<p><strong>ವಿಜಾಪುರ:</strong> ಹುಬ್ಬಳ್ಳಿಯ ಎನ್ಜಿಇಎಫ್ನಲ್ಲಿ ಕರ್ನಾಟಕ ವಿದ್ಯುತ್ ಕಾರ್ಖಾನೆಯ (ಕವಿಕಾ) ವಿದ್ಯುತ್ ಪರಿವರ್ತಕಗಳ ರಿಪೇರಿ ಘಟಕ ಆರಂಭಿಸಲಾಗುವುದು ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.<br /> <br /> ಅಕ್ರಮ ಪಂಪ್ಸೆಟ್ಗಳ ಹಾವಳಿಯಿಂದ ವಿದ್ಯುತ್ ಪರಿವರ್ತಕಗಳು ಹೆಚ್ಚಾಗಿ ಹಾಳಾಗುತ್ತಿವೆ. ವಿಫಲಗೊಂಡ ವಿದ್ಯುತ್ ಪರಿವರ್ತಕಗಳ ಗುಣಮಟ್ಟದ ರಿಪೇರಿಗಾಗಿ ಕರ್ನಾಟಕ ವಿದ್ಯುತ್ ಕಾರ್ಖಾನೆಯ ಶಾಖೆ ಈ ಭಾಗದಲ್ಲಿ ಸ್ಥಾಪನೆಯಾಗಲೇಬೇಕಿದೆ ಎಂದು ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> `ಎನ್ಜಿಇಎಫ್ನ 60 ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗುತ್ತಿದ್ದು, ಇನ್ನು 2-3 ತಿಂಗಳಲ್ಲಿ ಅಲ್ಲಿ ಕವಿಕಾ ಘಟಕ ಆರಂಭಗೊಳ್ಳಲಿದೆ. ಭಾನುವಾರ (ಇದೇ 11ರಂದು) ನಾನು ಆ ಕಾರ್ಖಾನೆಗೆ ಭೇಟಿ ನೀಡಿ ಅಲ್ಲಿಯವರೊಂದಿಗೆ ಸಮಾಲೋಚನೆ ನಡೆಸಲಿದ್ದೇನೆ~ ಎಂದು ಹೇಳಿದರು.<br /> <br /> `ಎನ್ಜಿಇಎಫ್ ಈಗ ಹಾನಿಯಲ್ಲಿದೆ. ಅಲ್ಲಿ ಕವಿಕಾ ಘಟಕ ಸ್ಥಾಪಿಸುವುದರಿಂದ ಅದು ಆರ್ಥಿಕವಾಗಿ ಚೇತರಿಸಿಕೊಳ್ಳಲಿದ್ದು, ಉತ್ತರ ಕರ್ನಾಟಕದ ರೈತರಿಗೂ ಸಕಾಲದಲ್ಲಿ ಗುಣಮಟ್ಟದ ವಿದ್ಯುತ್ ಪರಿವರ್ತಕಗಳು ಲಭ್ಯವಾಗಲಿವೆ ~ ಎಂದು ತಿಳಿಸಿದರು.<br /> <br /> `ವಿದ್ಯುತ್ ಪರಿವರ್ತಕಗಳ ನಿರ್ವಹಣೆಯೇ ದೊಡ್ಡ ಹೊರೆಯಾಗಿದೆ. ಅಕ್ರಮ ಪಂಪ್ಸೆಟ್ಗಳು ಪ್ರತಿ ದಿನವೂ ಹೆಚ್ಚುತ್ತಲೇ ಇವೆ. ಇದರಿಂದ ರೈತರು ಹಾಗೂ ಸರ್ಕಾರಕ್ಕೂ ಹಾನಿಯಾಗುತ್ತಿದೆ ಎಂದರು.<br /> <br /> ಅಕ್ರಮ ಪಂಪ್ಸೆಟ್ ಹಾವಳಿ ನಿಯಂತ್ರಣಕ್ಕಾಗಿ ಕೇವಲ 25 ಕೆ.