<p><strong>ಹುಣಸೂರು :</strong> ತಾಲೂಕಿನ ಕೊತ್ತೇಗಾಲ ಗ್ರಾ.ಪಂ ಅಧ್ಯಕ್ಷ ಜಯರಾಮೇಗೌಡ ಪರಿಶಿಷ್ಟ ಜಾತಿಯ ಪಂಚಾಯಿತಿ ಸದಸ್ಯನಿಗೆ ಜೀವ ಬೆದರಿಕೆವೊಡ್ಡಿರುವುದನ್ನು ಆದಿವಾಸಿ ಗಿರಿಜನ ಅಭಿವೃದ್ಧಿ ಸಂಘದ ಸದಸ್ಯರು ಮತ್ತು ಸ್ತ್ರಿ ಶಕ್ತಿ ಮಹಿಳಾ ಸಂಘಟನೆಗಳ ಸದಸ್ಯರು ವಿರೋಧಿಸಿ ಗುರುವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.<br /> <br /> ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಆದಿವಾಸಿ ಗಿರಿಜನ ಅಭಿವೃದ್ಧಿ ಸಂಘದ ಅಧ್ಯಕ್ಷ ವೆಂಕಟೇಶ್, ಪಂಚಾಯಿತಿ ಸಭೆಯಲ್ಲಿ ಸದಸ್ಯ ಚಂದ್ರಶೇಖರ್ ಗ್ರಾ.ಪಂ. ಸಭೆಯಲ್ಲಿ ಅಧ್ಯಕ್ಷರನ್ನು ಗಿರಿಜನಾಭಿವೃದ್ಧಿಗೆ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಸಮರ್ಪಕವಾಗಿ ಸಮಾಜದವರಿಗೆ ವಿತರಿಸದ ಬಗ್ಗೆ ಪ್ರಶ್ನಿಸಿದರು. ಈ ಸಂಬಂಧ ಪಂಚಾಯಿತಿ ಅಧ್ಯಕ್ಷ ಜಯರಾಮೇಗೌಡ, ಸಭೆಯಲ್ಲಿ ಸದಸ್ಯರಿಗೆ ಅವಾಚ್ಯ ಪದ ಬಳಸಿ ಜಾತಿ ನಿಂದನೆ ಮತ್ತು ಜೀವಬೆದರಿಕೆ ಹಾಕಿದ್ದಾರೆ ಎಂದರು .<br /> <br /> ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗ್ರಾ.ಪಂ ಸದಸ್ಯ ಚಂದ್ರಶೇಖರ್ ದೂರು ಸಲ್ಲಿಸಿದ್ದರೂ ಪೊಲೀಸ್ ಈ ವರಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದರು.ಸಂವಿಧಾನ ಬದ್ದವಾಗಿ ಗಿರಿಜನರಿಗೆ ಸರ್ಕಾರ ನೀಡುವ ಸವಲತ್ತುಗಳನ್ನು ಸಮರ್ಪಕವಾಗಿ ವಿತರಿಸದ ಬಗ್ಗೆ ಜನಪ್ರತಿನಿಧಿ ಸಭೆಯಲ್ಲಿ ವಿಚಾರ ಪ್ರಸ್ಥಾಪಿಸುವುದೇ ತಪ್ಪು ಎನ್ನುವ ಕೊತ್ತೆಗಾಲ ಪಂಚಾಯಿತಿ ಅಧ್ಯಕ್ಷ ಜಯರಾಮೇಗೌಡರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ಪ್ರತಿಭಟನೆಯಲ್ಲಿ ಆದಿವಾಸಿ ಗಿರಿಜನ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಎಂ.ಮಂಜುನಾಥ್,ಕೃಷ್ಣಯ್ಯ, ರಾಜು.ಎಸ್.ಶಶಿಕುಮಾರ್, ಲೋಕೇಶ್, ಶೇಖರ್, ಚಂದ್ರು, ಆದಿವಾಸಿ ಸ್ವಸಹಾಯ ಸಂಘದ ಅಧ್ಯಕ್ಷೆ ನಾಗಮ್ಮ, ಮಂಜುಳ, ಅಣ್ಣಮ್ಮ, ಮಹದೇವಮ್ಮ, ಭಾಗ್ಯಮ್ಮ ಮತ್ತು ಇತರರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು :</strong> ತಾಲೂಕಿನ ಕೊತ್ತೇಗಾಲ ಗ್ರಾ.