<p>ಮಧುಗಿರಿ : ತಾಲ್ಲೂಕಿನ ಕೆರೆಗಳಿಗೆ ಹೇಮಾವತಿ ನಾಲೆಯಿಂದ ನೀರು ಹರಿಸುವ ಯೋಜನೆ ಅನುಷ್ಠಾನ ಗೊಳಿಸಲು ಸರ್ಕಾರವನ್ನು ಒತ್ತಾ ಯಿಸಲು ಹೋರಾಟ ಹಮ್ಮಿಕೊಳ್ಳುವ ಅಗತ್ಯವಿದೆ ಎಂದು ರಾಜ್ಯ ಚುನಾವಣಾ ಆಯೋಗದ ನಿವೃತ್ತ ಆಯುಕ್ತ ಸಿ.ಚಿಕ್ಕಣ್ಣ ತಿಳಿಸಿದ್ದಾರೆ.<br /> <br /> ನೇತ್ರಾವತಿ ನದಿ ತಿರುವು ಯೋಜನೆ ಶೀಘ್ರವಾಗಿ ಆಗುವಂತಹ ಕೆಲಸಗಳಲ್ಲ. ಈ ಯೋಜನೆಗಳನ್ನು ನಂಬಿದರೆ ನಿರಂತರ ಬರಗಾಲಕ್ಕೆ ತುತ್ತಾಗಿರುವ ತಾಲ್ಲೂಕಿನ ಜನ ಜೀವನಕ್ಕಾಗಿ ಗುಳೆ ಹೊಗುವ ಸ್ಧಿತಿ ನಿರ್ಮಾಣವಾಗುತ್ತದೆ ಎಂದು ಗೋಷ್ಠಿಯಲ್ಲಿ ಹೇಳಿದರು.<br /> <br /> ತಾಲ್ಲೂಕಿನ ಕೆರೆಗಳಿಗೆ ಕಾಲುವೆ ಮುಖಾಂತರ ನೈಸರ್ಗಿಕವಾಗಿ ನೀರು ಹರಿಸುವಂತಹ ಯೋಜನೆ ಅನುಷ್ಠಾನ ಗೊಳಿಸಲು ಸರ್ಕಾರವನ್ನು ಒತ್ತಾಯಿಸಲಾಗುವುದು. <br /> <br /> ಮಧುಗಿರಿ ಕ್ಷೇತ್ರದಲ್ಲಿ ರಾಜಕೀಯ ಮಾಡಬೇಕು ಎಂಬ ಉದ್ದೇಶವಿಲ್ಲ. ಚುನಾಯಿತ ಪ್ರತಿನಿಧಿಗಳು ಧೃಡ ಮನಸ್ಸಿನಿಂದ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಹೇಳಿದರು.<br /> <br /> ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಡಾ.ಜಿ.ಕೆ.ಜಯರಾಂ ಮಾತನಾಡಿ, ಸ್ಧಳೀಯರು ಶಾಸಕರಾಗಿರುವುದರಿಂದ ಸ್ಥಳೀಯರ ಸಮಸ್ಯೆಗೆ ಪರಿಹಾರ ದೊರಕುತ್ತದೆ ಎಂದರು.<br /> <br /> ಪ್ರೊ.ಬಾಣದರಂಗಯ್ಯ, ರೋಟರಿ ಕ್ಲಬ್ ಅಧ್ಯಕ್ಷ ಕೆ.ಎಂ.ಮಧು, ಕಾರ್ಯದರ್ಶಿ ಲತಾ ನಾರಾಯಣ, ನಾಗರಿಕ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ಎಸ್.ವಿ.ಎಲ್.ಶ್ರೀಧರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಧುಗಿರಿ : ತಾಲ್ಲೂಕಿನ ಕೆರೆಗಳಿಗೆ ಹೇಮಾವತಿ ನಾಲೆಯಿಂದ ನೀರು ಹರಿಸುವ ಯೋಜನೆ ಅನುಷ್ಠಾನ ಗೊಳಿಸಲು ಸರ್ಕಾರವನ್ನು ಒತ್ತಾ ಯಿಸಲು ಹೋರಾಟ ಹಮ್ಮಿಕೊಳ್ಳುವ ಅಗತ್ಯವಿದೆ ಎಂದು ರಾಜ್ಯ ಚುನಾವಣಾ ಆಯೋಗದ ನಿವೃತ್ತ ಆಯುಕ್ತ ಸಿ.ಚಿಕ್ಕಣ್ಣ ತಿಳಿಸಿದ್ದಾರೆ.<br /> <br /> ನೇತ್ರಾವತಿ ನದಿ ತಿರುವು ಯೋಜನೆ ಶೀಘ್ರವಾಗಿ ಆಗುವಂತಹ ಕೆಲಸಗಳಲ್ಲ. ಈ ಯೋಜನೆಗಳನ್ನು ನಂಬಿದರೆ ನಿರಂತರ ಬರಗಾಲಕ್ಕೆ ತುತ್ತಾಗಿರುವ ತಾಲ್ಲೂಕಿನ ಜನ ಜೀವನಕ್ಕಾಗಿ ಗುಳೆ ಹೊಗುವ ಸ್ಧಿತಿ ನಿರ್ಮಾಣವಾಗುತ್ತದೆ ಎಂದು ಗೋಷ್ಠಿಯಲ್ಲಿ ಹೇಳಿದರು.<br /> <br /> ತಾಲ್ಲೂಕಿನ ಕೆರೆಗಳಿಗೆ ಕಾಲುವೆ ಮುಖಾಂತರ ನೈಸರ್ಗಿಕವಾಗಿ ನೀರು ಹರಿಸುವಂತಹ ಯೋಜನೆ ಅನುಷ್ಠಾನ ಗೊಳಿಸಲು ಸರ್ಕಾರವನ್ನು ಒತ್ತಾಯಿಸಲಾಗುವುದು. <br /> <br /> ಮಧುಗಿರಿ ಕ್ಷೇತ್ರದಲ್ಲಿ ರಾಜಕೀಯ ಮಾಡಬೇಕು ಎಂಬ ಉದ್ದೇಶವಿಲ್ಲ. ಚುನಾಯಿತ ಪ್ರತಿನಿಧಿಗಳು ಧೃಡ ಮನಸ್ಸಿನಿಂದ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಹೇಳಿದರು.<br /> <br /> ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಡಾ.ಜಿ.ಕೆ.ಜಯರಾಂ ಮಾತನಾಡಿ, ಸ್ಧಳೀಯರು ಶಾಸಕರಾಗಿರುವುದರಿಂದ ಸ್ಥಳೀಯರ ಸಮಸ್ಯೆಗೆ ಪರಿಹಾರ ದೊರಕುತ್ತದೆ ಎಂದರು.<br /> <br /> ಪ್ರೊ.ಬಾಣದರಂಗಯ್ಯ, ರೋಟರಿ ಕ್ಲಬ್ ಅಧ್ಯಕ್ಷ ಕೆ.ಎಂ.ಮಧು, ಕಾರ್ಯದರ್ಶಿ ಲತಾ ನಾರಾಯಣ, ನಾಗರಿಕ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ಎಸ್.ವಿ.ಎಲ್.ಶ್ರೀಧರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>