<p><strong>ಹುಬ್ಬಳ್ಳಿ: </strong>`ಹೂಗಾರ ಸಮಾಜದ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಸಮಾಜದ ರಾಜ್ಯ ಮಟ್ಟದ ಪ್ರಥಮ ಸಮಾವೇಶವನ್ನು ಹುಬ್ಬಳ್ಳಿಯಲ್ಲಿ ಭಾನುವಾರ ಏರ್ಪಡಿಸಲಾಗಿದೆ~ ಎಂದು ಸಮಾವೇಶದ ಸ್ವಾಗತ ಸಮಿತಿ ಅಧ್ಯಕ್ಷ ಲೋಚನೇಶ ಹೂಗಾರ ಶನಿವಾರ ಇಲ್ಲಿ ಹೇಳಿದರು.<br /> <br /> `ಹೂಗಾರ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಬೇಕು. ಸಮುದಾಯದವರನ್ನು ಕುಶಲಕರ್ಮಿಗಳೆಂದು ಪರಿಗಣಿಸಿ ಸರ್ಕಾರಿ ಸವಲತ್ತು ನೀಡಬೇಕು. ನಿರುದ್ಯೋಗ ಸಮಸ್ಯೆ ನಿವಾರಿಸಬೇಕು. ಸಮುದಾಯ ಭವನ, ಶಿಕ್ಷಣ ಸಂಸ್ಥೆ ಆರಂಭಕ್ಕೆ ಹುಬ್ಬಳ್ಳಿ-ಧಾರವಾಡ ಅಥವಾ ಬೆಳಗಾವಿಯಲ್ಲಿ ಜಮೀನು ನೀಡಬೇಕು ಎಂಬ ಬೇಡಿಕೆಗಳ ಈಡೇರಿಕೆಗೆ ಸಮಾವೇಶದಲ್ಲಿ ಒಕ್ಕೊರಲಿನಿಂದ ಒತ್ತಾಯಿಸಲಾಗುವುದು~ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> `ಸಮಾವೇಶಕ್ಕೆ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿವೆ. ಗುರುವ, ಜೀರ, ಪೂಜಾರ, ಕುಲಾರಿ, ತಾಂಬೋಳಿ ಎಂದೆಲ್ಲಾ ಕರೆಸಿಕೊಳ್ಳುವ ಹೂಗಾರ ಸಮುದಾಯದ 15 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶಕ್ಕೆ ಮುನ್ನ ನಗರದ ಬಸವವನದಿಂದ ನೆಹರೂ ಮೈದಾನದವರೆಗೆ ಮೆರವಣಿಗೆ ನಡೆಯಲಿದೆ. <br /> <br /> ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶರಣ ಮಾದಯ್ಯನವರ ಭಾವಚಿತ್ರವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನಾವರಣಗೊಳಿಸುವರು~ ಎಂದು ಹೇಳಿದರು.<br /> <strong><br /> ರೈಲು ವೇಳೆ ಬದಲು<br /> ಹುಬ್ಬಳ್ಳಿ:</strong> ಶಿವಮೊಗ್ಗ ಟೌನ್- ಬೀರೂರು- ಬೆಂಗಳೂರು ಪ್ಯಾಸೆಂಜರ್ ರೈಲು (ಸಂಖ್ಯೆ 56918) ಸಂಚಾರ ಸಮಯ ಇದೇ ತಿಂಗಳ 5ರಿಂದ ಬದಲಾಗಲಿದೆ. ಈ ರೈಲು ಶಿವಮೊಗ್ಗದಿಂದ ಮಧ್ಯಾಹ್ನ 1.50ಕ್ಕೆ ಬದಲಾಗಿ 2.45ಕ್ಕೆ ಹೊರಟು 4.25ಕ್ಕೆ ಬೀರೂರು ನಿಲ್ದಾಣ ತಲುಪಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>`ಹೂಗಾರ ಸಮಾಜದ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಸಮಾಜದ ರಾಜ್ಯ ಮಟ್ಟದ ಪ್ರಥಮ ಸಮಾವೇಶವನ್ನು ಹುಬ್ಬಳ್ಳಿಯಲ್ಲಿ ಭಾನುವಾರ ಏರ್ಪಡಿಸಲಾಗಿದೆ~ ಎಂದು ಸಮಾವೇಶದ ಸ್ವಾಗತ ಸಮಿತಿ ಅಧ್ಯಕ್ಷ ಲೋಚನೇಶ ಹೂಗಾರ ಶನಿವಾರ ಇಲ್ಲಿ ಹೇಳಿದರು.<br /> <br /> `ಹೂಗಾರ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಬೇಕು. ಸಮುದಾಯದವರನ್ನು ಕುಶಲಕರ್ಮಿಗಳೆಂದು ಪರಿಗಣಿಸಿ ಸರ್ಕಾರಿ ಸವಲತ್ತು ನೀಡಬೇಕು. ನಿರುದ್ಯೋಗ ಸಮಸ್ಯೆ ನಿವಾರಿಸಬೇಕು. ಸಮುದಾಯ ಭವನ, ಶಿಕ್ಷಣ ಸಂಸ್ಥೆ ಆರಂಭಕ್ಕೆ ಹುಬ್ಬಳ್ಳಿ-ಧಾರವಾಡ ಅಥವಾ ಬೆಳಗಾವಿಯಲ್ಲಿ ಜಮೀನು ನೀಡಬೇಕು ಎಂಬ ಬೇಡಿಕೆಗಳ ಈಡೇರಿಕೆಗೆ ಸಮಾವೇಶದಲ್ಲಿ ಒಕ್ಕೊರಲಿನಿಂದ ಒತ್ತಾಯಿಸಲಾಗುವುದು~ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> `ಸಮಾವೇಶಕ್ಕೆ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿವೆ. ಗುರುವ, ಜೀರ, ಪೂಜಾರ, ಕುಲಾರಿ, ತಾಂಬೋಳಿ ಎಂದೆಲ್ಲಾ ಕರೆಸಿಕೊಳ್ಳುವ ಹೂಗಾರ ಸಮುದಾಯದ 15 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶಕ್ಕೆ ಮುನ್ನ ನಗರದ ಬಸವವನದಿಂದ ನೆಹರೂ ಮೈದಾನದವರೆಗೆ ಮೆರವಣಿಗೆ ನಡೆಯಲಿದೆ. <br /> <br /> ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶರಣ ಮಾದಯ್ಯನವರ ಭಾವಚಿತ್ರವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನಾವರಣಗೊಳಿಸುವರು~ ಎಂದು ಹೇಳಿದರು.<br /> <strong><br /> ರೈಲು ವೇಳೆ ಬದಲು<br /> ಹುಬ್ಬಳ್ಳಿ:</strong> ಶಿವಮೊಗ್ಗ ಟೌನ್- ಬೀರೂರು- ಬೆಂಗಳೂರು ಪ್ಯಾಸೆಂಜರ್ ರೈಲು (ಸಂಖ್ಯೆ 56918) ಸಂಚಾರ ಸಮಯ ಇದೇ ತಿಂಗಳ 5ರಿಂದ ಬದಲಾಗಲಿದೆ. ಈ ರೈಲು ಶಿವಮೊಗ್ಗದಿಂದ ಮಧ್ಯಾಹ್ನ 1.50ಕ್ಕೆ ಬದಲಾಗಿ 2.45ಕ್ಕೆ ಹೊರಟು 4.25ಕ್ಕೆ ಬೀರೂರು ನಿಲ್ದಾಣ ತಲುಪಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>