<p><strong>ಆಲಮೇಲ: </strong>ಗುಂದಗಿ ಗ್ರಾಮಕ್ಕೆ ಕಳೆದ 15ದಿನಗಳಿಂದ ಸಮರ್ಪಕ ವಿದ್ಯುತ್ ಇಲ್ಲದೆ ಗ್ರಾಮ ಕತ್ತಲಲ್ಲಿ ಕಳೆಯುವಂತೆ ಮಾಡಿದ ಇಲ್ಲಿನ ಹೆಸ್ಕಾಂ ಕಚೇರಿಯ ಕಾರ್ಯವೈಖರಿಯನ್ನು ಖಂಡಿಸಿ ಗುಂದಗಿ ಗ್ರಾಮದ ನೂರಾರು ಜನರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆಯಿತು.<br /> <br /> `ಗುಂದಗಿ ಗ್ರಾಮಕ್ಕೆ ನಿತ್ಯ ಕೇವಲ ಎರಡು ತಾಸು ವಿದ್ಯುತ್ ನೀಡಿ ನಮ್ಮನ್ನು ಇಡೀ ದಿನ ಕತ್ತಲಲ್ಲಿ ಕಳೆಯುವಂತೆ ಮಾಡಲಾಗಿದೆ. ನಮ್ಮ ಊರಿನ ಜನರು ಪಕ್ಕದ ಹಳ್ಳಿಗಳಿಗೆ ಹೋಗಿ ಹಿಟ್ಟು ಬೀಸಿಕೊಂಡು ಬರುವುದು ಸೇರಿದಂತೆ ಹತ್ತಾರು ಸಂಕಷ್ಟಗಳನ್ನು ಎದುರಿಸಿ ಬೇಸತ್ತು ಇಂದು ಈ ಹೋರಾಟಕ್ಕೆ ಇಳಿಯಬೇಕಾಯಿತು~ ಎಂದು ಗ್ರಾಮದ ಹಿರಿಯ ಐ.ಎಸ್.ಬಿರಾದಾರ ಹೇಳಿದರು.<br /> <br /> ಇಲ್ಲಿನ ಸಿಬ್ಬಂದಿ ಸರಿಯಾಗಿ ನಮ್ಮ ಗ್ರಾಮಕ್ಕೆ ವಿದ್ಯುತ್ ನೀಡಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು, ನಿತ್ಯ 2 ಗಂಟೆಯಷ್ಟೂ ವಿದ್ಯುತ್ ನೀಡಿಲ್ಲ ಎಂದು ದೂರಿದರು. ಇದಕ್ಕೆ ಇಲ್ಲಿನ ಶಾಖಾಧಿಕಾರಿಯೇ ಹೊಣೆ, ಅವರು ಉದ್ದೇಶ ಪೂರ್ವಕವಾಗಿ ವಿದ್ಯುತ್ ಕಡಿತಗೊಳಿಸಿದ್ದಾರೆ ಎಂದರು.<br /> <br /> 110 ಕೆವಿ ಕಾಮಾಗಾರಿ ಮುಗಿದಿದ್ದರೂ, ಅದನ್ನು ಬಳಸಿಕೊಳ್ಳದೇ ಇಲ್ಲಿನ ಸಿಬ್ಬಂದಿ ಬೇಜವಾಬ್ದಾರಿ ಪ್ರದರ್ಶಿಸುತ್ತಿದ್ದಾರೆ. ಉದ್ಘಾಟನೆ ಮಾಡಿಯೇ ಕಾರ್ಯಾರಂಭ ಮಾಡುವ ಉದ್ದೇಶ ಸರಿಯಲ್ಲ ಎಂದು ಪರೋಕ್ಷವಾಗಿ ಶಾಸಕರನ್ನು ದೂರಿದರು.<br /> <br /> ಮನವಿ ಸ್ವೀಕರಿಸಿ ಮಾತನಾಡಿದ ಹೆಸ್ಕಾಂ ಅಧಿಕಾರಿ ಡಿ.ಎಸ್.ಗುಡ್ಡಳ್ಳಿ, ಈ ಕುರಿತು ನಮ್ಮ ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗುವುದು. ಯಾವುದೇ ಕಾರಣಕ್ಕೂ ವೈಯಕ್ತಿಕ ಉದ್ದೇಶಕ್ಕೆ ವಿದ್ಯುತ್ ಕಡಿತ ಮಾಡಿಲ್ಲ ಎಂದ ಅವರು. ವಿದ್ಯುತ್ ಸಮಸ್ಯೆಯನ್ನು ಅರಿತು ಇಲಾಖೆಯೊಂದಿಗೆ ಸ್ಪಂದಿಸುವಂತೆ ಪ್ರತಿಭಟನಾಕಾರರಿಗೆ ಮನವಿ ಮಾಡಿದರು.