<p>ಹೊಸನಗರ: ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಸಮಾಜವನ್ನು ಸರ್ಕಾರವೇ ರಕ್ಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.<br /> <br /> ಪಟ್ಟಣದಲ್ಲಿ ಒಕ್ಕಲಿಗರ ಭವನವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಸಮಾಜ ಅಥವಾ ಸಮುದಾಯದಲ್ಲಿನ ಅತಿ ಹಿಂದುಳಿದ ಹಳ್ಳಿಯ ಹೆಣ್ಣು ಮಕ್ಕಳ ಶೈಕ್ಷಣಿಕ ಉನ್ನತಿಗೆ ಶ್ರಮಿಸಬೇಕು. ಇದರಿಂದ ಸಮುದಾಯ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. <br /> <br /> ಆದಿಚುಂಚನಗಿರಿ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿ ಮಾತನಾಡಿ, ಸ್ವಾರ್ಥವನ್ನು ಬಿಟ್ಟು ಸಮಾಜದ ಅಭಿವೃದ್ಧಿಗೆಯ ಚಿಂತನೆ ಕಡೆಗೆ ಗಮನ ಹರಿಸಬೇಕು. ಎಂದು ಕರೆ ನೀಡಿದರು.<br /> <br /> ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಪಟೇಲ್ ಗರುಡಪ್ಪ ಗೌಡ ಮಾತನಾಡಿ, ಸುಮಾರು ರೂ 85 ಲಕ್ಷ ವೆಚ್ಚದ ಈ ಭವನವು ತಾಲ್ಲೂಕು ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲಿದೆ ಎಂದರು.<br /> <br /> ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಿ.ವಿ. ರಮೇಶ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.<br /> <br /> ಶಾಸಕ ಕಿಮ್ಮನೆ ರತ್ನಾಕರ್, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ, ಎಂಪಿಎಂ ಅಧ್ಯಕ್ಷ ಆರಗ ಜ್ಞಾನೇಂದ್ರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ, ಕೆಂಪೇಗೌಡ ವೈದ್ಯಕೀಯ ಆಸ್ಪತ್ರೆ ಅಧ್ಯಕ್ಷ ಮೂನೇಗೌಡ, ನಿವೃತ್ತ ಎಂಜಿನಿಯರ್ ಅನಂತಕೃಷ್ಣಮೂರ್ತಿ, ವಿಶ್ರಾಂತ ಕುಲಸಚಿವ ಹೂವಯ್ಯ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜೆ.ಎಲ್. ಪದ್ಮನಾಭ್ ಉಪಸ್ಥಿತರಿದ್ದರು.<br /> <br /> ಸಮಾಜದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅತ್ತಿಕೊಡಿಗೆ ನಾಗಪ್ಪ ಗೌಡ ಸ್ವಾಗತಿಸಿದರು. ಹರೀಶ್, ಪೂರ್ಣೇಶ್ ಗೌಡ ಕಾರ್ಯಕ್ರಮ ನಿರೂಪಿಸಿದರು. ಕೆ.ಎನ್. ರತ್ನಾಕರ್ ಪ್ರಾಸ್ತಾವಿಕ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸನಗರ: ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಸಮಾಜವನ್ನು ಸರ್ಕಾರವೇ ರಕ್ಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.<br /> <br /> ಪಟ್ಟಣದಲ್ಲಿ ಒಕ್ಕಲಿಗರ ಭವನವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಸಮಾಜ ಅಥವಾ ಸಮುದಾಯದಲ್ಲಿನ ಅತಿ ಹಿಂದುಳಿದ ಹಳ್ಳಿಯ ಹೆಣ್ಣು ಮಕ್ಕಳ ಶೈಕ್ಷಣಿಕ ಉನ್ನತಿಗೆ ಶ್ರಮಿಸಬೇಕು. ಇದರಿಂದ ಸಮುದಾಯ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. <br /> <br /> ಆದಿಚುಂಚನಗಿರಿ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿ ಮಾತನಾಡಿ, ಸ್ವಾರ್ಥವನ್ನು ಬಿಟ್ಟು ಸಮಾಜದ ಅಭಿವೃದ್ಧಿಗೆಯ ಚಿಂತನೆ ಕಡೆಗೆ ಗಮನ ಹರಿಸಬೇಕು. ಎಂದು ಕರೆ ನೀಡಿದರು.<br /> <br /> ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಪಟೇಲ್ ಗರುಡಪ್ಪ ಗೌಡ ಮಾತನಾಡಿ, ಸುಮಾರು ರೂ 85 ಲಕ್ಷ ವೆಚ್ಚದ ಈ ಭವನವು ತಾಲ್ಲೂಕು ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲಿದೆ ಎಂದರು.<br /> <br /> ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಿ.ವಿ. ರಮೇಶ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.<br /> <br /> ಶಾಸಕ ಕಿಮ್ಮನೆ ರತ್ನಾಕರ್, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ, ಎಂಪಿಎಂ ಅಧ್ಯಕ್ಷ ಆರಗ ಜ್ಞಾನೇಂದ್ರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ, ಕೆಂಪೇಗೌಡ ವೈದ್ಯಕೀಯ ಆಸ್ಪತ್ರೆ ಅಧ್ಯಕ್ಷ ಮೂನೇಗೌಡ, ನಿವೃತ್ತ ಎಂಜಿನಿಯರ್ ಅನಂತಕೃಷ್ಣಮೂರ್ತಿ, ವಿಶ್ರಾಂತ ಕುಲಸಚಿವ ಹೂವಯ್ಯ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜೆ.ಎಲ್. ಪದ್ಮನಾಭ್ ಉಪಸ್ಥಿತರಿದ್ದರು.<br /> <br /> ಸಮಾಜದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅತ್ತಿಕೊಡಿಗೆ ನಾಗಪ್ಪ ಗೌಡ ಸ್ವಾಗತಿಸಿದರು. ಹರೀಶ್, ಪೂರ್ಣೇಶ್ ಗೌಡ ಕಾರ್ಯಕ್ರಮ ನಿರೂಪಿಸಿದರು. ಕೆ.ಎನ್. ರತ್ನಾಕರ್ ಪ್ರಾಸ್ತಾವಿಕ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>