<p>ಬಾಣಾವರ: ರಾಷ್ಟ್ರೀಯ ಹೆದ್ದಾರಿ 234ರ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಶುಕ್ರವಾರ ಮಲ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.<br /> <br /> ಬಾಣಾವರದಿಂದ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 234ರ ಕಾಮಗಾರಿ ವಿಳಂಬವಾಗಿದ್ದು, ದೂಳಿನಿಂದ ವಾತಾವರಣ ಕಲುಷಿತಗೊಂಡಿದೆ. ಇದರಿಂದ ರಸ್ತೆಯ ಅಕ್ಕಪಕ್ಕದ ಗ್ರಾಮಗಳ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ಕಳೆದ ಮೂರು ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಂಜೂರಾತಿ ನೀಡಲಾಗಿತ್ತು. ಕಾಮಗಾರಿ ವಿಳಂಬವಾದ್ದರಿಂದ ಕಳೆದ 6 ತಿಂಗಳ ಹಿಂದೆ ಗ್ರಾಮಸ್ಥರೆಲ್ಲ ಸೇರಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದರು. ಕಳೆದ 6 ತಿಂಗಳ ಹಿಂದೆ ಹೊಸ ಗುತ್ತಿಗೆದಾರರಿಂದ ರಸ್ತೆ ಕಾಮಗಾರಿ ಆರಂಭವಾಯಿತು.<br /> <br /> ಆರಂಭದಲ್ಲಿ ರಸ್ತೆ ಕೆಲಸ ಸ್ವಲ್ಪ ನಡೆದರೂ ಚರಂಡಿ ಕೆಲಸವಾಗಲಿ, ಸೇತುವೆ ಕೆಲಸಗಳಾಗಲಿ ಆಗದೇ ಕಾಮಗಾರಿ ಕುಂಟುತ್ತಾ ಸಾಗಿತು. ಆದ್ದರಿಂದ ಕೂಡಲೇ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ತಮ್ಮ ಮನವಿಯನ್ನು ಉಪ ತಹಶೀಲ್ದಾರ್ ಅವರಿಗೆ ನೀಡಿದರು.<br /> <br /> ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಸಿ. ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಟಿ.ಆರ್. ಕೃಷ್ಣಮೂರ್ತಿ, ತೊಂಡಿಗನಹಳ್ಳಿ ಚಂದ್ರಣ್ಣ, ಎಂ. ಮಂಜಣ್ಣ, ಜಯರಾಂ, ಲಕ್ಷ್ಮೀಶ್, ಮಲ್ಲಾಪುರದ ರವಿ, ಬೀಮಣ್ಣ, ಯೊಗೀಶ್, ರಮೇಶ್, ಶ್ಯಾನೇಗೆರೆ ರಮೇಶ್, ರುದ್ರಣ್ಣ, ಮಲ್ಲಾಪುರ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಣಾವರ: ರಾಷ್ಟ್ರೀಯ ಹೆದ್ದಾರಿ 234ರ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಶುಕ್ರವಾರ ಮಲ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.<br /> <br /> ಬಾಣಾವರದಿಂದ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 234ರ ಕಾಮಗಾರಿ ವಿಳಂಬವಾಗಿದ್ದು, ದೂಳಿನಿಂದ ವಾತಾವರಣ ಕಲುಷಿತಗೊಂಡಿದೆ. ಇದರಿಂದ ರಸ್ತೆಯ ಅಕ್ಕಪಕ್ಕದ ಗ್ರಾಮಗಳ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ಕಳೆದ ಮೂರು ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಂಜೂರಾತಿ ನೀಡಲಾಗಿತ್ತು. ಕಾಮಗಾರಿ ವಿಳಂಬವಾದ್ದರಿಂದ ಕಳೆದ 6 ತಿಂಗಳ ಹಿಂದೆ ಗ್ರಾಮಸ್ಥರೆಲ್ಲ ಸೇರಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದರು. ಕಳೆದ 6 ತಿಂಗಳ ಹಿಂದೆ ಹೊಸ ಗುತ್ತಿಗೆದಾರರಿಂದ ರಸ್ತೆ ಕಾಮಗಾರಿ ಆರಂಭವಾಯಿತು.<br /> <br /> ಆರಂಭದಲ್ಲಿ ರಸ್ತೆ ಕೆಲಸ ಸ್ವಲ್ಪ ನಡೆದರೂ ಚರಂಡಿ ಕೆಲಸವಾಗಲಿ, ಸೇತುವೆ ಕೆಲಸಗಳಾಗಲಿ ಆಗದೇ ಕಾಮಗಾರಿ ಕುಂಟುತ್ತಾ ಸಾಗಿತು. ಆದ್ದರಿಂದ ಕೂಡಲೇ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ತಮ್ಮ ಮನವಿಯನ್ನು ಉಪ ತಹಶೀಲ್ದಾರ್ ಅವರಿಗೆ ನೀಡಿದರು.<br /> <br /> ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಸಿ. ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಟಿ.ಆರ್. ಕೃಷ್ಣಮೂರ್ತಿ, ತೊಂಡಿಗನಹಳ್ಳಿ ಚಂದ್ರಣ್ಣ, ಎಂ. ಮಂಜಣ್ಣ, ಜಯರಾಂ, ಲಕ್ಷ್ಮೀಶ್, ಮಲ್ಲಾಪುರದ ರವಿ, ಬೀಮಣ್ಣ, ಯೊಗೀಶ್, ರಮೇಶ್, ಶ್ಯಾನೇಗೆರೆ ರಮೇಶ್, ರುದ್ರಣ್ಣ, ಮಲ್ಲಾಪುರ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>