<p><strong>ಕುಣಿಗಲ್: </strong>ಹದಗೆಟ್ಟ ರಾಜ್ಯ ಹೆದ್ದಾರಿ ದುರಸ್ತಿ ಸೇರಿದಂತೆ ಇತರ ಮೂಲ ಸೌಕರ್ಯಕ್ಕಾಗಿ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ ಹುಲಿಯೂರುದುರ್ಗ ಬಂದ್ ಸಂಪೂರ್ಣ ಯಶಸ್ವಿಯಾಯಿತು.<br /> <br /> ಹುಲಿಯೂರುದುರ್ಗದ ಸಂಪರ್ಕ ರಸ್ತೆಗಳು ಸೇರಿದಂತೆ ಗ್ರಾಮೀಣ ರಸ್ತೆಗಳು ಹದಗೆಟ್ಟಿದ್ದು, ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಸ್ಮಶಾನಗಳ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಈ ಬಂದ್ಗೆ ಕರೆ ನೀಡಲಾಗಿತ್ತು.<br /> <br /> ಕರವೇ ಅಧ್ಯಕ್ಷ ಬಾಬು, ಜೆಡಿಎಸ್ ಮುಖಂಡ ಜಯರಾಮಯ್ಯ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ತುಮಕೂರು-ಮದ್ದೂರು ರಾಜ್ಯ ಹೆದ್ದಾರಿಯಲ್ಲಿ ರಸ್ತೆತಡೆ ಪ್ರತಿಭಟನೆ ನಡೆಸಿದರು. <br /> <br /> ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಾಬು, ಹುಲಿಯೂರುದುರ್ಗ ಮೂಲಕ ಹಾದು ಹೋಗಿರುವ ರಾಜ್ಯ ಹೆದ್ದಾರಿ ಗುಂಡಿಗಳಿಂದ ಕೂಡಿದೆ. ಸಾರ್ವಜನಿಕರು ಓಡಾಡಲು, ವಾಹನ ಸಂಚಾರಕ್ಕೆ ಪ್ರಯಾಸ ಪಡಬೇಕಿದೆ. ನಿರಂತರವಾಗಿ ಈ ಮಾರ್ಗದಲ್ಲಿ ಸಣ್ಣಪುಟ್ಟ ಅಪಘಾತ ಸಂಭವಿಸುತ್ತವೇ ಇವೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.<br /> <br /> ತಹಶೀಲ್ದಾರ್ ಡಾ.ರವಿ ಎಂ.ತಿರ್ಲಾಪುರ್, ಲೋಕೋಪಯೋಗಿ ಇಲಾಖೆ ಎಇಇ ಸುರೇಶ್, ಕೆಶಿಪ್ ಅಧಿಕಾರಿ ವೆಂಕಟೇಶ್, ಸಿಪಿಐ ಬಿ.ಕೆ.ಶೇಖರ್, ಪಿಎಸ್ಐಗಳಾದ ಕೃಷ್ಣಮೂರ್ತಿ, ಚನ್ನಯ್ಯಹಿರೇಮಠ್ ಅವರು ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಈ ತಿಂಗಳ ಅಂತ್ಯದೊಳಗೆ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ವಾಪಸ್ ಪಡೆದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್: </strong>ಹದಗೆಟ್ಟ ರಾಜ್ಯ ಹೆದ್ದಾರಿ ದುರಸ್ತಿ ಸೇರಿದಂತೆ ಇತರ ಮೂಲ ಸೌಕರ್ಯಕ್ಕಾಗಿ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ ಹುಲಿಯೂರುದುರ್ಗ ಬಂದ್ ಸಂಪೂರ್ಣ ಯಶಸ್ವಿಯಾಯಿತು.<br /> <br /> ಹುಲಿಯೂರುದುರ್ಗದ ಸಂಪರ್ಕ ರಸ್ತೆಗಳು ಸೇರಿದಂತೆ ಗ್ರಾಮೀಣ ರಸ್ತೆಗಳು ಹದಗೆಟ್ಟಿದ್ದು, ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಸ್ಮಶಾನಗಳ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಈ ಬಂದ್ಗೆ ಕರೆ ನೀಡಲಾಗಿತ್ತು.<br /> <br /> ಕರವೇ ಅಧ್ಯಕ್ಷ ಬಾಬು, ಜೆಡಿಎಸ್ ಮುಖಂಡ ಜಯರಾಮಯ್ಯ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ತುಮಕೂರು-ಮದ್ದೂರು ರಾಜ್ಯ ಹೆದ್ದಾರಿಯಲ್ಲಿ ರಸ್ತೆತಡೆ ಪ್ರತಿಭಟನೆ ನಡೆಸಿದರು. <br /> <br /> ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಾಬು, ಹುಲಿಯೂರುದುರ್ಗ ಮೂಲಕ ಹಾದು ಹೋಗಿರುವ ರಾಜ್ಯ ಹೆದ್ದಾರಿ ಗುಂಡಿಗಳಿಂದ ಕೂಡಿದೆ. ಸಾರ್ವಜನಿಕರು ಓಡಾಡಲು, ವಾಹನ ಸಂಚಾರಕ್ಕೆ ಪ್ರಯಾಸ ಪಡಬೇಕಿದೆ. ನಿರಂತರವಾಗಿ ಈ ಮಾರ್ಗದಲ್ಲಿ ಸಣ್ಣಪುಟ್ಟ ಅಪಘಾತ ಸಂಭವಿಸುತ್ತವೇ ಇವೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.<br /> <br /> ತಹಶೀಲ್ದಾರ್ ಡಾ.ರವಿ ಎಂ.ತಿರ್ಲಾಪುರ್, ಲೋಕೋಪಯೋಗಿ ಇಲಾಖೆ ಎಇಇ ಸುರೇಶ್, ಕೆಶಿಪ್ ಅಧಿಕಾರಿ ವೆಂಕಟೇಶ್, ಸಿಪಿಐ ಬಿ.ಕೆ.ಶೇಖರ್, ಪಿಎಸ್ಐಗಳಾದ ಕೃಷ್ಣಮೂರ್ತಿ, ಚನ್ನಯ್ಯಹಿರೇಮಠ್ ಅವರು ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಈ ತಿಂಗಳ ಅಂತ್ಯದೊಳಗೆ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ವಾಪಸ್ ಪಡೆದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>