<br /> <br /> ನೂರಾರು ರೈತರು ಬೆಳಿಗ್ಗೆಯೇ ಕಚೇರಿಗೆ ಆಗಮಿಸಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು ಬೀಗ ಜಡಿದು ಕಚೇರಿಯ ಮುಂದೆ ಧರಣಿ ಕುಳಿತುಬಿಟ್ಟರು. ಇಲ್ಲಿನ ರೈತರ ಕೂಗು ನಮ್ಮ ಶಾಸಕರನ್ನು, ಅಧಿಕಾರಿಗಳನ್ನು ಕೇಳಿಸುತ್ತಿಲ್ಲ ಎಂದು ಧರಣಿಕಾರರು ಕೂಗಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತ್ದ್ದಿದದ್ದು ಕಂಡು ಬಂತು.<br /> <br /> ಧರಣಿಯಲ್ಲಿ ಗುಂದಗಿ ಮತ್ತು ಅಲಹಳ್ಳಿ ಗ್ರಾಮದ ಐ.ಎಸ್.ಬಿರಾದಾರ, ನಿಂಗಪ್ಪಗೌಡ ಪಾಟೀಲ, ರುದ್ರಪ್ಪ ಬಳಗುಂಪಿ, ಶ್ರೀಶೈಲ ಬಿರಾದಾರ, ಮಲ್ಲು ಬರಗುಡಿ, ನಾಗರಾಜ ಕರ್ಜಗಿ, ದಾದಾಗೌಡ ಪಾಟೀಲ, ಗಂಗಾಧರ ಆಳೂರ, ಶಿವಪ್ಪ ಪಡಶೆಟ್ಟಿ, ಜಟ್ಟೇಪ್ಪ ಪೂಜಾರಿ, ನಂದು ಬಿರಾದಾರ ಮುಂತಾದ ನೂರಾರು ಜನರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮೇಲ: </strong>ಗುಂದಗಿ ಗ್ರಾಮಕ್ಕೆ ಕಳೆದ 15ದಿನಗಳಿಂದ ಸಮರ್ಪಕ ವಿದ್ಯುತ್ ಇಲ್ಲದೆ ಗ್ರಾಮ ಕತ್ತಲಲ್ಲಿ ಕಳೆಯುವಂತೆ ಮಾಡಿದ ಇಲ್ಲಿನ ಹೆಸ್ಕಾಂ ಕಚೇರಿಯ ಕಾರ್ಯವೈಖರಿಯನ್ನು ಖಂಡಿಸಿ ಗುಂದಗಿ ಗ್ರಾಮದ ನೂರಾರು ಜನರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆಯಿತು.<br /> <br /> `ಗುಂದಗಿ ಗ್ರಾಮಕ್ಕೆ ನಿತ್ಯ ಕೇವಲ ಎರಡು ತಾಸು ವಿದ್ಯುತ್ ನೀಡಿ ನಮ್ಮನ್ನು ಇಡೀ ದಿನ ಕತ್ತಲಲ್ಲಿ ಕಳೆಯುವಂತೆ ಮಾಡಲಾಗಿದೆ. ನಮ್ಮ ಊರಿನ ಜನರು ಪಕ್ಕದ ಹಳ್ಳಿಗಳಿಗೆ ಹೋಗಿ ಹಿಟ್ಟು ಬೀಸಿಕೊಂಡು ಬರುವುದು ಸೇರಿದಂತೆ ಹತ್ತಾರು ಸಂಕಷ್ಟಗಳನ್ನು ಎದುರಿಸಿ ಬೇಸತ್ತು ಇಂದು ಈ ಹೋರಾಟಕ್ಕೆ ಇಳಿಯಬೇಕಾಯಿತು~ ಎಂದು ಗ್ರಾಮದ ಹಿರಿಯ ಐ.ಎಸ್.ಬಿರಾದಾರ ಹೇಳಿದರು.