<p><strong>ಶ್ರೀನಗರ (ಪಿಟಿಐ):</strong> ಸತತವಾಗಿ ಬೀಳುತ್ತಿರುವ ಹಿಮ ಮತ್ತು ಭೂಕುಸಿತದಿಂದಾಗಿ ಮುಚ್ಚಲಾಗಿದ್ದ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಸಾರ್ವಜನಿಕ ಸಂಚಾರಕ್ಕೆ ಭಾನುವಾರ ಮುಕ್ತಗೊಳಿಸಲಾಯಿತು.<br /> <br /> ಇದರಿಂದ ಕಳೆದ ಮೂರು ದಿನಗಳಿಂದ ರಸ್ತೆ ಬದಿಯಲ್ಲಿಯೇ ನಿಂತಿದ್ದ ನೂರಾರು ವಾಹನಗಳಿಗೆ ಪ್ರಯಾಣ ಬೆಳೆಸಲು ಅವಕಾಶ ಕಲ್ಪಿಸಲಾಯಿತು.<br /> <br /> `ರಸ್ತೆ ಬಂದ್ ಆಗಿದ್ದರಿಂದ, 90 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಸೇಬು ತುಂಬಿಸಿಕೊಂಡಿದ್ದ ಲಾರಿಗಳು ರಸ್ತೆ ಬದಿ ನಿಂತಿದ್ದವು. ಇದರಿಂದಾಗಿ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕೆಂದು ಸೇಬು ವ್ಯಾಪಾರಿಗಳು ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಕ್ರಮ ತೆಗೆದುಕೊಳ್ಳಲಾಯಿತು~ ಎಂದು ಅವರು ಹೇಳಿದ್ದಾರೆ. 294 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಯನ್ನು ಗುರುವಾರದಿಂದ ಮುಚ್ಚಿದ್ದರಿಂದ ವಿವಿಧ ಕಡೆಗಳಲ್ಲಿ ಮೂರು ಸಾವಿರಕ್ಕೂ ಅಧಿಕ ವಾಹನಗಳು ಚಲಿಸಲಾಗದೆ ನಿಂತಲ್ಲೇ ನಿಲ್ಲುವಂತಾಗಿತ್ತು.<br /> <br /> <strong>ವಾಯುಪಡೆ ಕಾರ್ಯಾಚರಣೆ</strong>: ಕೆಟ್ಟ ಹವಾಮಾನದಿಂದ ಇಲ್ಲಿ ಸಿಕ್ಕಿಹಾಕಿಕೊಂಡಿದ್ದ 1,377 ಪ್ರವಾಸಿಗರನ್ನು ವಾಯುಪಡೆ ಶನಿವಾರ ವಿಶೇಷ ವಿಮಾನದಲ್ಲಿ ಜಮ್ಮು ಹಾಗೂ ಇತರ ಸ್ಥಳಗಳಿಗೆ ಕರೆದೊಯ್ಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ (ಪಿಟಿಐ):</strong> ಸತತವಾಗಿ ಬೀಳುತ್ತಿರುವ ಹಿಮ ಮತ್ತು ಭೂಕುಸಿತದಿಂದಾಗಿ ಮುಚ್ಚಲಾಗಿದ್ದ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಸಾರ್ವಜನಿಕ ಸಂಚಾರಕ್ಕೆ ಭಾನುವಾರ ಮುಕ್ತಗೊಳಿಸಲಾಯಿತು.<br /> <br /> ಇದರಿಂದ ಕಳೆದ ಮೂರು ದಿನಗಳಿಂದ ರಸ್ತೆ ಬದಿಯಲ್ಲಿಯೇ ನಿಂತಿದ್ದ ನೂರಾರು ವಾಹನಗಳಿಗೆ ಪ್ರಯಾಣ ಬೆಳೆಸಲು ಅವಕಾಶ ಕಲ್ಪಿಸಲಾಯಿತು.<br /> <br /> `ರಸ್ತೆ ಬಂದ್ ಆಗಿದ್ದರಿಂದ, 90 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಸೇಬು ತುಂಬಿಸಿಕೊಂಡಿದ್ದ ಲಾರಿಗಳು ರಸ್ತೆ ಬದಿ ನಿಂತಿದ್ದವು. ಇದರಿಂದಾಗಿ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕೆಂದು ಸೇಬು ವ್ಯಾಪಾರಿಗಳು ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಕ್ರಮ ತೆಗೆದುಕೊಳ್ಳಲಾಯಿತು~ ಎಂದು ಅವರು ಹೇಳಿದ್ದಾರೆ. 294 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಯನ್ನು ಗುರುವಾರದಿಂದ ಮುಚ್ಚಿದ್ದರಿಂದ ವಿವಿಧ ಕಡೆಗಳಲ್ಲಿ ಮೂರು ಸಾವಿರಕ್ಕೂ ಅಧಿಕ ವಾಹನಗಳು ಚಲಿಸಲಾಗದೆ ನಿಂತಲ್ಲೇ ನಿಲ್ಲುವಂತಾಗಿತ್ತು.<br /> <br /> <strong>ವಾಯುಪಡೆ ಕಾರ್ಯಾಚರಣೆ</strong>: ಕೆಟ್ಟ ಹವಾಮಾನದಿಂದ ಇಲ್ಲಿ ಸಿಕ್ಕಿಹಾಕಿಕೊಂಡಿದ್ದ 1,377 ಪ್ರವಾಸಿಗರನ್ನು ವಾಯುಪಡೆ ಶನಿವಾರ ವಿಶೇಷ ವಿಮಾನದಲ್ಲಿ ಜಮ್ಮು ಹಾಗೂ ಇತರ ಸ್ಥಳಗಳಿಗೆ ಕರೆದೊಯ್ಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>