<p><strong>ಹುಬ್ಬಳ್ಳಿ:</strong> ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನಾ ಸಮಾರಂಭ ಇದೇ 11ರಂದು ಮಧ್ಯಾಹ್ನ 3 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.<br /> <br /> ಈ ಸಂಬಂಧ ನಗರದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ನಂತರ ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಮುಖ್ಯಮಂತ್ರಿಯಾಗಿದ್ದ ಮೂರೂವರೆ ವರ್ಷಗಳ ಅವಧಿಯಲ್ಲಿ ಯಡಿಯೂರಪ್ಪ ಅವರು ಮಾಡಿರುವ ಸಾಧನೆಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಹೇಳಿದರು. <br /> <br /> `ಬೆಂಗಳೂರಿನಲ್ಲಿ ನಡೆದ ಯಡಿಯೂರಪ್ಪ ಅವರ 70ನೇ ಜನ್ಮದಿನದ ಸಮಾರಂಭದಲ್ಲಿ ಉತ್ತರ ಕರ್ನಾಟಕದ ಎಲ್ಲ ಕಾರ್ಯಕರ್ತರಿಗೆ ಭಾಗವಹಿಸಲು ಆಗಿರಲಿಲ್ಲ. ಇದಕ್ಕಾಗಿ ಈ ಭಾಗದ ಎಲ್ಲ ಜಿಲ್ಲೆಗಳಿಂದ ಸುಮಾರು 2 ಲಕ್ಷ ಕಾರ್ಯಕರ್ತರು 11ರಂದು ನಡೆಯುವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. <br /> <br /> ಮುಖ್ಯಮಂತ್ರಿ ಸದಾನಂದಗೌಡ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರನ್ನು ಆಹ್ವಾನಿಸಲಾಗಿದೆ~ ಎಂದು ಅವರು ಹೇಳಿದರು. <br /> <br /> <strong>`ಸಚಿವರು ಅಶ್ಲೀಲ ಚಿತ್ರ ವೀಕ್ಷಿಸಿಲ್ಲ~<br /> ಹುಬ್ಬಳ್ಳಿ:</strong> `ವಿಧಾನಸಭೆಯಲ್ಲಿ ಮೂವರು ಸಚಿವರು ಅಶ್ಲೀಲ ಚಿತ್ರವನ್ನು ವೀಕ್ಷಿಸಿಲ್ಲ. ಸದನದ ಸಿಸಿ ಟಿವಿ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದನ್ನು ವೀಕ್ಷಿಸಲಾಗಿ, ಅವರು ಮೊಬೈಲ್ ಆಪರೇಟ್ ಮಾಡಿದ್ದಾರೆ ಅಷ್ಟೆ~ ಎಂದು ಪ್ರಕರಣದ ತನಿಖೆಗಾಗಿ ನೇಮಿಸಲಾಗಿರುವ ಸದನ ಸಮಿತಿ ಅಧ್ಯಕ್ಷ ಶ್ರೀಶೈಲಪ್ಪ ಬಿದರೂರ ಹೇಳಿದರು. <br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅಭಿನಂದಿಸುವ ಸಮಾರಂಭಕ್ಕೆ ಸಂಬಂಧಿಸಿ ನಗರದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ನಂತರ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. <br /> <br /> `ವಿಧಾನಸಭೆಯಲ್ಲಿ ಅನೇಕ ಸಚಿವರು ಹಾಗೂ ಶಾಸಕರು ಮೊಬೈಲ್ ಆಪರೇಟ್ ಮಾಡುತ್ತಾರೆ. ಆದರೆ ಆ ಮೊಬೈಲಿನಲ್ಲಿ ಏನಿದೆ, ಯಾವ ಚಿತ್ರವಿದೆ ಎಂದು ಗಮನಿಸುವುದಿಲ್ಲ. ಈ ಸಂಬಂಧ ತನಿಖೆ ನಡೆಯುತ್ತಿರುವುದರಿಂದ ಹೆಚ್ಚು ಹೇಳಲಾರೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನಾ ಸಮಾರಂಭ ಇದೇ 11ರಂದು ಮಧ್ಯಾಹ್ನ 3 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.