<p> ಬೆಂಗಳೂರು: ಹೊರ ರಾಜ್ಯದವರಾದ ಹೇಮಾಮಾಲಿನಿ ಅವರನ್ನು ರಾಜ್ಯಸಭೆಗೆ ಕಳುಹಿಸುವ ರಾಜ್ಯ ಬಿಜೆಪಿ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವವರಿಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು, ‘ಹೇಮಾಮಾಲಿನಿ ಹೊರ ರಾಜ್ಯದವರಾಗಿರಬಹುದು. ಆದರೆ ಅವರು ಭಾರತೀಯರಲ್ಲವಾ’ ಎಂದು ಪ್ರಶ್ನಿಸಿದರು.<br /> <br /> ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಆಶಯ ಭಾಷಣ ಮಾಡಿದ ಅವರು, ‘ನಮ್ಮ ರಾಜ್ಯದವರಾಗಿದ್ದ ಎಸ್.ಆರ್. ಬೊಮ್ಮಾಯಿ, ಜಾರ್ಜ್ ಫರ್ನಾಂಡಿಸ್ ಅವರು ಬೇರೆ ರಾಜ್ಯದಿಂದ ಚುನಾಯಿತರಾಗಿದ್ದರು’ ಎಂದು ಹೇಳಿದರು.<br /> ‘ಗೋಹತ್ಯೆ ನಿಷೇಧ ಕಾಯ್ದೆ ರಾಜ್ಯದಲ್ಲಿ ಜಾರಿಯಾಗಬೇಕು. ಈ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಬೇಕು ಎಂದು ಈ ಸಮಾವೇಶದ ಮೂಲಕ ಒತ್ತಾಯಿಸುತ್ತಿದ್ದೇನೆ’ ಎಂದ ಅವರು ‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಶತಸ್ಸಿದ್ಧ’ ಎಂದು ಪುನರುಚ್ಛರಿಸಿದರು.<br /> <br /> ಕಾಶ್ಮೀರದ ಲಾಲ್ ಚೌಕ್ನಲ್ಲಿ ತ್ರಿವರ್ಣ ಧ್ವಜ ಹಾರಿಸಲು ‘ಅವಕಾಶ ಮಾಡಿಕೊಡದ’ ಕೇಂದ್ರ ಸರ್ಕಾರ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದ ಈಶ್ವರಪ್ಪ ಅವರು, ‘ಇವತ್ತಲ್ಲಾ ನಾಳೆ ಲಾಲ್ ಚೌಕ್ನಲ್ಲಿ ತ್ರಿವರ್ಣ ಧ್ವಜ ಹಾರಿಸಿಯೇ ಸಿದ್ಧ’ ಎಂದರು.<br /> <br /> ರಾಜ್ಯ ಸರ್ಕಾರವನ್ನು ಸುತ್ತಿಕೊಂಡಿರುವ ವಿವಿಧ ಹಗರಣಗಳ ಕುರಿತು ಪಕ್ಷದ ವತಿಯಿಂದ ಆಂತರಿಕ ಸಮಿತಿಯನ್ನು ರಚಿಸಿ ತನಿಖೆ ನಡೆಸಬೇಕು ಎಂದು ಈಶ್ವರಪ್ಪ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿಕೊಂಡರು.<br /> <br /> ಭಾರತೀಯ ಜನಸಂಘದ ಹಿರಿಯ ನಾಯಕರನ್ನು ಈಶ್ವರಪ್ಪ ಅವರು ತಮ್ಮ ಮಾತಿನುದ್ದಕ್ಕೂ ನೆನಪಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> ಬೆಂಗಳೂರು: ಹೊರ ರಾಜ್ಯದವರಾದ ಹೇಮಾಮಾಲಿನಿ ಅವರನ್ನು ರಾಜ್ಯಸಭೆಗೆ ಕಳುಹಿಸುವ ರಾಜ್ಯ ಬಿಜೆಪಿ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವವರಿಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು, ‘ಹೇಮಾಮಾಲಿನಿ ಹೊರ ರಾಜ್ಯದವರಾಗಿರಬಹುದು. ಆದರೆ ಅವರು ಭಾರತೀಯರಲ್ಲವಾ’ ಎಂದು ಪ್ರಶ್ನಿಸಿದರು.<br /> <br /> ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಆಶಯ ಭಾಷಣ ಮಾಡಿದ ಅವರು, ‘ನಮ್ಮ ರಾಜ್ಯದವರಾಗಿದ್ದ ಎಸ್.ಆರ್. ಬೊಮ್ಮಾಯಿ, ಜಾರ್ಜ್ ಫರ್ನಾಂಡಿಸ್ ಅವರು ಬೇರೆ ರಾಜ್ಯದಿಂದ ಚುನಾಯಿತರಾಗಿದ್ದರು’ ಎಂದು ಹೇಳಿದರು.<br /> ‘ಗೋಹತ್ಯೆ ನಿಷೇಧ ಕಾಯ್ದೆ ರಾಜ್ಯದಲ್ಲಿ ಜಾರಿಯಾಗಬೇಕು. ಈ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಬೇಕು ಎಂದು ಈ ಸಮಾವೇಶದ ಮೂಲಕ ಒತ್ತಾಯಿಸುತ್ತಿದ್ದೇನೆ’ ಎಂದ ಅವರು ‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಶತಸ್ಸಿದ್ಧ’ ಎಂದು ಪುನರುಚ್ಛರಿಸಿದರು.<br /> <br /> ಕಾಶ್ಮೀರದ ಲಾಲ್ ಚೌಕ್ನಲ್ಲಿ ತ್ರಿವರ್ಣ ಧ್ವಜ ಹಾರಿಸಲು ‘ಅವಕಾಶ ಮಾಡಿಕೊಡದ’ ಕೇಂದ್ರ ಸರ್ಕಾರ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದ ಈಶ್ವರಪ್ಪ ಅವರು, ‘ಇವತ್ತಲ್ಲಾ ನಾಳೆ ಲಾಲ್ ಚೌಕ್ನಲ್ಲಿ ತ್ರಿವರ್ಣ ಧ್ವಜ ಹಾರಿಸಿಯೇ ಸಿದ್ಧ’ ಎಂದರು.<br /> <br /> ರಾಜ್ಯ ಸರ್ಕಾರವನ್ನು ಸುತ್ತಿಕೊಂಡಿರುವ ವಿವಿಧ ಹಗರಣಗಳ ಕುರಿತು ಪಕ್ಷದ ವತಿಯಿಂದ ಆಂತರಿಕ ಸಮಿತಿಯನ್ನು ರಚಿಸಿ ತನಿಖೆ ನಡೆಸಬೇಕು ಎಂದು ಈಶ್ವರಪ್ಪ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿಕೊಂಡರು.<br /> <br /> ಭಾರತೀಯ ಜನಸಂಘದ ಹಿರಿಯ ನಾಯಕರನ್ನು ಈಶ್ವರಪ್ಪ ಅವರು ತಮ್ಮ ಮಾತಿನುದ್ದಕ್ಕೂ ನೆನಪಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>