<p><strong>ಬೆಂಗಳೂರು:</strong> ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ಮಾಡಿ ಹೈದರಾಬಾದ್-ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಕೇಂದ್ರವನ್ನು ಒತ್ತಾಯಿಸಲು ದೆಹಲಿಗೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷಗಳ ನಾಯಕರು ಶುಕ್ರವಾರ ಬೆಂಬಲ ವ್ಯಕ್ತಪಡಿಸಿದರು. <br /> <br /> ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರೆದಿದ್ದ ಸಭೆಯಲ್ಲಿ ಹೈ-ಕ ಭಾಗದ ಶಾಸಕರು ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು. ‘ಅಧಿವೇಶನ ಮುಗಿದ ನಂತರ ಮತ್ತೊಮ್ಮೆ ಸಭೆ ಸೇರಿ ಪ್ರಧಾನಿ ಅವರನ್ನು ಭೇಟಿ ಮಾಡಲು ದಿನಾಂಕ ನಿಗದಿಪಡಿಸಲು ನಿರ್ಧರಿಸಲಾಯಿತು. ಹೈ-ಕ ಅಭಿವೃದ್ಧಿಯಾಗಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ, ಇದರಲ್ಲಿ ಯಾವುದೇ ರಾಜಕೀಯ ಇಲ್ಲ’ ಎಂದು ಸಭೆಯ ನಂತರ ಕಾಂಗ್ರೆಸ್ಸಿನ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು. <br /> <br /> ‘ಹೈ-ಕ ವಿಶೇಷ ಸ್ಥಾನಮಾನ ನೀಡುವಂತೆ ಹಿಂದೊಮ್ಮೆ ರಾಜ್ಯ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಅಂದಿನ ಕೇಂದ್ರ ಗೃಹ ಸಚಿವ ಎಲ್.ಕೆ. ಅಡ್ವಾಣಿ ತಿರಸ್ಕರಿಸಿದ್ದರು. ಈಗ ಪ್ರಧಾನಿ ಮನಮೋಹನ ಸಿಂಗ್ ಅವರು ಮಹಾರಾಷ್ಟ್ರದ ವಿದರ್ಭ ಮಾದರಿಯಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸಬಹುದೇ? ಎಂದು ರಾಜ್ಯದ ಅಭಿಪ್ರಾಯ ಕೇಳಿದ್ದಾರೆ. <br /> <br /> ಇದು ಸೂಕ್ತವಲ್ಲ. ಸ್ಥಳೀಯರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ 371- ಡಿ ವಿಧಿಗೆ ತಿದ್ದುಪಡಿ ಮಾಡುವುದೇ ಸೂಕ್ತ ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು’ ಎಂದು ಅವರು ಹೇಳಿದರು.ಜೆಡಿಎಸ್ನ ಎಚ್.ಡಿ. ರೇವಣ್ಣ ಮಾತನಾಡಿ, ‘ಆಂಧ್ರದ ತೆಲಂಗಾಣಕ್ಕಿಂತ ಹೈ-ಕ ಪ್ರದೇಶ ಹಿಂದುಳಿದಿದೆ. ಅಭಿವೃದ್ಧಿಪಡಿಸಲು ವಿಶೇಷ ಸ್ಥಾನಮಾನ ನೀಡಬೇಕಾಗಿರುವುದು ಅನಿವಾರ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ಮಾಡಿ ಹೈದರಾಬಾದ್-ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಕೇಂದ್ರವನ್ನು ಒತ್ತಾಯಿಸಲು ದೆಹಲಿಗೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷಗಳ ನಾಯಕರು ಶುಕ್ರವಾರ ಬೆಂಬಲ ವ್ಯಕ್ತಪಡಿಸಿದರು. <br /> <br /> ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರೆದಿದ್ದ ಸಭೆಯಲ್ಲಿ ಹೈ-ಕ ಭಾಗದ ಶಾಸಕರು ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು. ‘ಅಧಿವೇಶನ ಮುಗಿದ ನಂತರ ಮತ್ತೊಮ್ಮೆ ಸಭೆ ಸೇರಿ ಪ್ರಧಾನಿ ಅವರನ್ನು ಭೇಟಿ ಮಾಡಲು ದಿನಾಂಕ ನಿಗದಿಪಡಿಸಲು ನಿರ್ಧರಿಸಲಾಯಿತು. ಹೈ-ಕ ಅಭಿವೃದ್ಧಿಯಾಗಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ, ಇದರಲ್ಲಿ ಯಾವುದೇ ರಾಜಕೀಯ ಇಲ್ಲ’ ಎಂದು ಸಭೆಯ ನಂತರ ಕಾಂಗ್ರೆಸ್ಸಿನ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು. <br /> <br /> ‘ಹೈ-ಕ ವಿಶೇಷ ಸ್ಥಾನಮಾನ ನೀಡುವಂತೆ ಹಿಂದೊಮ್ಮೆ ರಾಜ್ಯ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಅಂದಿನ ಕೇಂದ್ರ ಗೃಹ ಸಚಿವ ಎಲ್.ಕೆ. ಅಡ್ವಾಣಿ ತಿರಸ್ಕರಿಸಿದ್ದರು. ಈಗ ಪ್ರಧಾನಿ ಮನಮೋಹನ ಸಿಂಗ್ ಅವರು ಮಹಾರಾಷ್ಟ್ರದ ವಿದರ್ಭ ಮಾದರಿಯಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸಬಹುದೇ? ಎಂದು ರಾಜ್ಯದ ಅಭಿಪ್ರಾಯ ಕೇಳಿದ್ದಾರೆ. <br /> <br /> ಇದು ಸೂಕ್ತವಲ್ಲ. ಸ್ಥಳೀಯರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ 371- ಡಿ ವಿಧಿಗೆ ತಿದ್ದುಪಡಿ ಮಾಡುವುದೇ ಸೂಕ್ತ ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು’ ಎಂದು ಅವರು ಹೇಳಿದರು.ಜೆಡಿಎಸ್ನ ಎಚ್.ಡಿ. ರೇವಣ್ಣ ಮಾತನಾಡಿ, ‘ಆಂಧ್ರದ ತೆಲಂಗಾಣಕ್ಕಿಂತ ಹೈ-ಕ ಪ್ರದೇಶ ಹಿಂದುಳಿದಿದೆ. ಅಭಿವೃದ್ಧಿಪಡಿಸಲು ವಿಶೇಷ ಸ್ಥಾನಮಾನ ನೀಡಬೇಕಾಗಿರುವುದು ಅನಿವಾರ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>