<p><strong>ಕುಂದಾಪುರ:</strong> ಹೂ ಮಾರಾಟ ಅಂಗಡಿ ಸ್ಥಳಾಂತರ ವಿಷಯದಲ್ಲಿ ಪುರಸಭೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕುಂದಾಪುರ ಹೂ ಮಾರಾಟಗಾರರ ಸಂಘದ ನೇತೃತ್ವದಲ್ಲಿ ಶನಿವಾರ ವಿನೂತನ ರೀತಿಯ ಪ್ರತಿಭಟನೆ ನಡೆಯಿತು. <br /> <br /> ಹೂ ಮಾರುಕಟ್ಟೆಯಿಂದ ಪೊಲೀಸ್ ಠಾಣೆಯವರೆಗೆ ಬ್ಯಾಂಡ್, ವಾದ್ಯಗಳೊಂದಿಗೆ ಸಾಗಿದ ಪ್ರತಿಭಟನಾಕಾರರು ಪುರಸಭೆ ವಿರುದ್ಧ ಘೋಷಣೆ ಕೂಗಿದರು. ಠಾಣಾಧಿಕಾರಿಗೆ ಮನವಿ ಸಲ್ಲಿಸಿ, ಪುರಸಭೆಯವರೆಗೆ ಮೆರವಣಿಗೆಯಲ್ಲಿ ಸಾಗಿದರು. <br /> <br /> `ಸುಂದರ ಕುಂದಾಪುರ~ ಯೋಜನೆ ಅನುಷ್ಠಾನಗೊಳಿಸುವ ಸಲುವಾಗಿ ಪುರಸಭಾ ವ್ಯಾಪ್ತಿಯ ಹೂ ಮಾರಾಟಗಾರರಿಗೆ ಮಾರುಕಟ್ಟೆ ನಿರ್ಮಿಸಿಕೊಡಲು ಪುರಸಭೆ ನಿರ್ಧರಿಸಿತ್ತು. <br /> <br /> ಪಾರಿಜಾತ ವೃತ್ತದಲ್ಲಿ ಮೂಲಸೌಕರ್ಯವಿರುವ ಮಾರುಕಟ್ಟೆ ನಿರ್ಮಿಸಿದ ಬಳಿಕ ಹೂ ಮಾರುತ್ತಿದ್ದವರು ಅಲ್ಲಿಗೆ ತೆರಳಬೇಕು ಎಂದು ಸೂಚಿಸಿತ್ತು. ಅದರಂತೆ ಹೆಚ್ಚಿನ ಮಾರಾಟಗಾರರು ನೂತನ ಮಾರುಕಟ್ಟೆಗೆ ಅಂಗಡಿ ಸ್ಥಳಾಂತರಿಸಿದ್ದರು. <br /> <br /> ಆದರೆ, ಪುರಸಭಾ ಕಟ್ಟಡ ಎದುರಿನ ಹಳೆ ಬಸ್ ನಿಲ್ದಾಣದಲ್ಲಿ ಹೂ ಮಾರುತ್ತಿದ್ದವರೊಬ್ಬರು ನೂತನ ಮಾರುಕಟ್ಟೆಗೆ ಸ್ಥಳಾಂತರಗೊಂಡಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದ ಉಳಿದ ಮಾರಾಟಗಾರರು ಸಂಘಟನೆ ವತಿಯಿಂದ ಪುರಸಭೆಗೆ ಸಾಕಷ್ಟು ಬಾರಿ ಮನವಿ ನೀಡಿದ್ದರು. ಆದರೆ ಆ ಅಂಗಡಿ ಮಾತ್ರ ತೆರವು ಮಾಡಿರಲಿಲ್ಲ. <br /> <br /> `ಪುರಸಭೆಗೆ ಮನವಿ ಪತ್ರ ನೀಡಿದರೂ ಪ್ರಯೋಜನವಾಗಿಲ್ಲ. ಅದಕ್ಕೆ ಇಂದು ಪ್ರತಿಭಟನೆ ನಡೆಸಿದ್ದೇವೆ. ಭಾನುವಾರದಿಂದ ಮಾರುಕಟ್ಟೆಯ 29 ಮಾರಾಟಗಾರರು ಪುರಸಭೆ ಎದುರಿನ ಹಳೆ ಬಸ್ ನಿಲ್ದಾಣ ಪರಿಸರದಲ್ಲಿ ಹೂ ಮಾರಾಟ ಪ್ರಾರಂಭಿಸುತ್ತೇವೆ~ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ. <br /> <br /> ಸಂಘದ ಅಧ್ಯಕ್ಷ ಚಂದ್ರಕಾಂತ ಖಾರ್ವಿ, ಉಪಾಧ್ಯಕ್ಷ ಶಿವಕುಮಾರ, ಕಾರ್ಯದರ್ಶಿ ಶೇಖರ ಖಾರ್ವಿ, ಕೋಶಾಧಿಕಾರಿ ಸುಧೀರ ಹಾಗೂ ಸಲಹೆಗಾರ ಸೀನ ನೇತೃತ್ವ ವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ:</strong> ಹೂ ಮಾರಾಟ ಅಂಗಡಿ ಸ್ಥಳಾಂತರ ವಿಷಯದಲ್ಲಿ ಪುರಸಭೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕುಂದಾಪುರ ಹೂ ಮಾರಾಟಗಾರರ ಸಂಘದ ನೇತೃತ್ವದಲ್ಲಿ ಶನಿವಾರ ವಿನೂತನ ರೀತಿಯ ಪ್ರತಿಭಟನೆ ನಡೆಯಿತು. <br /> <br /> ಹೂ ಮಾರುಕಟ್ಟೆಯಿಂದ ಪೊಲೀಸ್ ಠಾಣೆಯವರೆಗೆ ಬ್ಯಾಂಡ್, ವಾದ್ಯಗಳೊಂದಿಗೆ ಸಾಗಿದ ಪ್ರತಿಭಟನಾಕಾರರು ಪುರಸಭೆ ವಿರುದ್ಧ ಘೋಷಣೆ ಕೂಗಿದರು. ಠಾಣಾಧಿಕಾರಿಗೆ ಮನವಿ ಸಲ್ಲಿಸಿ, ಪುರಸಭೆಯವರೆಗೆ ಮೆರವಣಿಗೆಯಲ್ಲಿ ಸಾಗಿದರು. <br /> <br /> `ಸುಂದರ ಕುಂದಾಪುರ~ ಯೋಜನೆ ಅನುಷ್ಠಾನಗೊಳಿಸುವ ಸಲುವಾಗಿ ಪುರಸಭಾ ವ್ಯಾಪ್ತಿಯ ಹೂ ಮಾರಾಟಗಾರರಿಗೆ ಮಾರುಕಟ್ಟೆ ನಿರ್ಮಿಸಿಕೊಡಲು ಪುರಸಭೆ ನಿರ್ಧರಿಸಿತ್ತು. <br /> <br /> ಪಾರಿಜಾತ ವೃತ್ತದಲ್ಲಿ ಮೂಲಸೌಕರ್ಯವಿರುವ ಮಾರುಕಟ್ಟೆ ನಿರ್ಮಿಸಿದ ಬಳಿಕ ಹೂ ಮಾರುತ್ತಿದ್ದವರು ಅಲ್ಲಿಗೆ ತೆರಳಬೇಕು ಎಂದು ಸೂಚಿಸಿತ್ತು. ಅದರಂತೆ ಹೆಚ್ಚಿನ ಮಾರಾಟಗಾರರು ನೂತನ ಮಾರುಕಟ್ಟೆಗೆ ಅಂಗಡಿ ಸ್ಥಳಾಂತರಿಸಿದ್ದರು. <br /> <br /> ಆದರೆ, ಪುರಸಭಾ ಕಟ್ಟಡ ಎದುರಿನ ಹಳೆ ಬಸ್ ನಿಲ್ದಾಣದಲ್ಲಿ ಹೂ ಮಾರುತ್ತಿದ್ದವರೊಬ್ಬರು ನೂತನ ಮಾರುಕಟ್ಟೆಗೆ ಸ್ಥಳಾಂತರಗೊಂಡಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದ ಉಳಿದ ಮಾರಾಟಗಾರರು ಸಂಘಟನೆ ವತಿಯಿಂದ ಪುರಸಭೆಗೆ ಸಾಕಷ್ಟು ಬಾರಿ ಮನವಿ ನೀಡಿದ್ದರು. ಆದರೆ ಆ ಅಂಗಡಿ ಮಾತ್ರ ತೆರವು ಮಾಡಿರಲಿಲ್ಲ. <br /> <br /> `ಪುರಸಭೆಗೆ ಮನವಿ ಪತ್ರ ನೀಡಿದರೂ ಪ್ರಯೋಜನವಾಗಿಲ್ಲ. ಅದಕ್ಕೆ ಇಂದು ಪ್ರತಿಭಟನೆ ನಡೆಸಿದ್ದೇವೆ. ಭಾನುವಾರದಿಂದ ಮಾರುಕಟ್ಟೆಯ 29 ಮಾರಾಟಗಾರರು ಪುರಸಭೆ ಎದುರಿನ ಹಳೆ ಬಸ್ ನಿಲ್ದಾಣ ಪರಿಸರದಲ್ಲಿ ಹೂ ಮಾರಾಟ ಪ್ರಾರಂಭಿಸುತ್ತೇವೆ~ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ. <br /> <br /> ಸಂಘದ ಅಧ್ಯಕ್ಷ ಚಂದ್ರಕಾಂತ ಖಾರ್ವಿ, ಉಪಾಧ್ಯಕ್ಷ ಶಿವಕುಮಾರ, ಕಾರ್ಯದರ್ಶಿ ಶೇಖರ ಖಾರ್ವಿ, ಕೋಶಾಧಿಕಾರಿ ಸುಧೀರ ಹಾಗೂ ಸಲಹೆಗಾರ ಸೀನ ನೇತೃತ್ವ ವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>