<p>ಬಳ್ಳಾರಿ: ‘ಹೆಣ್ಣು ಹೆತ್ತರೆ ಸಮಸ್ಯೆ’ ಎಂದೇ ಭಾವಿಸಿರುವ ಈ ಕಾಲದಲ್ಲಿ, ಹೆಣ್ಣು ಭ್ರೂಣಹತ್ಯೆ ತಡೆಗಟ್ಟದಿದ್ದರೆ ಬಹುಪತ್ನಿತ್ವ ಪದ್ಧತಿ ಮತ್ತೆ ಜಾರಿಗೆ ಬರುವುದರಲ್ಲಿ ಸಂಶಯವಿಲ್ಲ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಾ. ಎಚ್.ಜಿ. ಜಯಲಕ್ಷ್ಮಿ ಕಳವಳ ವ್ಯಕ್ತಪಡಿಸಿದರು.<br /> <br /> ಸಂಘಟನೆಯ ವತಿಯಿಂದ ನಗರದ ರಾಘವ ಕಲಾಮಂದಿರದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಮಹಿಳಾ ದಿನದ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ದೇಶದಲ್ಲಿರುವ ಒಟ್ಟು ಹೆಣ್ಣುಮಕ್ಕಳ ಸಂಖ್ಯೆ ಗಂಡು ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಇಲ್ಲದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಸದ್ಯ ದೇಶದಲ್ಲಿ ಒಟ್ಟು ಸಾವಿರ ಗಂಡು ಮಕ್ಕಳಿಗೆ 927 ಹೆಣ್ಣುಮಕ್ಕಳು ಇದ್ದು, ಹರಿಯಾಣ, ಪಂಜಾಬ್, ರಾಜಸ್ತಾನ ಹಾಗೂ ಗುಜರಾತ್ಗಳಲ್ಲಿ ಈ ಅನುಪಾತ ಇನ್ನೂ ಕಡಿಮೆಯಾಗಿದೆ ಎಂದು ಅವರು ಹೇಳಿದರು.<br /> <br /> ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಎಂ.ಎನ್. ಮಂಜುಳಾ, ನೂರು ವರ್ಷಗಳ ಹಿಂದೆ ನ್ಯೂಯಾರ್ಕ್ನಲ್ಲಿ ಉದ್ಯೋಗಸ್ಥ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದು, ಅಂದಿನ ಆ ದಿನವನ್ನೇ ಇಂದು ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ವಿವರಿಸಿದರು.<br /> <br /> ಐಎಂಎ ಜಿಲ್ಲಾ ಮಹಿಳಾ ವಿಭಾಗದ ಸಂಘಟನಾ ಅಧ್ಯಕ್ಷೆ ಡಾ.ಕೆ.ಅರುಣಾ ರಾವ್ ಮಾತನಾಡಿದರು, ಸುಗಂಧಿ, ರಾಜಲಕ್ಷ್ಮಿ, ಭುವನೇಶ್ವರಿ, ಡಿ.ನಾಗಲಕ್ಷ್ಮಿ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ‘ಹೆಣ್ಣು ಹೆತ್ತರೆ ಸಮಸ್ಯೆ’ ಎಂದೇ ಭಾವಿಸಿರುವ ಈ ಕಾಲದಲ್ಲಿ, ಹೆಣ್ಣು ಭ್ರೂಣಹತ್ಯೆ ತಡೆಗಟ್ಟದಿದ್ದರೆ ಬಹುಪತ್ನಿತ್ವ ಪದ್ಧತಿ ಮತ್ತೆ ಜಾರಿಗೆ ಬರುವುದರಲ್ಲಿ ಸಂಶಯವಿಲ್ಲ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಾ. ಎಚ್.ಜಿ. ಜಯಲಕ್ಷ್ಮಿ ಕಳವಳ ವ್ಯಕ್ತಪಡಿಸಿದರು.<br /> <br /> ಸಂಘಟನೆಯ ವತಿಯಿಂದ ನಗರದ ರಾಘವ ಕಲಾಮಂದಿರದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಮಹಿಳಾ ದಿನದ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ದೇಶದಲ್ಲಿರುವ ಒಟ್ಟು ಹೆಣ್ಣುಮಕ್ಕಳ ಸಂಖ್ಯೆ ಗಂಡು ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಇಲ್ಲದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಸದ್ಯ ದೇಶದಲ್ಲಿ ಒಟ್ಟು ಸಾವಿರ ಗಂಡು ಮಕ್ಕಳಿಗೆ 927 ಹೆಣ್ಣುಮಕ್ಕಳು ಇದ್ದು, ಹರಿಯಾಣ, ಪಂಜಾಬ್, ರಾಜಸ್ತಾನ ಹಾಗೂ ಗುಜರಾತ್ಗಳಲ್ಲಿ ಈ ಅನುಪಾತ ಇನ್ನೂ ಕಡಿಮೆಯಾಗಿದೆ ಎಂದು ಅವರು ಹೇಳಿದರು.<br /> <br /> ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಎಂ.ಎನ್. ಮಂಜುಳಾ, ನೂರು ವರ್ಷಗಳ ಹಿಂದೆ ನ್ಯೂಯಾರ್ಕ್ನಲ್ಲಿ ಉದ್ಯೋಗಸ್ಥ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದು, ಅಂದಿನ ಆ ದಿನವನ್ನೇ ಇಂದು ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ವಿವರಿಸಿದರು.<br /> <br /> ಐಎಂಎ ಜಿಲ್ಲಾ ಮಹಿಳಾ ವಿಭಾಗದ ಸಂಘಟನಾ ಅಧ್ಯಕ್ಷೆ ಡಾ.ಕೆ.ಅರುಣಾ ರಾವ್ ಮಾತನಾಡಿದರು, ಸುಗಂಧಿ, ರಾಜಲಕ್ಷ್ಮಿ, ಭುವನೇಶ್ವರಿ, ಡಿ.ನಾಗಲಕ್ಷ್ಮಿ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>