<p><strong>ಬೆಂಗಳೂರು: </strong>ಒಂದರಿಂದ ನಾಲ್ಕು ವರ್ಷದ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಕ್ಷಯರೋಗ ತೀವ್ರತರದ ಆರೋಗ್ಯ ಸಮಸ್ಯೆಯನ್ನು ತಂದೊಡ್ಡುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.<br /> <br /> ‘ಹತ್ತಕ್ಕೂ ಹೆಚ್ಚು ಕ್ಷಯಪೀಡಿತ ಶಿಶುಗಳು ಪ್ರತಿ ತಿಂಗಳು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಬಹುತೇಕ ಪ್ರಕರಣಗಳಲ್ಲಿ ಸೋಂಕು ಪೋಷಕರಿಂದ ಮಕ್ಕಳಿಗೆ ಹರಡಿರುತ್ತದೆ’ ಎಂದು ವಾಣಿ ವಿಲಾಸ ಆಸ್ಪತ್ರೆಯ ಶಿಶುತಜ್ಞೆ ಡಾ.ಆಶಾ ಬೆನಕಪ್ಪ ತಿಳಿಸಿದರು.<br /> <br /> ‘ಮಕ್ಕಳಿಂದ ಮಕ್ಕಳಿಗೆ ಈ ರೋಗ ಹರಡುವ ಸಾಧ್ಯತೆ ತೀರಾ ಕಡಿಮೆಯಿದೆ. ಮಕ್ಕಳಿಗೆ ಈ ಸೋಂಕು ತಗುಲಿದರೆ ತೀವ್ರತರದ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಅದರಲ್ಲೂ ಐದು ವರ್ಷದ ಒಳಗಿನ ಮಕ್ಕಳು ಚೇತರಿಸಿಕೊಳ್ಳಲು ಕಷ್ಟಪಡುತ್ತಾರೆ’ ಎಂದು ಹೇಳಿದರು.<br /> ‘ಕ್ಷಯ ರೋಗದ ಜತೆ ಎಚ್ಐವಿ ಸೋಂಕಿನ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕು’ ಎಂದರು.<br /> <br /> ಕೊಲಂಬಿಯಾ ಏಷಿಯಾ ಆಸ್ಪತ್ರೆಯ ಶಿಶುತಜ್ಞ ಡಾ.ಸಾಯಿ ಪ್ರಸಾದ್, ‘ಕ್ಷಯರೋಗ ಪೀಡಿತ ಮಕ್ಕಳ ಕುರಿತು ಹೆಚ್ಚಿನ ನಿಗಾ ವಹಿಸಬೇಕು. ಅಲ್ಲದೇ ಕ್ಯಾನ್ಸರ್ ಹಾಗೂ ಅಂಗಾಂಗ ಕಸಿಗೆ ಒಳಗಾದವರಲ್ಲಿ ಕ್ಷಯ ರೋಗ ಕಾಣಿಸಿಕೊಂಡರೆ ಆರೋಗ್ಯ ಸಮಸ್ಯೆ ಉಲ್ಬಣಗೊಳ್ಳುತ್ತದೆ’ ಎಂದರು.<br /> <br /> ‘ಸರ್ಕಾರ ಉಚಿತವಾಗಿ ಔಷಧ ನೀಡುತ್ತಿದ್ದರೂ ಸಮರ್ಪಕವಾಗಿ ಚಿಕಿತ್ಸೆ ಪಡೆದುಕೊಳ್ಳುವವರ ಸಂಖ್ಯೆ ಕಡಿಮೆಯಿದೆ. ಹಾಗಾಗಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಒಂದರಿಂದ ನಾಲ್ಕು ವರ್ಷದ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಕ್ಷಯರೋಗ ತೀವ್ರತರದ ಆರೋಗ್ಯ ಸಮಸ್ಯೆಯನ್ನು ತಂದೊಡ್ಡುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.<br /> <br /> ‘ಹತ್ತಕ್ಕೂ ಹೆಚ್ಚು ಕ್ಷಯಪೀಡಿತ ಶಿಶುಗಳು ಪ್ರತಿ ತಿಂಗಳು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಬಹುತೇಕ ಪ್ರಕರಣಗಳಲ್ಲಿ ಸೋಂಕು ಪೋಷಕರಿಂದ ಮಕ್ಕಳಿಗೆ ಹರಡಿರುತ್ತದೆ’ ಎಂದು ವಾಣಿ ವಿಲಾಸ ಆಸ್ಪತ್ರೆಯ ಶಿಶುತಜ್ಞೆ ಡಾ.ಆಶಾ ಬೆನಕಪ್ಪ ತಿಳಿಸಿದರು.<br /> <br /> ‘ಮಕ್ಕಳಿಂದ ಮಕ್ಕಳಿಗೆ ಈ ರೋಗ ಹರಡುವ ಸಾಧ್ಯತೆ ತೀರಾ ಕಡಿಮೆಯಿದೆ. ಮಕ್ಕಳಿಗೆ ಈ ಸೋಂಕು ತಗುಲಿದರೆ ತೀವ್ರತರದ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಅದರಲ್ಲೂ ಐದು ವರ್ಷದ ಒಳಗಿನ ಮಕ್ಕಳು ಚೇತರಿಸಿಕೊಳ್ಳಲು ಕಷ್ಟಪಡುತ್ತಾರೆ’ ಎಂದು ಹೇಳಿದರು.<br /> ‘ಕ್ಷಯ ರೋಗದ ಜತೆ ಎಚ್ಐವಿ ಸೋಂಕಿನ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕು’ ಎಂದರು.<br /> <br /> ಕೊಲಂಬಿಯಾ ಏಷಿಯಾ ಆಸ್ಪತ್ರೆಯ ಶಿಶುತಜ್ಞ ಡಾ.ಸಾಯಿ ಪ್ರಸಾದ್, ‘ಕ್ಷಯರೋಗ ಪೀಡಿತ ಮಕ್ಕಳ ಕುರಿತು ಹೆಚ್ಚಿನ ನಿಗಾ ವಹಿಸಬೇಕು. ಅಲ್ಲದೇ ಕ್ಯಾನ್ಸರ್ ಹಾಗೂ ಅಂಗಾಂಗ ಕಸಿಗೆ ಒಳಗಾದವರಲ್ಲಿ ಕ್ಷಯ ರೋಗ ಕಾಣಿಸಿಕೊಂಡರೆ ಆರೋಗ್ಯ ಸಮಸ್ಯೆ ಉಲ್ಬಣಗೊಳ್ಳುತ್ತದೆ’ ಎಂದರು.<br /> <br /> ‘ಸರ್ಕಾರ ಉಚಿತವಾಗಿ ಔಷಧ ನೀಡುತ್ತಿದ್ದರೂ ಸಮರ್ಪಕವಾಗಿ ಚಿಕಿತ್ಸೆ ಪಡೆದುಕೊಳ್ಳುವವರ ಸಂಖ್ಯೆ ಕಡಿಮೆಯಿದೆ. ಹಾಗಾಗಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>