ವಿ. ಸಾಮರ್ಥ್ಯದ ವಿದ್ಯುತ್ ಪರಿವರ್ತಕಗಳನ್ನಷ್ಟೇ ಅಳವಡಿಸಲು ನಿರ್ಧರಿಸಿದ್ದೇವೆ~ ಎಂದು ಶೋಭಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ:</strong> ಹುಬ್ಬಳ್ಳಿಯ ಎನ್ಜಿಇಎಫ್ನಲ್ಲಿ ಕರ್ನಾಟಕ ವಿದ್ಯುತ್ ಕಾರ್ಖಾನೆಯ (ಕವಿಕಾ) ವಿದ್ಯುತ್ ಪರಿವರ್ತಕಗಳ ರಿಪೇರಿ ಘಟಕ ಆರಂಭಿಸಲಾಗುವುದು ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.<br /> <br /> ಅಕ್ರಮ ಪಂಪ್ಸೆಟ್ಗಳ ಹಾವಳಿಯಿಂದ ವಿದ್ಯುತ್ ಪರಿವರ್ತಕಗಳು ಹೆಚ್ಚಾಗಿ ಹಾಳಾಗುತ್ತಿವೆ. ವಿಫಲಗೊಂಡ ವಿದ್ಯುತ್ ಪರಿವರ್ತಕಗಳ ಗುಣಮಟ್ಟದ ರಿಪೇರಿಗಾಗಿ ಕರ್ನಾಟಕ ವಿದ್ಯುತ್ ಕಾರ್ಖಾನೆಯ ಶಾಖೆ ಈ ಭಾಗದಲ್ಲಿ ಸ್ಥಾಪನೆಯಾಗಲೇಬೇಕಿದೆ ಎಂದು ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> `ಎನ್ಜಿಇಎಫ್ನ 60 ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗುತ್ತಿದ್ದು, ಇನ್ನು 2-3 ತಿಂಗಳಲ್ಲಿ ಅಲ್ಲಿ ಕವಿಕಾ ಘಟಕ ಆರಂಭಗೊಳ್ಳಲಿದೆ. ಭಾನುವಾರ (ಇದೇ 11ರಂದು) ನಾನು ಆ ಕಾರ್ಖಾನೆಗೆ ಭೇಟಿ ನೀಡಿ ಅಲ್ಲಿಯವರೊಂದಿಗೆ ಸಮಾಲೋಚನೆ ನಡೆಸಲಿದ್ದೇನೆ~ ಎಂದು ಹೇಳಿದರು.<br /> <br /> `ಎನ್ಜಿಇಎಫ್ ಈಗ ಹಾನಿಯಲ್ಲಿದೆ. ಅಲ್ಲಿ ಕವಿಕಾ ಘಟಕ ಸ್ಥಾಪಿಸುವುದರಿಂದ ಅದು ಆರ್ಥಿಕವಾಗಿ ಚೇತರಿಸಿಕೊಳ್ಳಲಿದ್ದು, ಉತ್ತರ ಕರ್ನಾಟಕದ ರೈತರಿಗೂ ಸಕಾಲದಲ್ಲಿ ಗುಣಮಟ್ಟದ ವಿದ್ಯುತ್ ಪರಿವರ್ತಕಗಳು ಲಭ್ಯವಾಗಲಿವೆ ~ ಎಂದು ತಿಳಿಸಿದರು.<br /> <br /> `ವಿದ್ಯುತ್ ಪರಿವರ್ತಕಗಳ ನಿರ್ವಹಣೆಯೇ ದೊಡ್ಡ ಹೊರೆಯಾಗಿದೆ. ಅಕ್ರಮ ಪಂಪ್ಸೆಟ್ಗಳು ಪ್ರತಿ ದಿನವೂ ಹೆಚ್ಚುತ್ತಲೇ ಇವೆ. ಇದರಿಂದ ರೈತರು ಹಾಗೂ ಸರ್ಕಾರಕ್ಕೂ ಹಾನಿಯಾಗುತ್ತಿದೆ ಎಂದರು.<br /> <br /> ಅಕ್ರಮ ಪಂಪ್ಸೆಟ್ ಹಾವಳಿ ನಿಯಂತ್ರಣಕ್ಕಾಗಿ ಕೇವಲ 25 ಕೆ.ವಿ. ಸಾಮರ್ಥ್ಯದ ವಿದ್ಯುತ್ ಪರಿವರ್ತಕಗಳನ್ನಷ್ಟೇ ಅಳವಡಿಸಲು ನಿರ್ಧರಿಸಿದ್ದೇವೆ~ ಎಂದು ಶೋಭಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>