<p><strong>ಕೊಪ್ಪಳ: </strong>ಈಗಾಗಲೇ ಮಂಜೂರಾಗಿರುವಂತೆ ಇಲ್ಲಿನ ರೈಲ್ವೆ ಗೇಟ್ ನಂ. 62ರಲ್ಲಿಯೇ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ಬುಧವಾರ ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ವಲಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.<br /> <br /> ರೈಲ್ವೆ ಗೇಟ್ ನಂ. 64ರಲ್ಲಿ ಈ ಸೇತುವೆ ನಿರ್ಮಿಸಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಈಚೆಗೆ ಕೆಲ ಸಂಘಟನೆಗಳು ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ಸೇತುವೆ ಎಲ್ಲಿ ನಿರ್ಮಿಸಬೇಕು ಎಂಬ ವಿಷಯ ಕಗ್ಗಂಟಾಗಿತ್ತು. <br /> ಒಂದು ಹಂತದಲ್ಲಿ ರಾಜಕೀಯವಾಗಿ ಪ್ರತಿಷ್ಠೆಯ ವಿಷಯವಾಗಲಿದ್ದ ಈ ವಿಷಯಕ್ಕೆ ಇಂದು ನಡೆದ ಸಭೆಯಲ್ಲಿ ತೀರ್ಮಾನ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ.<br /> <br /> ದೂರವಾಣಿ ಮೂಲಕ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಸಂಸದ ಶಿವರಾಮಗೌಡ, ರೈಲ್ವೆ ಗೇಟ್ ನಂ. 62ರಲ್ಲಿ ರೈಲ್ವೆ ಮೇಲ್ಸೇತುವೆ (ಆರ್ಒಬಿ) ನಿರ್ಮಿಸುವ ಜೊತೆಗೆ ಉಳಿದ ಗೇಟ್ಗಳಲ್ಲಿ ಈಗಿರುವ ಮಾನವ ಚಾಲಿತ ಲೆವೆಲ್ ಕ್ರಾಸಿಂಗ್ ವ್ಯವಸ್ಥೆಯನ್ನೇ ಮುಂದುವರಿಸಿಕೊಂಡು ಹೋಗಲು ಸಭೆ ತೀರ್ಮಾನಿಸಿತು ಎಂದು ಹೇಳಿದರು.<br /> <br /> ಆರ್ಒಬಿ ನಿರ್ಮಿಸಿದಾಗ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದಾಟಿ ರಾಷ್ಟ್ರೀಯ ಹೆದ್ದಾರಿ 63ರ ವರೆಗೆ ಫ್ಲೈಓವರ್ ನಿರ್ಮಿಸಬೇಕಾಗುತ್ತದೆ. ಈ ಉದ್ದೇಶಕ್ಕೆ ಬೇಕಾಗುವ ಜಾಗೆಗಾಗಿ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡುವಂತೆಯೂ ಸಭೆಯಲ್ಲಿ ಸೂಚಿಸಲಾಗಿದೆ ಎಂದರು.<br /> <br /> ಅಲ್ಲದೇ, ಆರ್ಒಬಿ ನಿರ್ಮಾಣ ಈಗಾಗಲೇ 6.53 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಈಗ ಕಾಮಗಾರಿ ವೆಚ್ಚದಲ್ಲಿ ಹೆಚ್ಚಳವಾಗಲಿರುವ ಹಿನ್ನೆಲೆಯಲ್ಲಿ ಕಾಮಗಾರಿಗೆ ತಗಲುವ ರಿಷ್ಕೃತ ವೆಚ್ಚವನ್ನು ಅಂದಾಜಿಸುವಂತೆಯೂ ರೈಲ್ವೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.<br /> <br /> ಜಿಲ್ಲೆ ಹಾಗೂ ಕೊಪ್ಪಳ ಲೋಕಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ರೈಲ್ವೆ ಕಾಮಗಾರಿಗಳು, ಒದಗಿಸಬೇಕಾದ ಸೌಲಭ್ಯಗಳ ಕುರಿತಂತೆ ಸಹ ಸಭೆಯಲ್ಲಿ ಚರ್ಚಿಸಲಾಯಿತು ಎಂದರು.ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಈಗಾಗಲೇ ಮಂಜೂರಾಗಿರುವಂತೆ ಇಲ್ಲಿನ ರೈಲ್ವೆ ಗೇಟ್ ನಂ. 62ರಲ್ಲಿಯೇ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ಬುಧವಾರ ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ವಲಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.<br /> <br /> ರೈಲ್ವೆ ಗೇಟ್ ನಂ. 64ರಲ್ಲಿ ಈ ಸೇತುವೆ ನಿರ್ಮಿಸಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಈಚೆಗೆ ಕೆಲ ಸಂಘಟನೆಗಳು ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ಸೇತುವೆ ಎಲ್ಲಿ ನಿರ್ಮಿಸಬೇಕು ಎಂಬ ವಿಷಯ ಕಗ್ಗಂಟಾಗಿತ್ತು. <br /> ಒಂದು ಹಂತದಲ್ಲಿ ರಾಜಕೀಯವಾಗಿ ಪ್ರತಿಷ್ಠೆಯ ವಿಷಯವಾಗಲಿದ್ದ ಈ ವಿಷಯಕ್ಕೆ ಇಂದು ನಡೆದ ಸಭೆಯಲ್ಲಿ ತೀರ್ಮಾನ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ.<br /> <br /> ದೂರವಾಣಿ ಮೂಲಕ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಸಂಸದ ಶಿವರಾಮಗೌಡ, ರೈಲ್ವೆ ಗೇಟ್ ನಂ. 62ರಲ್ಲಿ ರೈಲ್ವೆ ಮೇಲ್ಸೇತುವೆ (ಆರ್ಒಬಿ) ನಿರ್ಮಿಸುವ ಜೊತೆಗೆ ಉಳಿದ ಗೇಟ್ಗಳಲ್ಲಿ ಈಗಿರುವ ಮಾನವ ಚಾಲಿತ ಲೆವೆಲ್ ಕ್ರಾಸಿಂಗ್ ವ್ಯವಸ್ಥೆಯನ್ನೇ ಮುಂದುವರಿಸಿಕೊಂಡು ಹೋಗಲು ಸಭೆ ತೀರ್ಮಾನಿಸಿತು ಎಂದು ಹೇಳಿದರು.<br /> <br /> ಆರ್ಒಬಿ ನಿರ್ಮಿಸಿದಾಗ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದಾಟಿ ರಾಷ್ಟ್ರೀಯ ಹೆದ್ದಾರಿ 63ರ ವರೆಗೆ ಫ್ಲೈಓವರ್ ನಿರ್ಮಿಸಬೇಕಾಗುತ್ತದೆ. ಈ ಉದ್ದೇಶಕ್ಕೆ ಬೇಕಾಗುವ ಜಾಗೆಗಾಗಿ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡುವಂತೆಯೂ ಸಭೆಯಲ್ಲಿ ಸೂಚಿಸಲಾಗಿದೆ ಎಂದರು.<br /> <br /> ಅಲ್ಲದೇ, ಆರ್ಒಬಿ ನಿರ್ಮಾಣ ಈಗಾಗಲೇ 6.53 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಈಗ ಕಾಮಗಾರಿ ವೆಚ್ಚದಲ್ಲಿ ಹೆಚ್ಚಳವಾಗಲಿರುವ ಹಿನ್ನೆಲೆಯಲ್ಲಿ ಕಾಮಗಾರಿಗೆ ತಗಲುವ ರಿಷ್ಕೃತ ವೆಚ್ಚವನ್ನು ಅಂದಾಜಿಸುವಂತೆಯೂ ರೈಲ್ವೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.<br /> <br /> ಜಿಲ್ಲೆ ಹಾಗೂ ಕೊಪ್ಪಳ ಲೋಕಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ರೈಲ್ವೆ ಕಾಮಗಾರಿಗಳು, ಒದಗಿಸಬೇಕಾದ ಸೌಲಭ್ಯಗಳ ಕುರಿತಂತೆ ಸಹ ಸಭೆಯಲ್ಲಿ ಚರ್ಚಿಸಲಾಯಿತು ಎಂದರು.ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>