<p><strong>ಬೆಂಗಳೂರು:</strong> ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ (ಕೆ-ಶಿಪ್) 2ನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆದಷ್ಟು ಬೇಗ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಶುಕ್ರವಾರ ವಿಧಾನಸಭೆಗೆ ತಿಳಿಸಿದರು.<br /> <br /> ಶೂನ್ಯವೇಳೆಯಲ್ಲಿ ಜೆಡಿಎಸ್ನ ಎಚ್.ಡಿ. ರೇವಣ್ಣ ಅವರು ವಿಷಯ ಪ್ರಸ್ತಾಪಿಸಿ, ಈ ಯೋಜನೆಗೆ ಮಾರ್ಚ್ 19ರಂದೇ ಆಡಳಿತಾತ್ಮಕ ಅನುಮೋದನೆ ನೀಡಿದ್ದರೂ ಕಾಮಗಾರಿಗಳನ್ನು ಇದುವರೆಗೂ ಆರಂಭಿಸಿಲ್ಲ ಎಂದು ಆಕ್ಷೇಪಿಸಿದರು.<br /> <br /> ಈ ಕುರಿತು ಉತ್ತರ ನೀಡಿದ ಸಚಿವರು `2ನೇ ಹಂತದ ಯೋಜನೆಯಲ್ಲಿ 70 ಪ್ಯಾಕೇಜ್ಗಳ ಪೈಕಿ 69 ಪ್ಯಾಕೇಜ್ಗಳಿಗೆ ಟೆಂಡರ್ ಸ್ವೀಕರಿಸಲಾಗಿದೆ. ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ತಾಂತ್ರಿಕ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಅದು ಪೂರ್ಣಗೊಂಡ ತಕ್ಷಣವೇ ಕಾಮಗಾರಿಗಳನ್ನು ಆರಂಭಿಸಲಾಗುವುದು' ಎಂದು ಹೇಳಿದರು. `ಯಾವುದೇ ಕಾರಣಕ್ಕೂ ಕಾಮಗಾರಿಯನ್ನು ವಿಳಂಬ ಮಾಡುವುದಿಲ್ಲ. ಈ ವಿಷಯದಲ್ಲಿ ಆತಂಕ ಬೇಡ' ಎಂದರು.<br /> <br /> <strong>ಅನ್ಯಾಯ ಆಗದಂತೆ ಕ್ರಮ<br /> ಬೆಂಗಳೂರು:</strong> ಹಾಸನ ಮತ್ತು ಶಿವಮೊಗ್ಗದ ಪಶುವೈದ್ಯಕೀಯ ಕಾಲೇ ಜುಗಳಿಗೆ ಮಾನ್ಯತೆ ದೊರಕಿಸಿ ಕೊಡಲು ಪ್ರಯತ್ನ ನಡೆದಿದೆ. ಅಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಟಿ.ಬಿ. ಜಯಚಂದ್ರ ಅವರು ಶುಕ್ರವಾರ ವಿಧಾನಸಭೆಯಲ್ಲಿ ತಿಳಿಸಿದರು.<br /> <br /> ಜೆಡಿಎಸ್ನ ಎಚ್.ಡಿ.ರೇವಣ್ಣ ಅವರು ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರಿಗೆ ಪತ್ರ ಬರೆದು ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ. 3-4 ಬಾರಿ ಸಭೆಗಳು ನಡೆದಿವೆ.</p>.<p>ಈಗಾಗಲೇ 391ಪಶುವೈದ್ಯರ ನೇಮಕ ಪ್ರಕ್ರಿಯೆ ಜಾರಿಯಲ್ಲಿದೆ. ಶಿವಮೊಗ್ಗ ಮತ್ತು ಹಾಸನ ಪಶುವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಅವಕಾಶ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ (ಕೆ-ಶಿಪ್) 2ನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆದಷ್ಟು ಬೇಗ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಶುಕ್ರವಾರ ವಿಧಾನಸಭೆಗೆ ತಿಳಿಸಿದರು.<br /> <br /> ಶೂನ್ಯವೇಳೆಯಲ್ಲಿ ಜೆಡಿಎಸ್ನ ಎಚ್.ಡಿ. ರೇವಣ್ಣ ಅವರು ವಿಷಯ ಪ್ರಸ್ತಾಪಿಸಿ, ಈ ಯೋಜನೆಗೆ ಮಾರ್ಚ್ 19ರಂದೇ ಆಡಳಿತಾತ್ಮಕ ಅನುಮೋದನೆ ನೀಡಿದ್ದರೂ ಕಾಮಗಾರಿಗಳನ್ನು ಇದುವರೆಗೂ ಆರಂಭಿಸಿಲ್ಲ ಎಂದು ಆಕ್ಷೇಪಿಸಿದರು.<br /> <br /> ಈ ಕುರಿತು ಉತ್ತರ ನೀಡಿದ ಸಚಿವರು `2ನೇ ಹಂತದ ಯೋಜನೆಯಲ್ಲಿ 70 ಪ್ಯಾಕೇಜ್ಗಳ ಪೈಕಿ 69 ಪ್ಯಾಕೇಜ್ಗಳಿಗೆ ಟೆಂಡರ್ ಸ್ವೀಕರಿಸಲಾಗಿದೆ. ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ತಾಂತ್ರಿಕ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಅದು ಪೂರ್ಣಗೊಂಡ ತಕ್ಷಣವೇ ಕಾಮಗಾರಿಗಳನ್ನು ಆರಂಭಿಸಲಾಗುವುದು' ಎಂದು ಹೇಳಿದರು. `ಯಾವುದೇ ಕಾರಣಕ್ಕೂ ಕಾಮಗಾರಿಯನ್ನು ವಿಳಂಬ ಮಾಡುವುದಿಲ್ಲ. ಈ ವಿಷಯದಲ್ಲಿ ಆತಂಕ ಬೇಡ' ಎಂದರು.<br /> <br /> <strong>ಅನ್ಯಾಯ ಆಗದಂತೆ ಕ್ರಮ<br /> ಬೆಂಗಳೂರು:</strong> ಹಾಸನ ಮತ್ತು ಶಿವಮೊಗ್ಗದ ಪಶುವೈದ್ಯಕೀಯ ಕಾಲೇ ಜುಗಳಿಗೆ ಮಾನ್ಯತೆ ದೊರಕಿಸಿ ಕೊಡಲು ಪ್ರಯತ್ನ ನಡೆದಿದೆ. ಅಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಟಿ.ಬಿ. ಜಯಚಂದ್ರ ಅವರು ಶುಕ್ರವಾರ ವಿಧಾನಸಭೆಯಲ್ಲಿ ತಿಳಿಸಿದರು.<br /> <br /> ಜೆಡಿಎಸ್ನ ಎಚ್.ಡಿ.ರೇವಣ್ಣ ಅವರು ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರಿಗೆ ಪತ್ರ ಬರೆದು ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ. 3-4 ಬಾರಿ ಸಭೆಗಳು ನಡೆದಿವೆ.</p>.<p>ಈಗಾಗಲೇ 391ಪಶುವೈದ್ಯರ ನೇಮಕ ಪ್ರಕ್ರಿಯೆ ಜಾರಿಯಲ್ಲಿದೆ. ಶಿವಮೊಗ್ಗ ಮತ್ತು ಹಾಸನ ಪಶುವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಅವಕಾಶ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>