<p><strong>ಬೆಂಗಳೂರು:</strong> ರಾಜ್ಯದಲ್ಲಿರುವ ಆರು ವರ್ಷಕ್ಕಿಂತ ಚಿಕ್ಕ ಮಕ್ಕಳ ಪೈಕಿ ಸುಮಾರು 12 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತ್ದ್ದಿದರೆ, ಸುಮಾರು 21 ಲಕ್ಷ ಮಕ್ಕಳು ಅಲ್ಪ ಪ್ರಮಾಣದ ಅಪೌಷ್ಟಿಕತೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸರ್ಕಾರ ಹೈಕೋರ್ಟ್ಗೆ ಗುರುವಾರ ತಿಳಿಸಿದೆ.<br /> <br /> ರಾಯಚೂರಿನಲ್ಲಿ ಹಲವು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಕುರಿತಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ ಈ ಲಿಖಿತ ಮಾಹಿತಿ ನೀಡಿದೆ.<br /> <br /> ಅಪೌಷ್ಟಿಕತೆ ಕುರಿತಾಗಿ ಪರಿಶೀಲನೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ನಿರ್ದೇಶನದ ಮೇರೆಗೆ ಸರ್ಕಾರ ಸಮಿತಿ ರಚನೆ ಮಾಡಿದೆ. ಈ ಸಮಿತಿ ನೀಡಿರುವ ವರದಿಯ ಕುರಿತು ಈಗ ಸರ್ಕಾರ ಮಾಹಿತಿ ನೀಡಿದೆ.<br /> <br /> `ರಾಜ್ಯದಲ್ಲಿ 10,50,006 ಲಕ್ಷ ಬಾಲಕರು ಹಾಗೂ 10,50,812 ಬಾಲಕಿಯರು ಅಲ್ಪಪ್ರಮಾಣದ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. `ರಾಷ್ಟ್ರೀಯ ಸಾರ್ವಜನಿಕ ಸಹಕಾರ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ~ 2010ರಲ್ಲಿ ನಡೆಸಿರುವ ಅಧ್ಯಯನದ ಪ್ರಕಾರ, ಮೂರು ವರ್ಷಕ್ಕಿಂತ ಕೆಳಗಿನ ಶೇ 28.7 ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ~ ಎಂಬ ಅಂಕಿ ಅಂಶವನ್ನು ವಿವರಿಸಲಾಗಿದೆ. <br /> <br /> `ಬಾಲ್ಯ ವಿವಾಹ, ಆಹಾರದ ಕೊರತೆ, ಬಡತನ, ಪದೇ ಪದೇ ಗರ್ಭಿಣಿ ಆಗುವುದು ಮುಂತಾದ ಕಾರಣಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಅಪೌಷ್ಟಿಕತೆ ಪ್ರಮಾಣ ಹೆಚ್ಚಿದೆ~ ಎಂದು ಅದರಲ್ಲಿ ತಿಳಿಸಲಾಗಿದೆ.<br /> <br /> ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಇದರ ವಿಚಾರಣೆ ನಡೆಸುತ್ತಿದ್ದಾಗ ಮುಷ್ಕರ ನಿರತ ವಕೀಲರು ಗಲಾಟೆ ಆರಂಭಿಸಿದರು. ಆದುದರಿಂದ ವಿಚಾರಣೆ ಮುಂದಕ್ಕೆ ಹಾಕಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿರುವ ಆರು ವರ್ಷಕ್ಕಿಂತ ಚಿಕ್ಕ ಮಕ್ಕಳ ಪೈಕಿ ಸುಮಾರು 12 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತ್ದ್ದಿದರೆ, ಸುಮಾರು 21 ಲಕ್ಷ ಮಕ್ಕಳು ಅಲ್ಪ ಪ್ರಮಾಣದ ಅಪೌಷ್ಟಿಕತೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸರ್ಕಾರ ಹೈಕೋರ್ಟ್ಗೆ ಗುರುವಾರ ತಿಳಿಸಿದೆ.<br /> <br /> ರಾಯಚೂರಿನಲ್ಲಿ ಹಲವು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಕುರಿತಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ ಈ ಲಿಖಿತ ಮಾಹಿತಿ ನೀಡಿದೆ.<br /> <br /> ಅಪೌಷ್ಟಿಕತೆ ಕುರಿತಾಗಿ ಪರಿಶೀಲನೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ನಿರ್ದೇಶನದ ಮೇರೆಗೆ ಸರ್ಕಾರ ಸಮಿತಿ ರಚನೆ ಮಾಡಿದೆ. ಈ ಸಮಿತಿ ನೀಡಿರುವ ವರದಿಯ ಕುರಿತು ಈಗ ಸರ್ಕಾರ ಮಾಹಿತಿ ನೀಡಿದೆ.<br /> <br /> `ರಾಜ್ಯದಲ್ಲಿ 10,50,006 ಲಕ್ಷ ಬಾಲಕರು ಹಾಗೂ 10,50,812 ಬಾಲಕಿಯರು ಅಲ್ಪಪ್ರಮಾಣದ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. `ರಾಷ್ಟ್ರೀಯ ಸಾರ್ವಜನಿಕ ಸಹಕಾರ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ~ 2010ರಲ್ಲಿ ನಡೆಸಿರುವ ಅಧ್ಯಯನದ ಪ್ರಕಾರ, ಮೂರು ವರ್ಷಕ್ಕಿಂತ ಕೆಳಗಿನ ಶೇ 28.7 ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ~ ಎಂಬ ಅಂಕಿ ಅಂಶವನ್ನು ವಿವರಿಸಲಾಗಿದೆ. <br /> <br /> `ಬಾಲ್ಯ ವಿವಾಹ, ಆಹಾರದ ಕೊರತೆ, ಬಡತನ, ಪದೇ ಪದೇ ಗರ್ಭಿಣಿ ಆಗುವುದು ಮುಂತಾದ ಕಾರಣಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಅಪೌಷ್ಟಿಕತೆ ಪ್ರಮಾಣ ಹೆಚ್ಚಿದೆ~ ಎಂದು ಅದರಲ್ಲಿ ತಿಳಿಸಲಾಗಿದೆ.<br /> <br /> ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಇದರ ವಿಚಾರಣೆ ನಡೆಸುತ್ತಿದ್ದಾಗ ಮುಷ್ಕರ ನಿರತ ವಕೀಲರು ಗಲಾಟೆ ಆರಂಭಿಸಿದರು. ಆದುದರಿಂದ ವಿಚಾರಣೆ ಮುಂದಕ್ಕೆ ಹಾಕಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>