<p><strong>ಬೆಂಗಳೂರು: </strong>ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿಯ ರಾಸಲೀಲೆ ಪ್ರಕರಣದ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾಗಿರುವ ಲೆನಿನ್ ಕುರುಪ್ಪನ್ ವಿರುದ್ಧ ಸ್ವಾಮಿ ಹಾಗೂ ಅವರ ಭಕ್ತರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.<br /> <br /> ಲೆನಿನ್ ಅವರು ನಡೆಸುತ್ತಿದ್ದ ಪತ್ರಿಕಾಗೋಷ್ಠಿಗೆ ಅಡ್ಡಿ ಮಾಡಿದ ಕಾರಣ, ನಗರದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿ ರುವ ಪ್ರಥಮ ಮಾಹಿತಿ ವರದಿ ರದ್ದತಿಗೆ ಒಟ್ಟು ಏಳು ಮಂದಿ ಕೋರ್ಟ್ ಮೊರೆ ಹೋಗಿದ್ದಾರೆ.<br /> <br /> ಸ್ವಾಮಿ ಹಾಗೂ ಅವರ ಭಕ್ತರಿಂದ ತಮಗೆ ಬೆದರಿಕೆ ಇರುವುದಕ್ಕೆ ಸಂಬಂಧಿಸಿದಂತೆ ಇದೇ 9ರಂದು ಪ್ರೆಸ್ಕ್ಲಬ್ನಲ್ಲಿ ಲೆನಿನ್ ಅವರು ಪತ್ರಿಕಾಗೋಷ್ಠಿ ನಡೆಸಿದ್ದರು. ಆ ಸಂದರ್ಭದಲ್ಲಿ ಕ್ಲಬ್ನ ದ್ವಾರದ ಮುಂದೆ ಗಲಾಟೆ ಮಾಡಿರುವ ಆರೋಪಕ್ಕೆ ಇವರೆಲ್ಲ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಲೆನಿನ್ ಎಲ್ಲರ ವಿರುದ್ಧ ದೂರು ದಾಖಲಿಸಿದ್ದಾರೆ.<br /> <br /> ‘ಲೆನಿನ್ ಅವರು ಒಂದಲ್ಲಾ ಒಂದು ನೆಪ ಒಡ್ಡಿ ಮೊದಲಿನಿಂದಲೂ ಇದೇ ರೀತಿ ದೂರು ದಾಖಲು ಮಾಡುತ್ತಲೇ ಬಂದಿದ್ದಾರೆ. ಇದು ಉದ್ದೇಶ ಪೂರ್ವಕವಾಗಿ ದಾಖಲಿಸಿರುವ ದೂರಾಗಿದೆ. ಇದರಲ್ಲಿ ಯಾವುದೇ ಹುರುಳಿಲ್ಲ’ ಎಂಬಿತ್ಯಾದಿಯಾಗಿ ಅರ್ಜಿಯಲ್ಲಿ ಪದ್ಮಿನಿ, ಪ್ರೀತಾ, ನಿತ್ಯಾನಂದ ಮುಂತಾದವರು ದೂರಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿಯ ರಾಸಲೀಲೆ ಪ್ರಕರಣದ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾಗಿರುವ ಲೆನಿನ್ ಕುರುಪ್ಪನ್ ವಿರುದ್ಧ ಸ್ವಾಮಿ ಹಾಗೂ ಅವರ ಭಕ್ತರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.<br /> <br /> ಲೆನಿನ್ ಅವರು ನಡೆಸುತ್ತಿದ್ದ ಪತ್ರಿಕಾಗೋಷ್ಠಿಗೆ ಅಡ್ಡಿ ಮಾಡಿದ ಕಾರಣ, ನಗರದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿ ರುವ ಪ್ರಥಮ ಮಾಹಿತಿ ವರದಿ ರದ್ದತಿಗೆ ಒಟ್ಟು ಏಳು ಮಂದಿ ಕೋರ್ಟ್ ಮೊರೆ ಹೋಗಿದ್ದಾರೆ.<br /> <br /> ಸ್ವಾಮಿ ಹಾಗೂ ಅವರ ಭಕ್ತರಿಂದ ತಮಗೆ ಬೆದರಿಕೆ ಇರುವುದಕ್ಕೆ ಸಂಬಂಧಿಸಿದಂತೆ ಇದೇ 9ರಂದು ಪ್ರೆಸ್ಕ್ಲಬ್ನಲ್ಲಿ ಲೆನಿನ್ ಅವರು ಪತ್ರಿಕಾಗೋಷ್ಠಿ ನಡೆಸಿದ್ದರು. ಆ ಸಂದರ್ಭದಲ್ಲಿ ಕ್ಲಬ್ನ ದ್ವಾರದ ಮುಂದೆ ಗಲಾಟೆ ಮಾಡಿರುವ ಆರೋಪಕ್ಕೆ ಇವರೆಲ್ಲ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಲೆನಿನ್ ಎಲ್ಲರ ವಿರುದ್ಧ ದೂರು ದಾಖಲಿಸಿದ್ದಾರೆ.<br /> <br /> ‘ಲೆನಿನ್ ಅವರು ಒಂದಲ್ಲಾ ಒಂದು ನೆಪ ಒಡ್ಡಿ ಮೊದಲಿನಿಂದಲೂ ಇದೇ ರೀತಿ ದೂರು ದಾಖಲು ಮಾಡುತ್ತಲೇ ಬಂದಿದ್ದಾರೆ. ಇದು ಉದ್ದೇಶ ಪೂರ್ವಕವಾಗಿ ದಾಖಲಿಸಿರುವ ದೂರಾಗಿದೆ. ಇದರಲ್ಲಿ ಯಾವುದೇ ಹುರುಳಿಲ್ಲ’ ಎಂಬಿತ್ಯಾದಿಯಾಗಿ ಅರ್ಜಿಯಲ್ಲಿ ಪದ್ಮಿನಿ, ಪ್ರೀತಾ, ನಿತ್ಯಾನಂದ ಮುಂತಾದವರು ದೂರಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>