಗಳೂರಿನಿಂದ ಪಾರ್ಥಿವ ಶರೀರ ಹೊತ್ತ ವಾಹನ ಬೆಳಿಗ್ಗೆ 7 ಗಂಟೆಗೆ ಪಟ್ಟಣಕ್ಕೆ ಆಗಮಿಸಲಿದೆ. ಆ ನಂತರ ಹಾಸನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪಾರ್ಥಿವ ಶರೀರ ಇರಿಸಲಾಗುವುದು.<br /> <br /> ಶಾಂತಿಗ್ರಾಮ, ದೊಡ್ಡಕರಡೆ ಗ್ರಾಮದ ಮೂಲಕ ಪಾರ್ಥಿವ ಶರೀರವನ್ನು ಸ್ವಗ್ರಾಮ ಅಗ್ರಹಾರಕ್ಕೆ ತಂದು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು.<br /> <br /> ಈ ಬಗ್ಗೆ ಸೇನೆಯ ಅಧಿಕಾರಿಗಳು ಕುಟುಂಬದ ಸದಸ್ಯರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>