<p>ಬಾಗೇಪಲ್ಲಿ: ಪಟ್ಟಣದ ಹೊರವಲಯದಲ್ಲಿರುವ ಪರಗೋಡು ಚಿತ್ರಾವತಿ ಬ್ಯಾರೇಜ್ನಲ್ಲಿ ಹೂಳು ತೆಗೆಯುವಂತೆ ಆಗ್ರಹಿಸಿ ಕಳೆದ 49 ದಿನಗಳಿಂದ ನಡೆದ ಧರಣಿಗೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಲಿ ಕೊನೆಗೂ ಮಣಿದಿದೆ. <br /> <br /> ಮಂಡಲಿಯ ಅಧಿಕಾರಿಗಳು ಬುಧವಾರ ಟಿಪ್ಪರ್ ಹಾಗೂ ಹಿಟ್ಯಾಚಿಗಳ ಮೂಲಕ ಹೂಳು ತೆಗೆಸಿದರು. ಚಿತ್ರಾವತಿ ಹೋರಾಟ ಸಮಿತಿ ಸದಸ್ಯರು ಹಮ್ಮಿಕೊಂಡಿರುವ ಅನಿರ್ದಿಷ್ಟ ಧರಣಿಯನ್ನು ಬುಧವಾರ ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.<br /> <br /> ಚಿತ್ರಾವತಿ ಬ್ಯಾರೇಜ್ನಲ್ಲಿ ಹೂಳು ತೆಗೆಯಬೇಕು ಎಂದು ತಾಲ್ಲೂಕಿನ ಪ್ರಗತಿ ಪರ ಹಾಗೂ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ಸಮಿತಿ ಸದಸ್ಯರು ಕಳೆದ 48 ದಿನಗಳಿಂದ ಧರಣಿ, ರಸ್ತೆತಡೆ, ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದಿದ್ದರು. ನ 8- 9ರಂದು ಬಾಗೇಪಲ್ಲಿ ಬಂದ್ಗೆ ಕರೆ ನೀಡಲಾಗಿತ್ತು.<br /> <br /> ಸರ್ಕಾರ, ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಲಿ ಅಧಿಕಾರಿಗಳು ಮಂಗಳವಾರ ಹಾಗೂ ಬುಧವಾರದಂದು ಮುಂದೆ ನಿಂತು ಬ್ಯಾರೇಜ್ನಿಂದ ತೆಗೆಸಿದರು. <br /> <br /> ಸರ್ಕಾರದ ನಮ್ಮ ಮನವಿಗೆ ಸ್ಪಂದಿಸಿರುವುದರಿಂದ ಬಾಗೇಪಲ್ಲಿ ಬಂದ್ ಕರೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಮುಂದಿನ ದಿನಗಳಲ್ಲಿ ಹೂಳು ತೆಗೆಯುವ ಕಾರ್ಯ ಸ್ಥಗಿತಗೊಂಡರೆ ಯಾವುದೇ ಮುನ್ಸೂಚನೆ ಇಲ್ಲದೆ ಪ್ರತಿಭಟನೆ ಹಾಗೂ ಬಂದ್ಗೆ ಕರೆ ನೀಡಲಾಗುವುದು ಎಂದು ಚಿತ್ರಾವತಿ ಹೋರಾಟ ಸಮಿತಿ ಉಪಾಧ್ಯಕ್ಷ ಗೋವರ್ಧನಚಾರಿ ಹೇಳಿದರು.