<p><strong>ಹಾಸನ: </strong>ಹಾಸನ, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳ 6.95 ಲಕ್ಷ ಎಕರೆ ಭೂಮಿಗೆ ನೀರು ಒದಗಿಸುವ ಗೊರೂರಿನ ಹೇಮಾವತಿ ಜಲಾಶಯ ಭರ್ತಿಯಾಗಿದ್ದು, ಶನಿವಾರದಿಂದ ಹೆಚ್ಚುವರಿ ನೀರನ್ನು ಆರು ಕ್ರೆಸ್ಟ್ ಗೇಟ್ಗಳ ಮೂಲಕ ನದಿಗೆ ಹರಿಸಲಾಗುತ್ತಿದೆ.<br /> <br /> ಗರಿಷ್ಠ 2922 ಅಡಿಗಳ ಈ ಜಲಾಶಯದಲ್ಲಿ ಶನಿವಾರ 2921.35 ಅಡಿ ನೀರು ತುಂಬಿದೆ. ಸುಮಾರು 18 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಇರುವುದರಿಂದ 8 ಸಾವಿರ ಕ್ಯೂಸೆಕ್ ನೀರನ್ನು ಶನಿವಾರ ನದಿಗೆ ಬಿಡಲಾಗಿದೆ ಎಂದು ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ತಿಳಿಸಿದ್ದಾರೆ. ಎರಡು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವು ದರಿಂದ ಒಳಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. <br /> <br /> ಆಗಸ್ಟ್ ತಿಂಗಳ ಮಧ್ಯಭಾಗದಲ್ಲಿ ಒಮ್ಮೆ ನೀರಿನ ಸಂಗ್ರಹ ಗರಿಷ್ಠ 2020 ಅಡಿಗೆ ಏರಿದ್ದರೂ ನಂತರ ಮಳೆ ಕಡಿಮೆಯಾಗಿ ನೀರಿನ ಮಟ್ಟ ಕಡಿಮೆಯಾಗಲು ಆರಂಭವಾಗಿತ್ತು. ಇತ್ತ ಬೇಲೂರಿನ ಯಗಚಿ ಜಲಾಶಯವೂ ಶುಕ್ರವಾರ ಭರ್ತಿಯಾಗಿದ್ದು ಜಿಲ್ಲೆಯ ಮೂರೂ ಜಲಾಶಯಗಳು ತುಂಬಿದಂತಾಗಿದೆ.<br /> <br /> ಹೇಮಾವತಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಸೋಮವಾರ (ಸೆ.5) ಬೆಳಿಗ್ಗೆ 11.30ಕ್ಕೆ ಜಲಾಶಯಕ್ಕೆ ಬಾಗಿನ ಅರ್ಪಿಸುವರು. ಅದೇ ದಿನ ಸಂಜೆ ಅವರು ಯಗಚಿ ಜಾಲಾಶಯಕ್ಕೂ ಬಾಗಿನ ಅರ್ಪಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಹಾಸನ, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳ 6.95 ಲಕ್ಷ ಎಕರೆ ಭೂಮಿಗೆ ನೀರು ಒದಗಿಸುವ ಗೊರೂರಿನ ಹೇಮಾವತಿ ಜಲಾಶಯ ಭರ್ತಿಯಾಗಿದ್ದು, ಶನಿವಾರದಿಂದ ಹೆಚ್ಚುವರಿ ನೀರನ್ನು ಆರು ಕ್ರೆಸ್ಟ್ ಗೇಟ್ಗಳ ಮೂಲಕ ನದಿಗೆ ಹರಿಸಲಾಗುತ್ತಿದೆ.<br /> <br /> ಗರಿಷ್ಠ 2922 ಅಡಿಗಳ ಈ ಜಲಾಶಯದಲ್ಲಿ ಶನಿವಾರ 2921.35 ಅಡಿ ನೀರು ತುಂಬಿದೆ. ಸುಮಾರು 18 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಇರುವುದರಿಂದ 8 ಸಾವಿರ ಕ್ಯೂಸೆಕ್ ನೀರನ್ನು ಶನಿವಾರ ನದಿಗೆ ಬಿಡಲಾಗಿದೆ ಎಂದು ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ತಿಳಿಸಿದ್ದಾರೆ. ಎರಡು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವು ದರಿಂದ ಒಳಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. <br /> <br /> ಆಗಸ್ಟ್ ತಿಂಗಳ ಮಧ್ಯಭಾಗದಲ್ಲಿ ಒಮ್ಮೆ ನೀರಿನ ಸಂಗ್ರಹ ಗರಿಷ್ಠ 2020 ಅಡಿಗೆ ಏರಿದ್ದರೂ ನಂತರ ಮಳೆ ಕಡಿಮೆಯಾಗಿ ನೀರಿನ ಮಟ್ಟ ಕಡಿಮೆಯಾಗಲು ಆರಂಭವಾಗಿತ್ತು. ಇತ್ತ ಬೇಲೂರಿನ ಯಗಚಿ ಜಲಾಶಯವೂ ಶುಕ್ರವಾರ ಭರ್ತಿಯಾಗಿದ್ದು ಜಿಲ್ಲೆಯ ಮೂರೂ ಜಲಾಶಯಗಳು ತುಂಬಿದಂತಾಗಿದೆ.<br /> <br /> ಹೇಮಾವತಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಸೋಮವಾರ (ಸೆ.5) ಬೆಳಿಗ್ಗೆ 11.30ಕ್ಕೆ ಜಲಾಶಯಕ್ಕೆ ಬಾಗಿನ ಅರ್ಪಿಸುವರು. ಅದೇ ದಿನ ಸಂಜೆ ಅವರು ಯಗಚಿ ಜಾಲಾಶಯಕ್ಕೂ ಬಾಗಿನ ಅರ್ಪಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>