<p><strong>ತುಮಕೂರು: </strong>ಬಡವರು, ಕಾರ್ಮಿಕರು, ನಿಸ್ಸಾಹಾಯಕರ ಮೇಲಿನ ಶೋಷಣೆ ಹೆಚ್ಚಾಗಿದೆ. ಜತೆಗೆ ಭ್ರಷ್ಟರ ಪೋಷಣೆ ಮಾಡಲಾಗುತ್ತಿದೆ ಎಂದು ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ವಿ.ಅನಂತಸುಬ್ಬರಾವ್ ಹೇಳಿದರು.<br /> <br /> ನಗರದಲ್ಲಿ ಭಾನುವಾರ ಭಾರತ ಕಮ್ಯೂನಿಸ್ಟ್ ಪಕ್ಷದ ಕಚೇರಿಯಲ್ಲಿ ನಡೆದ ಎಐಟಿಯುಸಿ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದರು.ರಾಜ್ಯದಲ್ಲಿ ರಾಜಕೀಯ ಅರಾಜಕತೆ ತಾಂಡವಾಡುತ್ತಿದೆ. ರಾಜ್ಯದ ಹೊಣೆಹೊತ್ತ ಆಳುವ ವರ್ಗದ ಜನ ಸ್ವಹಿತಾಸಕ್ತಿಯ ರಾಜಕಾರಣದಲ್ಲಿ ತೊಡಗಿಕೊಂಡು ರೈತರು, ಕಾರ್ಮಿಕರ ಸಮಸ್ಯೆ ಮರೆತಿದ್ದಾರೆ ಎಂದರು.<br /> <br /> ಶತಮಾನೋತ್ಸವ ಆಚರಣೆಯ ಹಂತದಲ್ಲಿರುವ ದೇಶದ ಏಕೈಕ ಕಾರ್ಮಿಕ ಸಂಘಟನೆ ಎಐಟಿಯುಸಿ ಆಗಿದೆ. ದೇಶದಲ್ಲಿ 45 ಲಕ್ಷ ಕಾರ್ಮಿಕರು ಎಐಟಿಯುಸಿ ಸದಸ್ಯರಾಗಿದ್ದಾರೆ. ಕಾರ್ಮಿಕರ ಪರ ಹೋರಾಟವೇ ಸಂಘ ಹಂತಕ್ಕೆ ಬೆಳೆಯಲು ಕಾರಣ ಎಂದರು.<br /> <br /> ಜುಲೈ 10ರಂದು ಕಾರ್ಮಿಕರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಎಐಟಿಯುಸಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ತಿಳಿಸಿದರು.<br /> ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಎನ್.ಶಿವಣ್ಣ ಮಾತನಾಡಿ, ರಾಜ್ಯದಲ್ಲಿ ದಿನ ಬಳಕೆ ವಸ್ತುಗಳ ಬೆಲೆ ಮಾಯಾಜಿಂಕೆಯಂತೆ ಯಾರ ಕೈಗೂ ಸಿಗದೆ ಓಡುತ್ತಿದೆ. ಆರ್ಥಿಕತೆ ದಿವಾಳಿತನದ ಅಂಚಿನದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್, ಕೆಎಸ್ಆರ್ಟಿಸಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ, ವಿಜಯಕುಮಾರ್, ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಕಂಬೇಗೌಡ, ಸ್ವಾತಂತ್ರ್ಯ ಹೋರಾಟಗಾರ ರೇವಣ್ಣ, ಗೌಡರಂಗಪ್ಪ, ಚಿನ್ನಪ್ಪ, ಚಂದ್ರಶೇಖರ್ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಬಡವರು, ಕಾರ್ಮಿಕರು, ನಿಸ್ಸಾಹಾಯಕರ ಮೇಲಿನ ಶೋಷಣೆ ಹೆಚ್ಚಾಗಿದೆ. ಜತೆಗೆ ಭ್ರಷ್ಟರ ಪೋಷಣೆ ಮಾಡಲಾಗುತ್ತಿದೆ ಎಂದು ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ವಿ.ಅನಂತಸುಬ್ಬರಾವ್ ಹೇಳಿದರು.<br /> <br /> ನಗರದಲ್ಲಿ ಭಾನುವಾರ ಭಾರತ ಕಮ್ಯೂನಿಸ್ಟ್ ಪಕ್ಷದ ಕಚೇರಿಯಲ್ಲಿ ನಡೆದ ಎಐಟಿಯುಸಿ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದರು.ರಾಜ್ಯದಲ್ಲಿ ರಾಜಕೀಯ ಅರಾಜಕತೆ ತಾಂಡವಾಡುತ್ತಿದೆ. ರಾಜ್ಯದ ಹೊಣೆಹೊತ್ತ ಆಳುವ ವರ್ಗದ ಜನ ಸ್ವಹಿತಾಸಕ್ತಿಯ ರಾಜಕಾರಣದಲ್ಲಿ ತೊಡಗಿಕೊಂಡು ರೈತರು, ಕಾರ್ಮಿಕರ ಸಮಸ್ಯೆ ಮರೆತಿದ್ದಾರೆ ಎಂದರು.<br /> <br /> ಶತಮಾನೋತ್ಸವ ಆಚರಣೆಯ ಹಂತದಲ್ಲಿರುವ ದೇಶದ ಏಕೈಕ ಕಾರ್ಮಿಕ ಸಂಘಟನೆ ಎಐಟಿಯುಸಿ ಆಗಿದೆ. ದೇಶದಲ್ಲಿ 45 ಲಕ್ಷ ಕಾರ್ಮಿಕರು ಎಐಟಿಯುಸಿ ಸದಸ್ಯರಾಗಿದ್ದಾರೆ. ಕಾರ್ಮಿಕರ ಪರ ಹೋರಾಟವೇ ಸಂಘ ಹಂತಕ್ಕೆ ಬೆಳೆಯಲು ಕಾರಣ ಎಂದರು.<br /> <br /> ಜುಲೈ 10ರಂದು ಕಾರ್ಮಿಕರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಎಐಟಿಯುಸಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ತಿಳಿಸಿದರು.<br /> ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಎನ್.ಶಿವಣ್ಣ ಮಾತನಾಡಿ, ರಾಜ್ಯದಲ್ಲಿ ದಿನ ಬಳಕೆ ವಸ್ತುಗಳ ಬೆಲೆ ಮಾಯಾಜಿಂಕೆಯಂತೆ ಯಾರ ಕೈಗೂ ಸಿಗದೆ ಓಡುತ್ತಿದೆ. ಆರ್ಥಿಕತೆ ದಿವಾಳಿತನದ ಅಂಚಿನದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್, ಕೆಎಸ್ಆರ್ಟಿಸಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ, ವಿಜಯಕುಮಾರ್, ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಕಂಬೇಗೌಡ, ಸ್ವಾತಂತ್ರ್ಯ ಹೋರಾಟಗಾರ ರೇವಣ್ಣ, ಗೌಡರಂಗಪ್ಪ, ಚಿನ್ನಪ್ಪ, ಚಂದ್ರಶೇಖರ್ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>