<p><strong>ರಾಮನಗರ: </strong>ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಸುಸಜ್ಜಿತವಾದ ಹೈಟೆಕ್ ಬಸ್ ನಿಲ್ದಾಣವನ್ನು ಅಂದಾಜು 3.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಕೂಡಲೇ ಆದೇಶ ಹೊರಡಿಸುವುದಾಗಿ ಸಾರಿಗೆ ಹಾಗೂ ಗೃಹ ಸಚಿವ ಆರ್.ಅಶೋಕ ಹೇಳಿದರು.<br /> <br /> ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ.ಯೋಗೀಶ್ವರ್ ಅವರೊಂದಿಗೆ ರಾಮನಗರ ಜಿಲ್ಲಾ ಕೇಂದ್ರದ ಬಸ್ ನಿಲ್ದಾಣವನ್ನು ಪರಿಶೀಲಿಸಿದ ಅವರು ನಂತರ ಸುದ್ದಿಗಾರರ ಜತೆ ಮಾತನಾಡಿದರು.ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇರುವ ರಾಮನಗರದ್ಲ್ಲಲಿ ಉತ್ತಮವಾದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಇಲ್ಲ ಎಂಬುದನ್ನು ಸಚಿವ ಯೋಗೀಶ್ವರ್ ಅವರು ನನ್ನ ಗಮನಕ್ಕೆ ತಂದಿದ್ದಾರೆ. <br /> <br /> ಹಾಗಾಗಿ ದಿಢೀರ್ ಸ್ಥಳ ಪರಿಶೀಲನೆಗೆ ಬಂದು, ಸುಂದರ್ ಬಸ್ ನಿಲ್ದಾಣ ನಿರ್ಮಾಣಕ್ಕೆ ತೀರ್ಮಾನ ತೆಗೆದುಕೊಂಡಿದ್ದೇನೆ. ಹಾಲಿ ಬಸ್ ನಿಲ್ದಾಣದಲ್ಲಿ ಇರುವ ಹಳೆ ಕಟ್ಟಡವನ್ನು ತೆರವುಗೊಳಿಸಿ, ಅಲ್ಲಿ ಹೊಸ ನಿಲ್ದಾಣದ ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ಪ್ರತಿಕ್ರಿಯಿಸಿದರು.<br /> <br /> ಇಲ್ಲಿನ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗೆ ರಾಜ್ಯದ ವಿವಿಧ ಭಾಗದ ಸಹಸ್ರಾರು ಸಂಖ್ಯೆಯಲ್ಲಿ ರೇಷ್ಮೆ ಕೃಷಿಕರು ನಿತ್ಯ ರಾಮನಗರಕ್ಕೆ ಬಂದು ಹೋಗುತ್ತಾರೆ. ಅಲ್ಲದೆ ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಮತ್ತಿತರರು ನಿತ್ಯ ಸಂಚರಿಸುವ ಈ ಭಾಗದಲ್ಲಿ ಉತ್ತಮ ಬಸ್ ನಿಲ್ದಾಣದ ಅಗತ್ಯವಿದ್ದು, ತುರ್ತು ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಹೇಳಿದರು.<br /> <br /> ಗೂಡು ಮಾರುಕಟ್ಟೆ ಮುಂಭಾಗದಲ್ಲಿ ಸುಮಾರು ಎರಡು ಎಕರೆ ಜಾಗವನ್ನು ಇಲ್ಲಿನ ಶಾಸಕರು ಬಿಡಿಸಿಕೊಟ್ಟರೆ ಅಲ್ಲಿಯೂ ಒಂದು ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿಕೊಡಲು ಸರ್ಕಾರ ಸಿದ್ಧವಿದೆ ಎಂದು ಸಚಿವ ಅಶೋಕ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಸುಸಜ್ಜಿತವಾದ ಹೈಟೆಕ್ ಬಸ್ ನಿಲ್ದಾಣವನ್ನು ಅಂದಾಜು 3.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಕೂಡಲೇ ಆದೇಶ ಹೊರಡಿಸುವುದಾಗಿ ಸಾರಿಗೆ ಹಾಗೂ ಗೃಹ ಸಚಿವ ಆರ್.ಅಶೋಕ ಹೇಳಿದರು.<br /> <br /> ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ.ಯೋಗೀಶ್ವರ್ ಅವರೊಂದಿಗೆ ರಾಮನಗರ ಜಿಲ್ಲಾ ಕೇಂದ್ರದ ಬಸ್ ನಿಲ್ದಾಣವನ್ನು ಪರಿಶೀಲಿಸಿದ ಅವರು ನಂತರ ಸುದ್ದಿಗಾರರ ಜತೆ ಮಾತನಾಡಿದರು.ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇರುವ ರಾಮನಗರದ್ಲ್ಲಲಿ ಉತ್ತಮವಾದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಇಲ್ಲ ಎಂಬುದನ್ನು ಸಚಿವ ಯೋಗೀಶ್ವರ್ ಅವರು ನನ್ನ ಗಮನಕ್ಕೆ ತಂದಿದ್ದಾರೆ. <br /> <br /> ಹಾಗಾಗಿ ದಿಢೀರ್ ಸ್ಥಳ ಪರಿಶೀಲನೆಗೆ ಬಂದು, ಸುಂದರ್ ಬಸ್ ನಿಲ್ದಾಣ ನಿರ್ಮಾಣಕ್ಕೆ ತೀರ್ಮಾನ ತೆಗೆದುಕೊಂಡಿದ್ದೇನೆ. ಹಾಲಿ ಬಸ್ ನಿಲ್ದಾಣದಲ್ಲಿ ಇರುವ ಹಳೆ ಕಟ್ಟಡವನ್ನು ತೆರವುಗೊಳಿಸಿ, ಅಲ್ಲಿ ಹೊಸ ನಿಲ್ದಾಣದ ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ಪ್ರತಿಕ್ರಿಯಿಸಿದರು.<br /> <br /> ಇಲ್ಲಿನ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗೆ ರಾಜ್ಯದ ವಿವಿಧ ಭಾಗದ ಸಹಸ್ರಾರು ಸಂಖ್ಯೆಯಲ್ಲಿ ರೇಷ್ಮೆ ಕೃಷಿಕರು ನಿತ್ಯ ರಾಮನಗರಕ್ಕೆ ಬಂದು ಹೋಗುತ್ತಾರೆ. ಅಲ್ಲದೆ ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಮತ್ತಿತರರು ನಿತ್ಯ ಸಂಚರಿಸುವ ಈ ಭಾಗದಲ್ಲಿ ಉತ್ತಮ ಬಸ್ ನಿಲ್ದಾಣದ ಅಗತ್ಯವಿದ್ದು, ತುರ್ತು ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಹೇಳಿದರು.<br /> <br /> ಗೂಡು ಮಾರುಕಟ್ಟೆ ಮುಂಭಾಗದಲ್ಲಿ ಸುಮಾರು ಎರಡು ಎಕರೆ ಜಾಗವನ್ನು ಇಲ್ಲಿನ ಶಾಸಕರು ಬಿಡಿಸಿಕೊಟ್ಟರೆ ಅಲ್ಲಿಯೂ ಒಂದು ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿಕೊಡಲು ಸರ್ಕಾರ ಸಿದ್ಧವಿದೆ ಎಂದು ಸಚಿವ ಅಶೋಕ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>