<p><strong>ನವದೆಹಲಿ: </strong>ಹೈದರಾಬಾದ್- ಕರ್ನಾಟಕ ಭಾಗದ ಜನರ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ಸಂವಿಧಾನದ 371 ಕಲಮಿಗೆ ತಿದ್ದುಪಡಿ ಮಾಡಿ ತೀರಾ ಹಿಂದುಳಿದಿರುವ ಈ ಭಾಗದ ಆರು ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಪ್ರಸ್ತಾಪ ಶುಕ್ರವಾರ ಸಂಪುಟದ `ರಾಜಕೀಯ ವ್ಯವಹಾರಗಳ ಸಮಿತಿ~ (ಸಿಸಿಪಿಎ) ಮುಂದೆ ಚರ್ಚೆಗೆ ಬರುತ್ತಿದೆ.<br /> <br /> ಕೇಂದ್ರ ಗೃಹ ಸಚಿವಾಲಯ ಸಿದ್ಧಪಡಿಸಿರುವ ಪ್ರಸ್ತಾಪಕ್ಕೆ ರಾಜಕೀಯ ವ್ಯವಹಾರಗಳ ಸಮಿತಿ ಒಪ್ಪಿಗೆ ನೀಡಿದ ಬಳಿಕ ಸಚಿವ ಸಂಪುಟದ ಮುಂದೆ ಬರಲಿದೆ. ಆ ನಂತರ ಸರ್ಕಾರ ಮಸೂದೆ ಕರಡು ಸಿದ್ಧಪಡಿಸಿ ಸಂಸತ್ತಿನ ಮುಂದೆ ಮಂಡಿಸಲಿದೆ.<br /> <br /> ಇದು ಸಂವಿಧಾನ ತಿದ್ದುಪಡಿ ಮಸೂದೆ ಆಗಿರುವುದರಿಂದ ಅಂಗೀಕಾರಕ್ಕೆ 2/3ರಷ್ಟು ಬೆಂಬಲ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಯುಪಿಎ ಸರ್ಕಾರ ತನ್ನ ಮಿತ್ರ ಪಕ್ಷಗಳು ಹಾಗೂ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಹೈದರಾಬಾದ್- ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ಬೇಡಿಕೆ ಬಹು ವರ್ಷಗಳಿಂದ ಕೇಳಿಬರುತ್ತದೆ. ಅಲ್ಲದೆ, ಇದಕ್ಕೆ ಎಲ್ಲ ಪಕ್ಷಗಳ ಬೆಂಬಲವೂ ಇರುವುದರಿಂದ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗುವ ಸಾಧ್ಯತೆಯಿದೆ.<br /> <br /> ಗೃಹ ಸಚಿವಾಲಯ ಸಿದ್ಧಪಡಿಸಿರುವ ಪ್ರಸ್ತಾಪ ಬೀದರ್, ಗುಲ್ಬರ್ಗ, ರಾಯಚೂರು, ಯಾದಗೀರ್, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ಜನರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಪ್ರತ್ಯೇಕ ಮೀಸಲಾತಿ ಕಲ್ಪಿಸುವ ಉದ್ದೇಶ ಹೊಂದಿದೆ. ಇದಕ್ಕೆ ರಾಜ್ಯ ಸರ್ಕಾರ ಪ್ರತ್ಯೇಕ ನೇಮಕಾತಿ ನಿಯಮ ರೂಪಿಸಬೇಕಿದೆ. ಅಲ್ಲದೆ, ಈ ಭಾಗದ ಅಭಿವೃದ್ಧಿಗೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪಿಸಲು ಮಸೂದೆ ಅವಕಾಶ ಕಲ್ಪಿಸಲಿದೆ. ಹೈದರಾಬಾದ್- ಕರ್ನಾಟಕದ ವಿಶೇಷ ಸ್ಥಾನಮಾನದ ಪ್ರಸ್ತಾಪ ಮಹಾರಾಷ್ಟ್ರದ ವಿದರ್ಭ ಹಾಗೂ ಆಂಧ್ರದ ತೆಲಂಗಾಣಕ್ಕಿಂತ ಉತ್ತಮವಾಗಿದೆ. ಕಾಂಗ್ರೆಸ್ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ. ಜನ ಬೆಂಬಲ ಗಳಿಸಲು ಮಸೂದೆ ಜಾರಿಗೆ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಹೈದರಾಬಾದ್- ಕರ್ನಾಟಕ ಭಾಗದ ಜನರ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ಸಂವಿಧಾನದ 371 ಕಲಮಿಗೆ ತಿದ್ದುಪಡಿ ಮಾಡಿ ತೀರಾ ಹಿಂದುಳಿದಿರುವ ಈ ಭಾಗದ ಆರು ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಪ್ರಸ್ತಾಪ ಶುಕ್ರವಾರ ಸಂಪುಟದ `ರಾಜಕೀಯ ವ್ಯವಹಾರಗಳ ಸಮಿತಿ~ (ಸಿಸಿಪಿಎ) ಮುಂದೆ ಚರ್ಚೆಗೆ ಬರುತ್ತಿದೆ.<br /> <br /> ಕೇಂದ್ರ ಗೃಹ ಸಚಿವಾಲಯ ಸಿದ್ಧಪಡಿಸಿರುವ ಪ್ರಸ್ತಾಪಕ್ಕೆ ರಾಜಕೀಯ ವ್ಯವಹಾರಗಳ ಸಮಿತಿ ಒಪ್ಪಿಗೆ ನೀಡಿದ ಬಳಿಕ ಸಚಿವ ಸಂಪುಟದ ಮುಂದೆ ಬರಲಿದೆ. ಆ ನಂತರ ಸರ್ಕಾರ ಮಸೂದೆ ಕರಡು ಸಿದ್ಧಪಡಿಸಿ ಸಂಸತ್ತಿನ ಮುಂದೆ ಮಂಡಿಸಲಿದೆ.<br /> <br /> ಇದು ಸಂವಿಧಾನ ತಿದ್ದುಪಡಿ ಮಸೂದೆ ಆಗಿರುವುದರಿಂದ ಅಂಗೀಕಾರಕ್ಕೆ 2/3ರಷ್ಟು ಬೆಂಬಲ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಯುಪಿಎ ಸರ್ಕಾರ ತನ್ನ ಮಿತ್ರ ಪಕ್ಷಗಳು ಹಾಗೂ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಹೈದರಾಬಾದ್- ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ಬೇಡಿಕೆ ಬಹು ವರ್ಷಗಳಿಂದ ಕೇಳಿಬರುತ್ತದೆ. ಅಲ್ಲದೆ, ಇದಕ್ಕೆ ಎಲ್ಲ ಪಕ್ಷಗಳ ಬೆಂಬಲವೂ ಇರುವುದರಿಂದ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗುವ ಸಾಧ್ಯತೆಯಿದೆ.<br /> <br /> ಗೃಹ ಸಚಿವಾಲಯ ಸಿದ್ಧಪಡಿಸಿರುವ ಪ್ರಸ್ತಾಪ ಬೀದರ್, ಗುಲ್ಬರ್ಗ, ರಾಯಚೂರು, ಯಾದಗೀರ್, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ಜನರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಪ್ರತ್ಯೇಕ ಮೀಸಲಾತಿ ಕಲ್ಪಿಸುವ ಉದ್ದೇಶ ಹೊಂದಿದೆ. ಇದಕ್ಕೆ ರಾಜ್ಯ ಸರ್ಕಾರ ಪ್ರತ್ಯೇಕ ನೇಮಕಾತಿ ನಿಯಮ ರೂಪಿಸಬೇಕಿದೆ. ಅಲ್ಲದೆ, ಈ ಭಾಗದ ಅಭಿವೃದ್ಧಿಗೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪಿಸಲು ಮಸೂದೆ ಅವಕಾಶ ಕಲ್ಪಿಸಲಿದೆ. ಹೈದರಾಬಾದ್- ಕರ್ನಾಟಕದ ವಿಶೇಷ ಸ್ಥಾನಮಾನದ ಪ್ರಸ್ತಾಪ ಮಹಾರಾಷ್ಟ್ರದ ವಿದರ್ಭ ಹಾಗೂ ಆಂಧ್ರದ ತೆಲಂಗಾಣಕ್ಕಿಂತ ಉತ್ತಮವಾಗಿದೆ. ಕಾಂಗ್ರೆಸ್ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ. ಜನ ಬೆಂಬಲ ಗಳಿಸಲು ಮಸೂದೆ ಜಾರಿಗೆ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>