ಪಂ ಅಧ್ಯಕ್ಷ ಜಯರಾಮೇಗೌಡ ಪರಿಶಿಷ್ಟ ಜಾತಿಯ ಪಂಚಾಯಿತಿ ಸದಸ್ಯನಿಗೆ ಜೀವ ಬೆದರಿಕೆವೊಡ್ಡಿರುವುದನ್ನು ಆದಿವಾಸಿ ಗಿರಿಜನ ಅಭಿವೃದ್ಧಿ ಸಂಘದ ಸದಸ್ಯರು ಮತ್ತು ಸ್ತ್ರಿ ಶಕ್ತಿ ಮಹಿಳಾ ಸಂಘಟನೆಗಳ ಸದಸ್ಯರು ವಿರೋಧಿಸಿ ಗುರುವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.<br /> <br /> ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಆದಿವಾಸಿ ಗಿರಿಜನ ಅಭಿವೃದ್ಧಿ ಸಂಘದ ಅಧ್ಯಕ್ಷ ವೆಂಕಟೇಶ್, ಪಂಚಾಯಿತಿ ಸಭೆಯಲ್ಲಿ ಸದಸ್ಯ ಚಂದ್ರಶೇಖರ್ ಗ್ರಾ.ಪಂ. ಸಭೆಯಲ್ಲಿ ಅಧ್ಯಕ್ಷರನ್ನು ಗಿರಿಜನಾಭಿವೃದ್ಧಿಗೆ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಸಮರ್ಪಕವಾಗಿ ಸಮಾಜದವರಿಗೆ ವಿತರಿಸದ ಬಗ್ಗೆ ಪ್ರಶ್ನಿಸಿದರು. ಈ ಸಂಬಂಧ ಪಂಚಾಯಿತಿ ಅಧ್ಯಕ್ಷ ಜಯರಾಮೇಗೌಡ, ಸಭೆಯಲ್ಲಿ ಸದಸ್ಯರಿಗೆ ಅವಾಚ್ಯ ಪದ ಬಳಸಿ ಜಾತಿ ನಿಂದನೆ ಮತ್ತು ಜೀವಬೆದರಿಕೆ ಹಾಕಿದ್ದಾರೆ ಎಂದರು .<br /> <br /> ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗ್ರಾ.ಪಂ ಸದಸ್ಯ ಚಂದ್ರಶೇಖರ್ ದೂರು ಸಲ್ಲಿಸಿದ್ದರೂ ಪೊಲೀಸ್ ಈ ವರಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದರು.ಸಂವಿಧಾನ ಬದ್ದವಾಗಿ ಗಿರಿಜನರಿಗೆ ಸರ್ಕಾರ ನೀಡುವ ಸವಲತ್ತುಗಳನ್ನು ಸಮರ್ಪಕವಾಗಿ ವಿತರಿಸದ ಬಗ್ಗೆ ಜನಪ್ರತಿನಿಧಿ ಸಭೆಯಲ್ಲಿ ವಿಚಾರ ಪ್ರಸ್ಥಾಪಿಸುವುದೇ ತಪ್ಪು ಎನ್ನುವ ಕೊತ್ತೆಗಾಲ ಪಂಚಾಯಿತಿ ಅಧ್ಯಕ್ಷ ಜಯರಾಮೇಗೌಡರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ಪ್ರತಿಭಟನೆಯಲ್ಲಿ ಆದಿವಾಸಿ ಗಿರಿಜನ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಎಂ.ಮಂಜುನಾಥ್,ಕೃಷ್ಣಯ್ಯ, ರಾಜು.ಎಸ್.ಶಶಿಕುಮಾರ್, ಲೋಕೇಶ್, ಶೇಖರ್, ಚಂದ್ರು, ಆದಿವಾಸಿ ಸ್ವಸಹಾಯ ಸಂಘದ ಅಧ್ಯಕ್ಷೆ ನಾಗಮ್ಮ, ಮಂಜುಳ, ಅಣ್ಣಮ್ಮ, ಮಹದೇವಮ್ಮ, ಭಾಗ್ಯಮ್ಮ ಮತ್ತು ಇತರರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>