<p>ಬಾಗಲಕೋಟೆ: ನಗರದ ಶ್ರೀರಂಗನಾಥ ಅಂತರರಾಷ್ಟ್ರೀಯ ಶಾಲೆಯಲ್ಲಿ ಇದೇ 7ರಂದು ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ `ಅತ್ಯುತ್ತಮ ಶಿಕ್ಷಕ~ ಪ್ರಶಸ್ತಿ ವಿಜೇತ ಹುಲಿಕಲ್ ನಟರಾಜ ಅವರು `ಪವಾಡಗಳ ಸದೃಶ್ಯ~ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.<br /> <br /> ಮೂಢನಂಬಿಕೆ ವಿರುದ್ಧ ಶಾಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ನಟರಾಜ್ ಅವರು, ಪವಾಡ ಮಾಡುವ ಬಗೆಯನ್ನು ಬಯಲುಗೊಳಿಸಲಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲ ಡಾ. ರಘುವೀರ ಜಿ.ವಿ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಪವಾಡ ಸದೃಶ್ಯ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರು ಭಾಗವಹಿಸಲು ಮುಕ್ತ ಅವಕಾಶ ಇರುವುದಾಗಿ ತಿಳಿಸಿದ ಅವರು, ಇದೇ ಸಂದರ್ಭದಲ್ಲಿ ಹುಲಿಕಲ್ ನಟರಾಜ ಅವರ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.<br /> <br /> ಸ್ಕೂಲ್ ಫಿಲ್ಮಂ ಪ್ರದರ್ಶನ: ಶ್ರೀರಂಗನಾಥ ಅಂತರರಾಷ್ಟ್ರೀಯ ಶಾಲೆಯಲ್ಲಿ ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ತಿಂಗಳ ಪ್ರಥಮ ಶನಿವಾರ `ಸ್ಕೂಲ್ ಫಿಲ್ಮಂ~ ಅನ್ನು ಪ್ರದರ್ಶನ ಮಾಡುವುದಾಗಿ ತಿಳಿಸಿದರು.<br /> <br /> ಬೆಂಗಳೂರಿನ ಎಜು ಮೀಡಿಯಾ ಸಂಸ್ಥೆ ಶೈಕ್ಷಣಿಕ ಉದ್ದೇಶಕ್ಕಾಗಿಯೇ ತಯಾರಿಸಿರುವ ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಸ್ಕೂಲ್ ಫಿಲ್ಮಂಗಳನ್ನು ಪ್ರದರ್ಶಿಸಲಾಗುತ್ತದೆ ಎಂದರು.<br /> <br /> ಮಕ್ಕಳಿಗೆ ಚಿತ್ರಗಳ ಮೂಲಕ ನೈತಿಕ ಪಾಠದ ಜೊತೆಗೆ ಸಾಮಾಜಿಕ ಅರಿವು ಮೂಡಿಸಲಾಗುವುದು ಎಂದು ಹೇಳಿದರು. ಶಾಲೆಯ ಆಡಳಿತಾಧಿಕಾರಿ ಶ್ರೀರಂಗ ಖಾಸನೀಸ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ನಗರದ ಶ್ರೀರಂಗನಾಥ ಅಂತರರಾಷ್ಟ್ರೀಯ ಶಾಲೆಯಲ್ಲಿ ಇದೇ 7ರಂದು ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ `ಅತ್ಯುತ್ತಮ ಶಿಕ್ಷಕ~ ಪ್ರಶಸ್ತಿ ವಿಜೇತ ಹುಲಿಕಲ್ ನಟರಾಜ ಅವರು `ಪವಾಡಗಳ ಸದೃಶ್ಯ~ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.<br /> <br /> ಮೂಢನಂಬಿಕೆ ವಿರುದ್ಧ ಶಾಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ನಟರಾಜ್ ಅವರು, ಪವಾಡ ಮಾಡುವ ಬಗೆಯನ್ನು ಬಯಲುಗೊಳಿಸಲಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲ ಡಾ. ರಘುವೀರ ಜಿ.ವಿ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಪವಾಡ ಸದೃಶ್ಯ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರು ಭಾಗವಹಿಸಲು ಮುಕ್ತ ಅವಕಾಶ ಇರುವುದಾಗಿ ತಿಳಿಸಿದ ಅವರು, ಇದೇ ಸಂದರ್ಭದಲ್ಲಿ ಹುಲಿಕಲ್ ನಟರಾಜ ಅವರ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.<br /> <br /> ಸ್ಕೂಲ್ ಫಿಲ್ಮಂ ಪ್ರದರ್ಶನ: ಶ್ರೀರಂಗನಾಥ ಅಂತರರಾಷ್ಟ್ರೀಯ ಶಾಲೆಯಲ್ಲಿ ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ತಿಂಗಳ ಪ್ರಥಮ ಶನಿವಾರ `ಸ್ಕೂಲ್ ಫಿಲ್ಮಂ~ ಅನ್ನು ಪ್ರದರ್ಶನ ಮಾಡುವುದಾಗಿ ತಿಳಿಸಿದರು.<br /> <br /> ಬೆಂಗಳೂರಿನ ಎಜು ಮೀಡಿಯಾ ಸಂಸ್ಥೆ ಶೈಕ್ಷಣಿಕ ಉದ್ದೇಶಕ್ಕಾಗಿಯೇ ತಯಾರಿಸಿರುವ ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಸ್ಕೂಲ್ ಫಿಲ್ಮಂಗಳನ್ನು ಪ್ರದರ್ಶಿಸಲಾಗುತ್ತದೆ ಎಂದರು.<br /> <br /> ಮಕ್ಕಳಿಗೆ ಚಿತ್ರಗಳ ಮೂಲಕ ನೈತಿಕ ಪಾಠದ ಜೊತೆಗೆ ಸಾಮಾಜಿಕ ಅರಿವು ಮೂಡಿಸಲಾಗುವುದು ಎಂದು ಹೇಳಿದರು. ಶಾಲೆಯ ಆಡಳಿತಾಧಿಕಾರಿ ಶ್ರೀರಂಗ ಖಾಸನೀಸ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>