<p>ಯಾದಗಿರಿ: ಹೈದರಾಬಾದ್ ನಿಜಾಮನ ಆಡಳಿತದಿಂದ ಮುಕ್ತಿ ಪಡೆದು ಆರು ದಶಕಗಳು ಕಳೆದರೂ ನಮಗೆ ನಿಜವಾದ ಸ್ವಾತಂತ್ರ್ಯ ಇನ್ನೂ ಬಂದಿಲ್ಲ. ಪ್ರಭಾವಿ ರಾಜಕಾರಣಿಗಳ ನಿರ್ಲಕ್ಷ್ಯ, ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಈ ಭಾಗದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ ಎಂದು ನಗರಸಭೆ ಅಧ್ಯಕ್ಷೆ ನಾಗರತ್ನಾ ಅನಪೂರ ವಿಷಾದ ವ್ಯಕ್ತಪಡಿಸಿದರು. <br /> <br /> ಜಿಲ್ಲಾಡಳಿತ ಹಾಗೂ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಿತಿ ವತಿಯಿಂದ ನಗರದ ಡಾನ್ ಬಾಸ್ಕೋ ಸಂಸ್ಥೆಯಲ್ಲಿ ಸೋಮವಾರ ಏರ್ಪಡಿಸಿದ್ದ `ಅಂದಿನ ನಿಜಾಮ ಆಡಳಿತ: ಇಂದಿನ ಪ್ರಜಾಡಳಿತ~ ಕುರಿತ ವಿಚಾರ ಸಂಕಿರಣದಲ್ಲಿ ಅತಿಥಿಗಳಾಗಿ ಅವರು ಮಾತನಾಡಿದರು. <br /> <br /> ಅಂದಿನ ಮಹನೀಯರ ತ್ಯಾಗ, ಬಲಿದಾನದ ಫಲವಾಗಿ ಹೈದರಾಬಾದ್ ಕರ್ನಾಟಕ ಪ್ರದೇಶ ಸ್ವಾತಂತ್ರ್ಯವಾಗಿದೆ. ಸರ್ದಾರ್ ವಲಭಭಾಯಿ ಪಟೇಲ್ರಂತದ ದಿಟ್ಟ ನಾಯಕರ ಗಟ್ಟಿ ನಿರ್ಧಾರದಿಂದಾಗಿ ಇಂದು ಸ್ವಾತಂತ್ರ್ಯದ ಸುಖವನ್ನು ಅನುಭವಿಸುತ್ತಿದ್ದೇವೆ. ಅದನ್ನು ಉಳಿಸಿಕೊಳ್ಳುವುದರ ಜೊತೆಗೆ ನಮ್ಮ ಭಾಗದ ಅಭಿವೃದ್ಧಿಗೆ ನಾವೇ ಸಿದ್ಧರಾಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. <br /> <br /> ಹೈದರಾಬಾದ್ ಕರ್ನಾಟಕದ ವಿಮೋಚನೆಗೆ ಕಾರಣೀಕರ್ತರಾದ ಸರ್ದಾರ್ ವಲಭಭಾಯಿ ಪಟೇಲ್ರ ಪುತ್ಥಳಿಯನ್ನು ನಗರದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿದ್ದು, ಈ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು. <br /> <br /> ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅಯ್ಯಣ್ಣ ಹುಂಡೇಕಾರ, ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಯ ಬಗ್ಗೆ ಈ ಭಾಗದ ಜನಪ್ರತಿನಿಧಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ಮಾಡಿದರು. <br /> <br /> ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧಾರೆಡ್ಡಿ ಬಲಕಲ್ ಅಧ್ಯಕ್ಷತೆ ವಹಿಸಿದ್ದರು. ಡಾನ್ ಬಾಸ್ಕೋ ಸಂಸ್ಥೆ ಆಡಳಿತಾಧಿಕಾರಿ ಫಾ.ಸನ್ನಿ, ಪತ್ರಕರ್ತರಾದ ಶೇಖರಗೌಡ ಬೆನಕನಹಳ್ಳಿ, ನಾರಾಯಣ ಹೆಗಡೆ, ರಾಜು ಹೆಂದೆ, ಉಪನ್ಯಾಸಕ ಭೀಮರಾಯ ಲಿಂಗೇರಿ ಮುಂತಾದವರು ವೇದಿಕೆಯಲ್ಲಿದ್ದರು. <br /> <br /> ಕಮಲಾ ಮತ್ತು ಯಂಕಮ್ಮ ಪ್ರಾರ್ಥಿಸಿದರು. ಪ್ರಾಂಶುಪಾಲ ಸುರೇಶ ಬಾಬು ಸ್ವಾಗತಿಸಿದರು. ಉಪನ್ಯಾಸಕ ಅತೀಕ್ ಅಹ್ಮದ್ ನಿರೂಪಿಸಿದರು. ಉಪನ್ಯಾಸಕ ಅಂಬು ನಾಯಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ಹೈದರಾಬಾದ್ ನಿಜಾಮನ ಆಡಳಿತದಿಂದ ಮುಕ್ತಿ ಪಡೆದು ಆರು ದಶಕಗಳು ಕಳೆದರೂ ನಮಗೆ ನಿಜವಾದ ಸ್ವಾತಂತ್ರ್ಯ ಇನ್ನೂ ಬಂದಿಲ್ಲ. ಪ್ರಭಾವಿ ರಾಜಕಾರಣಿಗಳ ನಿರ್ಲಕ್ಷ್ಯ, ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಈ ಭಾಗದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ ಎಂದು ನಗರಸಭೆ ಅಧ್ಯಕ್ಷೆ ನಾಗರತ್ನಾ ಅನಪೂರ ವಿಷಾದ ವ್ಯಕ್ತಪಡಿಸಿದರು. <br /> <br /> ಜಿಲ್ಲಾಡಳಿತ ಹಾಗೂ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಿತಿ ವತಿಯಿಂದ ನಗರದ ಡಾನ್ ಬಾಸ್ಕೋ ಸಂಸ್ಥೆಯಲ್ಲಿ ಸೋಮವಾರ ಏರ್ಪಡಿಸಿದ್ದ `ಅಂದಿನ ನಿಜಾಮ ಆಡಳಿತ: ಇಂದಿನ ಪ್ರಜಾಡಳಿತ~ ಕುರಿತ ವಿಚಾರ ಸಂಕಿರಣದಲ್ಲಿ ಅತಿಥಿಗಳಾಗಿ ಅವರು ಮಾತನಾಡಿದರು. <br /> <br /> ಅಂದಿನ ಮಹನೀಯರ ತ್ಯಾಗ, ಬಲಿದಾನದ ಫಲವಾಗಿ ಹೈದರಾಬಾದ್ ಕರ್ನಾಟಕ ಪ್ರದೇಶ ಸ್ವಾತಂತ್ರ್ಯವಾಗಿದೆ. ಸರ್ದಾರ್ ವಲಭಭಾಯಿ ಪಟೇಲ್ರಂತದ ದಿಟ್ಟ ನಾಯಕರ ಗಟ್ಟಿ ನಿರ್ಧಾರದಿಂದಾಗಿ ಇಂದು ಸ್ವಾತಂತ್ರ್ಯದ ಸುಖವನ್ನು ಅನುಭವಿಸುತ್ತಿದ್ದೇವೆ. ಅದನ್ನು ಉಳಿಸಿಕೊಳ್ಳುವುದರ ಜೊತೆಗೆ ನಮ್ಮ ಭಾಗದ ಅಭಿವೃದ್ಧಿಗೆ ನಾವೇ ಸಿದ್ಧರಾಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. <br /> <br /> ಹೈದರಾಬಾದ್ ಕರ್ನಾಟಕದ ವಿಮೋಚನೆಗೆ ಕಾರಣೀಕರ್ತರಾದ ಸರ್ದಾರ್ ವಲಭಭಾಯಿ ಪಟೇಲ್ರ ಪುತ್ಥಳಿಯನ್ನು ನಗರದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿದ್ದು, ಈ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು. <br /> <br /> ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅಯ್ಯಣ್ಣ ಹುಂಡೇಕಾರ, ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಯ ಬಗ್ಗೆ ಈ ಭಾಗದ ಜನಪ್ರತಿನಿಧಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ಮಾಡಿದರು. <br /> <br /> ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧಾರೆಡ್ಡಿ ಬಲಕಲ್ ಅಧ್ಯಕ್ಷತೆ ವಹಿಸಿದ್ದರು. ಡಾನ್ ಬಾಸ್ಕೋ ಸಂಸ್ಥೆ ಆಡಳಿತಾಧಿಕಾರಿ ಫಾ.ಸನ್ನಿ, ಪತ್ರಕರ್ತರಾದ ಶೇಖರಗೌಡ ಬೆನಕನಹಳ್ಳಿ, ನಾರಾಯಣ ಹೆಗಡೆ, ರಾಜು ಹೆಂದೆ, ಉಪನ್ಯಾಸಕ ಭೀಮರಾಯ ಲಿಂಗೇರಿ ಮುಂತಾದವರು ವೇದಿಕೆಯಲ್ಲಿದ್ದರು. <br /> <br /> ಕಮಲಾ ಮತ್ತು ಯಂಕಮ್ಮ ಪ್ರಾರ್ಥಿಸಿದರು. ಪ್ರಾಂಶುಪಾಲ ಸುರೇಶ ಬಾಬು ಸ್ವಾಗತಿಸಿದರು. ಉಪನ್ಯಾಸಕ ಅತೀಕ್ ಅಹ್ಮದ್ ನಿರೂಪಿಸಿದರು. ಉಪನ್ಯಾಸಕ ಅಂಬು ನಾಯಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>