<p>ಬೆಂಗಳೂರು:ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸೂಚಿಸಿರುವ ನಿಯಮಾವಳಿಗಳ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಸ್ಪಷ್ಟನೆ ಕೋರಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು.<br /> <br /> ಗೃಹ ಕಚೇರಿ `ಕೃಷ್ಣಾ~ದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, `ಸುಪ್ರೀಂ ಕೋರ್ಟ್ನಿಂದ ಸ್ಪಷ್ಟನೆ ದೊರೆತ ನಂತರವೇ ನೂತನ ಉಪ ಲೋಕಾಯುಕ್ತರ ನೇಮಕ ಸಂಬಂಧ ಮುಂದಿನ ಕ್ರಮ ಕೈಗೊಳ್ಳಲಾಗುವುದು~ ಎಂದರು. <br /> <br /> ಪ್ರಧಾನಿ ಇದೇ 16ರಂದು ಆಯೋಜಿಸಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಬೇಕಿರುವ ಕಾರಣ, ಬರಪೀಡಿತ ಪ್ರದೇಶಗಳಲ್ಲಿ ಅಂದು ಪ್ರವಾಸ ಕೈಗೊಳ್ಳುತ್ತಿಲ್ಲ. ಆದರೆ 17 ಮತ್ತು 18ರಂದು ವಿಜಾಪುರ, ಬೀದರ ಅಥವಾ ಗುಲ್ಬರ್ಗ ಜಿಲ್ಲೆಗಳಲ್ಲಿ ಪ್ರವಾಸ ಮಾಡುವುದಾಗಿ ತಿಳಿಸಿದರು.<br /> <br /> ಜನರ ಸಮಸ್ಯೆಗಳಿಗೆ ಸ್ಪಂದಿಸಬಲ್ಲ, ಟೀಕೆ-ಟಿಪ್ಪಣಿಗಳನ್ನು ಸಲಹೆಯ ರೂಪದಲ್ಲಿ ಸ್ವೀಕರಿಸಬಲ್ಲ ವ್ಯಕ್ತಿಯೊಬ್ಬರನ್ನು ಬೆಂಗಳೂರು ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡಲಾಗುವುದು ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.<br /> <br /> ಕಾವೇರಿ ವಿವಾದ, ಬರ ಸೇರಿದಂತೆ ಇತರ ವಿಷಯಗಳ ಕುರಿತು ಚರ್ಚಿಸಲು ಇದೇ 19ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಅನಂತರ ನವದೆಹಲಿಗೆ ಸರ್ವಪಕ್ಷಗಳ ನಿಯೋಗ ಕೊಂಡೊಯ್ಯಲಾಗುವುದು ಎಂದರು.</p>.<p>ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಶಂಕರ ಬಿದರಿ ಅವರನ್ನು ನೇಮಕ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯಗಳ ಕುರಿತು ರಾಜ್ಯ ಅಡ್ವೊಕೇಟ್ ಜನರಲ್ ಜೊತೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು:ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸೂಚಿಸಿರುವ ನಿಯಮಾವಳಿಗಳ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಸ್ಪಷ್ಟನೆ ಕೋರಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು.<br /> <br /> ಗೃಹ ಕಚೇರಿ `ಕೃಷ್ಣಾ~ದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, `ಸುಪ್ರೀಂ ಕೋರ್ಟ್ನಿಂದ ಸ್ಪಷ್ಟನೆ ದೊರೆತ ನಂತರವೇ ನೂತನ ಉಪ ಲೋಕಾಯುಕ್ತರ ನೇಮಕ ಸಂಬಂಧ ಮುಂದಿನ ಕ್ರಮ ಕೈಗೊಳ್ಳಲಾಗುವುದು~ ಎಂದರು. <br /> <br /> ಪ್ರಧಾನಿ ಇದೇ 16ರಂದು ಆಯೋಜಿಸಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಬೇಕಿರುವ ಕಾರಣ, ಬರಪೀಡಿತ ಪ್ರದೇಶಗಳಲ್ಲಿ ಅಂದು ಪ್ರವಾಸ ಕೈಗೊಳ್ಳುತ್ತಿಲ್ಲ. ಆದರೆ 17 ಮತ್ತು 18ರಂದು ವಿಜಾಪುರ, ಬೀದರ ಅಥವಾ ಗುಲ್ಬರ್ಗ ಜಿಲ್ಲೆಗಳಲ್ಲಿ ಪ್ರವಾಸ ಮಾಡುವುದಾಗಿ ತಿಳಿಸಿದರು.<br /> <br /> ಜನರ ಸಮಸ್ಯೆಗಳಿಗೆ ಸ್ಪಂದಿಸಬಲ್ಲ, ಟೀಕೆ-ಟಿಪ್ಪಣಿಗಳನ್ನು ಸಲಹೆಯ ರೂಪದಲ್ಲಿ ಸ್ವೀಕರಿಸಬಲ್ಲ ವ್ಯಕ್ತಿಯೊಬ್ಬರನ್ನು ಬೆಂಗಳೂರು ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡಲಾಗುವುದು ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.<br /> <br /> ಕಾವೇರಿ ವಿವಾದ, ಬರ ಸೇರಿದಂತೆ ಇತರ ವಿಷಯಗಳ ಕುರಿತು ಚರ್ಚಿಸಲು ಇದೇ 19ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಅನಂತರ ನವದೆಹಲಿಗೆ ಸರ್ವಪಕ್ಷಗಳ ನಿಯೋಗ ಕೊಂಡೊಯ್ಯಲಾಗುವುದು ಎಂದರು.</p>.<p>ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಶಂಕರ ಬಿದರಿ ಅವರನ್ನು ನೇಮಕ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯಗಳ ಕುರಿತು ರಾಜ್ಯ ಅಡ್ವೊಕೇಟ್ ಜನರಲ್ ಜೊತೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>