<br /> <br /> ಸರ್ಕಾರ ತಮ್ಮ ಹೋರಾಟಕ್ಕೆ ಗೌರವ ನೀಡಿರುವುದನ್ನು ಸ್ವಾಗತಿಸಿ, ಚಿತ್ರಾವತಿ ಹೋರಾಟ ವೃತ್ತದಲ್ಲಿ ಚಿತ್ರಾವತಿ ಹೋರಾಟ ಸಮಿತಿ ಸದಸ್ಯರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗೇಪಲ್ಲಿ: ಪಟ್ಟಣದ ಹೊರವಲಯದಲ್ಲಿರುವ ಪರಗೋಡು ಚಿತ್ರಾವತಿ ಬ್ಯಾರೇಜ್ನಲ್ಲಿ ಹೂಳು ತೆಗೆಯುವಂತೆ ಆಗ್ರಹಿಸಿ ಕಳೆದ 49 ದಿನಗಳಿಂದ ನಡೆದ ಧರಣಿಗೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಲಿ ಕೊನೆಗೂ ಮಣಿದಿದೆ. <br /> <br /> ಮಂಡಲಿಯ ಅಧಿಕಾರಿಗಳು ಬುಧವಾರ ಟಿಪ್ಪರ್ ಹಾಗೂ ಹಿಟ್ಯಾಚಿಗಳ ಮೂಲಕ ಹೂಳು ತೆಗೆಸಿದರು. ಚಿತ್ರಾವತಿ ಹೋರಾಟ ಸಮಿತಿ ಸದಸ್ಯರು ಹಮ್ಮಿಕೊಂಡಿರುವ ಅನಿರ್ದಿಷ್ಟ ಧರಣಿಯನ್ನು ಬುಧವಾರ ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.<br /> <br /> ಚಿತ್ರಾವತಿ ಬ್ಯಾರೇಜ್ನಲ್ಲಿ ಹೂಳು ತೆಗೆಯಬೇಕು ಎಂದು ತಾಲ್ಲೂಕಿನ ಪ್ರಗತಿ ಪರ ಹಾಗೂ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ಸಮಿತಿ ಸದಸ್ಯರು ಕಳೆದ 48 ದಿನಗಳಿಂದ ಧರಣಿ, ರಸ್ತೆತಡೆ, ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದಿದ್ದರು. ನ 8- 9ರಂದು ಬಾಗೇಪಲ್ಲಿ ಬಂದ್ಗೆ ಕರೆ ನೀಡಲಾಗಿತ್ತು.<br /> <br /> ಸರ್ಕಾರ, ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಲಿ ಅಧಿಕಾರಿಗಳು ಮಂಗಳವಾರ ಹಾಗೂ ಬುಧವಾರದಂದು ಮುಂದೆ ನಿಂತು ಬ್ಯಾರೇಜ್ನಿಂದ ತೆಗೆಸಿದರು. <br /> <br /> ಸರ್ಕಾರದ ನಮ್ಮ ಮನವಿಗೆ ಸ್ಪಂದಿಸಿರುವುದರಿಂದ ಬಾಗೇಪಲ್ಲಿ ಬಂದ್ ಕರೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಮುಂದಿನ ದಿನಗಳಲ್ಲಿ ಹೂಳು ತೆಗೆಯುವ ಕಾರ್ಯ ಸ್ಥಗಿತಗೊಂಡರೆ ಯಾವುದೇ ಮುನ್ಸೂಚನೆ ಇಲ್ಲದೆ ಪ್ರತಿಭಟನೆ ಹಾಗೂ ಬಂದ್ಗೆ ಕರೆ ನೀಡಲಾಗುವುದು ಎಂದು ಚಿತ್ರಾವತಿ ಹೋರಾಟ ಸಮಿತಿ ಉಪಾಧ್ಯಕ್ಷ ಗೋವರ್ಧನಚಾರಿ ಹೇಳಿದರು.<br /> <br /> ಸರ್ಕಾರ ತಮ್ಮ ಹೋರಾಟಕ್ಕೆ ಗೌರವ ನೀಡಿರುವುದನ್ನು ಸ್ವಾಗತಿಸಿ, ಚಿತ್ರಾವತಿ ಹೋರಾಟ ವೃತ್ತದಲ್ಲಿ ಚಿತ್ರಾವತಿ ಹೋರಾಟ ಸಮಿತಿ ಸದಸ್ಯರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>