<br /> <br /> ಇಲ್ಲಿನ ಸಿಬ್ಬಂದಿ ಸರಿಯಾಗಿ ನಮ್ಮ ಗ್ರಾಮಕ್ಕೆ ವಿದ್ಯುತ್ ನೀಡಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು, ನಿತ್ಯ 2 ಗಂಟೆಯಷ್ಟೂ ವಿದ್ಯುತ್ ನೀಡಿಲ್ಲ ಎಂದು ದೂರಿದರು. ಇದಕ್ಕೆ ಇಲ್ಲಿನ ಶಾಖಾಧಿಕಾರಿಯೇ ಹೊಣೆ, ಅವರು ಉದ್ದೇಶ ಪೂರ್ವಕವಾಗಿ ವಿದ್ಯುತ್ ಕಡಿತಗೊಳಿಸಿದ್ದಾರೆ ಎಂದರು.<br /> <br /> 110 ಕೆವಿ ಕಾಮಾಗಾರಿ ಮುಗಿದಿದ್ದರೂ, ಅದನ್ನು ಬಳಸಿಕೊಳ್ಳದೇ ಇಲ್ಲಿನ ಸಿಬ್ಬಂದಿ ಬೇಜವಾಬ್ದಾರಿ ಪ್ರದರ್ಶಿಸುತ್ತಿದ್ದಾರೆ. ಉದ್ಘಾಟನೆ ಮಾಡಿಯೇ ಕಾರ್ಯಾರಂಭ ಮಾಡುವ ಉದ್ದೇಶ ಸರಿಯಲ್ಲ ಎಂದು ಪರೋಕ್ಷವಾಗಿ ಶಾಸಕರನ್ನು ದೂರಿದರು.<br /> <br /> ಮನವಿ ಸ್ವೀಕರಿಸಿ ಮಾತನಾಡಿದ ಹೆಸ್ಕಾಂ ಅಧಿಕಾರಿ ಡಿ.ಎಸ್.ಗುಡ್ಡಳ್ಳಿ, ಈ ಕುರಿತು ನಮ್ಮ ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗುವುದು. ಯಾವುದೇ ಕಾರಣಕ್ಕೂ ವೈಯಕ್ತಿಕ ಉದ್ದೇಶಕ್ಕೆ ವಿದ್ಯುತ್ ಕಡಿತ ಮಾಡಿಲ್ಲ ಎಂದ ಅವರು. ವಿದ್ಯುತ್ ಸಮಸ್ಯೆಯನ್ನು ಅರಿತು ಇಲಾಖೆಯೊಂದಿಗೆ ಸ್ಪಂದಿಸುವಂತೆ ಪ್ರತಿಭಟನಾಕಾರರಿಗೆ ಮನವಿ ಮಾಡಿದರು.<br /> <br /> ನೂರಾರು ರೈತರು ಬೆಳಿಗ್ಗೆಯೇ ಕಚೇರಿಗೆ ಆಗಮಿಸಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು ಬೀಗ ಜಡಿದು ಕಚೇರಿಯ ಮುಂದೆ ಧರಣಿ ಕುಳಿತುಬಿಟ್ಟರು. ಇಲ್ಲಿನ ರೈತರ ಕೂಗು ನಮ್ಮ ಶಾಸಕರನ್ನು, ಅಧಿಕಾರಿಗಳನ್ನು ಕೇಳಿಸುತ್ತಿಲ್ಲ ಎಂದು ಧರಣಿಕಾರರು ಕೂಗಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತ್ದ್ದಿದದ್ದು ಕಂಡು ಬಂತು.<br /> <br /> ಧರಣಿಯಲ್ಲಿ ಗುಂದಗಿ ಮತ್ತು ಅಲಹಳ್ಳಿ ಗ್ರಾಮದ ಐ.ಎಸ್.ಬಿರಾದಾರ, ನಿಂಗಪ್ಪಗೌಡ ಪಾಟೀಲ, ರುದ್ರಪ್ಪ ಬಳಗುಂಪಿ, ಶ್ರೀಶೈಲ ಬಿರಾದಾರ, ಮಲ್ಲು ಬರಗುಡಿ, ನಾಗರಾಜ ಕರ್ಜಗಿ, ದಾದಾಗೌಡ ಪಾಟೀಲ, ಗಂಗಾಧರ ಆಳೂರ, ಶಿವಪ್ಪ ಪಡಶೆಟ್ಟಿ, ಜಟ್ಟೇಪ್ಪ ಪೂಜಾರಿ, ನಂದು ಬಿರಾದಾರ ಮುಂತಾದ ನೂರಾರು ಜನರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>