<p><strong>ಬೆಂಗಳೂರು:</strong> ನಾಲ್ಕು ವರ್ಷಗಳ ಗೃಹ ಬಂಧನದಿಂದ ಮುಕ್ತಿ ಪಡೆದು ಎರಡು ದಿನಗಳಿಂದ ನಿಮ್ಹಾನ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೇಮಾವತಿ ಅವರ ಆರೋಗ್ಯದಲ್ಲಿ ತೀವ್ರಗತಿಯಲ್ಲಿ ಸುಧಾರಣೆ ಕಂಡುಬಂದಿದೆ.<br /> <br /> ಗುರುವಾರ ಬೆಳಿಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಯು.ಟಿ.ಖಾದರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಉಮಾಶ್ರೀ ಅವರೊಂದಿಗೆ ಹೇಮಾವತಿ ಮಾತನಾಡಿದ್ದು, ಎಲ್ಲ ಪ್ರಶ್ನೆಗಳಿಗೂ ಸೂಕ್ತವಾಗಿ ಸ್ಪಂದಿಸಿದ್ದಾರೆ.<br /> <br /> ಈ ಬಗ್ಗೆ `ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಸಚಿವ ಯು.ಟಿ.ಖಾದರ್, `ಮೊದಲಿಗಿಂತ ಲವಲವಿಕೆಯಿಂದ ಇದ್ದಾರೆ. ದಿನಪತ್ರಿಕೆಗಳನ್ನು ಓದುವ ಮಟ್ಟಿಗೆ ಸ್ಪಂದಿಸುತ್ತಿರುವುದು ಖುಷಿ ಎನಿಸಿದೆ. ಆದರೆ, ಕೈ ಕಾಲು ಚಲನೆಗೆ ಸ್ಪಲ್ಪ ಕಷ್ಟ ಪಡುತ್ತಿರುವುದರಿಂದ ವೈದ್ಯರು ಈ ಬಗ್ಗೆ ಹೆಚ್ಚಿನ ನಿಗಾವಹಿಸುತ್ತಿದ್ದಾರೆ' ಎಂದು ತಿಳಿಸಿದರು.<br /> <br /> ಮೂವತ್ತೆರಡು ವರ್ಷದ ಹೇಮಾವತಿ ಅವರು ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಖಿನ್ನತೆ ಮತ್ತು ಮಂಡಿ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ದೇಹದ ಆರೋಗ್ಯವನ್ನು ಸುಸ್ಥಿರಕ್ಕೆ ತರುವ ಸಲುವಾಗಿ ಪೌಷ್ಟಿಕಾಂಶವುಳ್ಳ ಆಹಾರವನ್ನೇ ನೀಡಲಾಗುತ್ತಿದೆ ಎಂದು ನಿಮ್ಹಾನ್ಸ್ ವೈದ್ಯಕೀಯ ಅಧೀಕ್ಷಕ ಡಾ.ವಿ.ಎಲ್.ಸತೀಶ್ ತಿಳಿಸಿದರು.<br /> <br /> `ಎದೆಯ ಎಕ್ಸ್ರೇ, ಗರ್ಭಕೋಶದ ಅಲ್ಟ್ರಾಸೌಂಡ್ ಪರೀಕ್ಷೆಗಳನ್ನು ಮಾಡಲಾಗಿದ್ದು, ದೈಹಿಕವಾಗಿ ಯಾವುದೇ ತೊಂದರೆಗಳಿಲ್ಲ ಎಂದು ವರದಿಯಿಂದ ತಿಳಿದುಬಂದಿದೆ. ಮಂಡಿ ನೋವಿನ ಸಮಸ್ಯೆಯಿರುವುದರಿಂದ ಸತತವಾಗಿ ಫಿಸಿಯೋ ಥೆರಪಿ ಮಾಡಿಸಲಾಗುತ್ತದೆ' ಎಂದು ಹೇಳಿದರು.<br /> <br /> `ಹೇಮಾವತಿ ತಂದೆ ಹಾಗೂ ತಾಯಿಯ ಬಗ್ಗೆ ಎದ್ದಿರುವ ಊಹಾಪೋಹಗಳ ಬಗ್ಗೆ ಹೇಳಲು ಸಾಧ್ಯವಿಲ್ಲ. ಆದರೆ ಆಸ್ಪತ್ರೆಗೆ ದಾಖಲಾದ ದಿನದಿಂದ ಪೋಷಕರು ಮಗಳ ಆರೈಕೆಯಲ್ಲಿ ತೊಡಗಿದ್ದಾರೆ. ಹೇಮಾವತಿ ಹೆಚ್ಚು ಉತ್ಸುಕತೆಯಿಂದ ಸ್ಪಂದಿಸುತ್ತಿದ್ದಾರೆ' ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಾಲ್ಕು ವರ್ಷಗಳ ಗೃಹ ಬಂಧನದಿಂದ ಮುಕ್ತಿ ಪಡೆದು ಎರಡು ದಿನಗಳಿಂದ ನಿಮ್ಹಾನ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೇಮಾವತಿ ಅವರ ಆರೋಗ್ಯದಲ್ಲಿ ತೀವ್ರಗತಿಯಲ್ಲಿ ಸುಧಾರಣೆ ಕಂಡುಬಂದಿದೆ.