<br /> <br /> ಈ ಸಂಬಂಧ ನಗರದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ನಂತರ ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಮುಖ್ಯಮಂತ್ರಿಯಾಗಿದ್ದ ಮೂರೂವರೆ ವರ್ಷಗಳ ಅವಧಿಯಲ್ಲಿ ಯಡಿಯೂರಪ್ಪ ಅವರು ಮಾಡಿರುವ ಸಾಧನೆಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಹೇಳಿದರು. <br /> <br /> `ಬೆಂಗಳೂರಿನಲ್ಲಿ ನಡೆದ ಯಡಿಯೂರಪ್ಪ ಅವರ 70ನೇ ಜನ್ಮದಿನದ ಸಮಾರಂಭದಲ್ಲಿ ಉತ್ತರ ಕರ್ನಾಟಕದ ಎಲ್ಲ ಕಾರ್ಯಕರ್ತರಿಗೆ ಭಾಗವಹಿಸಲು ಆಗಿರಲಿಲ್ಲ. ಇದಕ್ಕಾಗಿ ಈ ಭಾಗದ ಎಲ್ಲ ಜಿಲ್ಲೆಗಳಿಂದ ಸುಮಾರು 2 ಲಕ್ಷ ಕಾರ್ಯಕರ್ತರು 11ರಂದು ನಡೆಯುವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. <br /> <br /> ಮುಖ್ಯಮಂತ್ರಿ ಸದಾನಂದಗೌಡ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರನ್ನು ಆಹ್ವಾನಿಸಲಾಗಿದೆ~ ಎಂದು ಅವರು ಹೇಳಿದರು. <br /> <br /> <strong>`ಸಚಿವರು ಅಶ್ಲೀಲ ಚಿತ್ರ ವೀಕ್ಷಿಸಿಲ್ಲ~<br /> ಹುಬ್ಬಳ್ಳಿ:</strong> `ವಿಧಾನಸಭೆಯಲ್ಲಿ ಮೂವರು ಸಚಿವರು ಅಶ್ಲೀಲ ಚಿತ್ರವನ್ನು ವೀಕ್ಷಿಸಿಲ್ಲ. ಸದನದ ಸಿಸಿ ಟಿವಿ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದನ್ನು ವೀಕ್ಷಿಸಲಾಗಿ, ಅವರು ಮೊಬೈಲ್ ಆಪರೇಟ್ ಮಾಡಿದ್ದಾರೆ ಅಷ್ಟೆ~ ಎಂದು ಪ್ರಕರಣದ ತನಿಖೆಗಾಗಿ ನೇಮಿಸಲಾಗಿರುವ ಸದನ ಸಮಿತಿ ಅಧ್ಯಕ್ಷ ಶ್ರೀಶೈಲಪ್ಪ ಬಿದರೂರ ಹೇಳಿದರು. <br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅಭಿನಂದಿಸುವ ಸಮಾರಂಭಕ್ಕೆ ಸಂಬಂಧಿಸಿ ನಗರದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ನಂತರ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. <br /> <br /> `ವಿಧಾನಸಭೆಯಲ್ಲಿ ಅನೇಕ ಸಚಿವರು ಹಾಗೂ ಶಾಸಕರು ಮೊಬೈಲ್ ಆಪರೇಟ್ ಮಾಡುತ್ತಾರೆ. ಆದರೆ ಆ ಮೊಬೈಲಿನಲ್ಲಿ ಏನಿದೆ, ಯಾವ ಚಿತ್ರವಿದೆ ಎಂದು ಗಮನಿಸುವುದಿಲ್ಲ. ಈ ಸಂಬಂಧ ತನಿಖೆ ನಡೆಯುತ್ತಿರುವುದರಿಂದ ಹೆಚ್ಚು ಹೇಳಲಾರೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>