<br /> <br /> ಗುರುವಾರ ಬೆಳಿಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಯು.ಟಿ.ಖಾದರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಉಮಾಶ್ರೀ ಅವರೊಂದಿಗೆ ಹೇಮಾವತಿ ಮಾತನಾಡಿದ್ದು, ಎಲ್ಲ ಪ್ರಶ್ನೆಗಳಿಗೂ ಸೂಕ್ತವಾಗಿ ಸ್ಪಂದಿಸಿದ್ದಾರೆ.<br /> <br /> ಈ ಬಗ್ಗೆ `ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಸಚಿವ ಯು.ಟಿ.ಖಾದರ್, `ಮೊದಲಿಗಿಂತ ಲವಲವಿಕೆಯಿಂದ ಇದ್ದಾರೆ. ದಿನಪತ್ರಿಕೆಗಳನ್ನು ಓದುವ ಮಟ್ಟಿಗೆ ಸ್ಪಂದಿಸುತ್ತಿರುವುದು ಖುಷಿ ಎನಿಸಿದೆ. ಆದರೆ, ಕೈ ಕಾಲು ಚಲನೆಗೆ ಸ್ಪಲ್ಪ ಕಷ್ಟ ಪಡುತ್ತಿರುವುದರಿಂದ ವೈದ್ಯರು ಈ ಬಗ್ಗೆ ಹೆಚ್ಚಿನ ನಿಗಾವಹಿಸುತ್ತಿದ್ದಾರೆ' ಎಂದು ತಿಳಿಸಿದರು.<br /> <br /> ಮೂವತ್ತೆರಡು ವರ್ಷದ ಹೇಮಾವತಿ ಅವರು ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಖಿನ್ನತೆ ಮತ್ತು ಮಂಡಿ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ದೇಹದ ಆರೋಗ್ಯವನ್ನು ಸುಸ್ಥಿರಕ್ಕೆ ತರುವ ಸಲುವಾಗಿ ಪೌಷ್ಟಿಕಾಂಶವುಳ್ಳ ಆಹಾರವನ್ನೇ ನೀಡಲಾಗುತ್ತಿದೆ ಎಂದು ನಿಮ್ಹಾನ್ಸ್ ವೈದ್ಯಕೀಯ ಅಧೀಕ್ಷಕ ಡಾ.ವಿ.ಎಲ್.ಸತೀಶ್ ತಿಳಿಸಿದರು.<br /> <br /> `ಎದೆಯ ಎಕ್ಸ್ರೇ, ಗರ್ಭಕೋಶದ ಅಲ್ಟ್ರಾಸೌಂಡ್ ಪರೀಕ್ಷೆಗಳನ್ನು ಮಾಡಲಾಗಿದ್ದು, ದೈಹಿಕವಾಗಿ ಯಾವುದೇ ತೊಂದರೆಗಳಿಲ್ಲ ಎಂದು ವರದಿಯಿಂದ ತಿಳಿದುಬಂದಿದೆ. ಮಂಡಿ ನೋವಿನ ಸಮಸ್ಯೆಯಿರುವುದರಿಂದ ಸತತವಾಗಿ ಫಿಸಿಯೋ ಥೆರಪಿ ಮಾಡಿಸಲಾಗುತ್ತದೆ' ಎಂದು ಹೇಳಿದರು.<br /> <br /> `ಹೇಮಾವತಿ ತಂದೆ ಹಾಗೂ ತಾಯಿಯ ಬಗ್ಗೆ ಎದ್ದಿರುವ ಊಹಾಪೋಹಗಳ ಬಗ್ಗೆ ಹೇಳಲು ಸಾಧ್ಯವಿಲ್ಲ. ಆದರೆ ಆಸ್ಪತ್ರೆಗೆ ದಾಖಲಾದ ದಿನದಿಂದ ಪೋಷಕರು ಮಗಳ ಆರೈಕೆಯಲ್ಲಿ ತೊಡಗಿದ್ದಾರೆ. ಹೇಮಾವತಿ ಹೆಚ್ಚು ಉತ್ಸುಕತೆಯಿಂದ ಸ್ಪಂದಿಸುತ್ತಿದ್ದಾರೆ' ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>