<p>ಯಲಬುರ್ಗಾ: ಪ್ರಾದೇಶಿಕ ಅಸಮಾನತೆಯಿಂದಾಗಿ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಜನತೆಯು ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವುದನ್ನು ಹೋಗಲಾಡಿಸಲು ವಿಶೇಷ ಸ್ಥಾನಮಾನ ಕಲ್ಪಿಸುವುದು ಅಗತ್ಯವಿದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಹೋರಾಟ ಹಾಗೂ ರಾಜಕಾರಣಿಗಳ ಇಚ್ಚಾಶಕ್ತಿ ಅಗತ್ಯವಿದೆ ಎಂದು ಹಿರಿಯ ಸಾಹಿತಿ ಮುನಿಯಪ್ಪ ಹುಬ್ಬಳ್ಳಿ ಹೇಳಿದರು. <br /> <br /> ಎಸ್.ಎ. ನಿಂಗೋಜಿ ಬಿ.ಇಡ್. ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಹೈ.ಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ತಾಲ್ಲೂಕಿನ ಮಾಳೆಕೊಪ್ಪ, ಸಿದ್ನೆಕೊಪ್ಪ ಹಾಗೂ ಮುಧೋಳದ ದೇಸಾಯಿ ಮನೆತನಗಳು ವಿಮೋಚನೆಗೆ ವಿಶೇಷ ಕೊಡುಗೆ ನೀಡಿವೆ ಎಂದರು. <br /> <br /> ಹಿರಿಯ ಸಾಹಿತಿ ಇತಿಹಾಸ ಸಂಶೋಧಕ ಎಸ್.ಎಚ್. ಪಾಟೀಲ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯುವಕರು, ಶಾಲೆ ಕಾಲೇಜಿನ ವಿದ್ಯಾರ್ಥಿಗಳು ಒಗ್ಗೂಡಿ ಹೋರಾಡದೇ ಈ ಪ್ರದೇಶದ ಅಭಿವೃದ್ಧಿಯ ಯೋಗ ಲಭಿಸದು. ಅನುದಾನ ಕೊಡುವ ಬದಲು ಬೇರೆ ರಾಜ್ಯಗಳ ಅಭಿವೃದ್ಧಿ ಮಾದರಿಯಲ್ಲಿ ವಿಶೇಷ ಸ್ಥಾನಮಾನ ಪಡೆದುಕೊಳ್ಳಲು ಜಾಗೃತರಾಗಲು ಕರೆ ನೀಡಿದರು. <br /> <br /> ಪದವಿ ಕಾಲೇಜಿನ ಉಪನ್ಯಾಸಕಿ ನಾಗರತ್ನ ತಮ್ಮಿನಾಳ, ಶಿವರಾಜ ಗುರಿಕಾರ ಮಾತನಾಡಿ ಹೋರಾಟವೇ ಜೀವನದ ಕ್ರಮ ಎಂಬಂತೆ ಬದುಕು ಕಟ್ಟಿಕೊಂಡು ಅದೇ ರೂಢಿ ಯಲ್ಲಿ ಕಾಲ ಕಳೆಯುತ್ತಿರುವ ಈ ಪ್ರದೇಶದ ಜನತೆ ಇಂದಿಗೂ ಸಂವಿಧಾನಬದ್ಧ ಹಕ್ಕುಗಳಿಗೆ ಹಾಗೂ ಸ್ಥಾನಮಾನಕ್ಕೆ ಹೋರಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು. <br /> <br /> ಕಾಲೇಜಿನ ಪ್ರಾಚಾರ್ಯ ರವಿ ನಿಂಗೋಜಿ, ಸಂಸ್ಥೆಯ ಉಪಾಧ್ಯಕ್ಷ ವೀರಣ್ಣ ನಿಂಗೋಜಿ ಮಾತನಾಡಿದರು. ಅನೇಕರು ಅತಿಥಿಗಳಾಗಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಬುರ್ಗಾ: ಪ್ರಾದೇಶಿಕ ಅಸಮಾನತೆಯಿಂದಾಗಿ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಜನತೆಯು ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವುದನ್ನು ಹೋಗಲಾಡಿಸಲು ವಿಶೇಷ ಸ್ಥಾನಮಾನ ಕಲ್ಪಿಸುವುದು ಅಗತ್ಯವಿದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಹೋರಾಟ ಹಾಗೂ ರಾಜಕಾರಣಿಗಳ ಇಚ್ಚಾಶಕ್ತಿ ಅಗತ್ಯವಿದೆ ಎಂದು ಹಿರಿಯ ಸಾಹಿತಿ ಮುನಿಯಪ್ಪ ಹುಬ್ಬಳ್ಳಿ ಹೇಳಿದರು. <br /> <br /> ಎಸ್.ಎ. ನಿಂಗೋಜಿ ಬಿ.ಇಡ್. ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಹೈ.ಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ತಾಲ್ಲೂಕಿನ ಮಾಳೆಕೊಪ್ಪ, ಸಿದ್ನೆಕೊಪ್ಪ ಹಾಗೂ ಮುಧೋಳದ ದೇಸಾಯಿ ಮನೆತನಗಳು ವಿಮೋಚನೆಗೆ ವಿಶೇಷ ಕೊಡುಗೆ ನೀಡಿವೆ ಎಂದರು. <br /> <br /> ಹಿರಿಯ ಸಾಹಿತಿ ಇತಿಹಾಸ ಸಂಶೋಧಕ ಎಸ್.ಎಚ್. ಪಾಟೀಲ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯುವಕರು, ಶಾಲೆ ಕಾಲೇಜಿನ ವಿದ್ಯಾರ್ಥಿಗಳು ಒಗ್ಗೂಡಿ ಹೋರಾಡದೇ ಈ ಪ್ರದೇಶದ ಅಭಿವೃದ್ಧಿಯ ಯೋಗ ಲಭಿಸದು. ಅನುದಾನ ಕೊಡುವ ಬದಲು ಬೇರೆ ರಾಜ್ಯಗಳ ಅಭಿವೃದ್ಧಿ ಮಾದರಿಯಲ್ಲಿ ವಿಶೇಷ ಸ್ಥಾನಮಾನ ಪಡೆದುಕೊಳ್ಳಲು ಜಾಗೃತರಾಗಲು ಕರೆ ನೀಡಿದರು. <br /> <br /> ಪದವಿ ಕಾಲೇಜಿನ ಉಪನ್ಯಾಸಕಿ ನಾಗರತ್ನ ತಮ್ಮಿನಾಳ, ಶಿವರಾಜ ಗುರಿಕಾರ ಮಾತನಾಡಿ ಹೋರಾಟವೇ ಜೀವನದ ಕ್ರಮ ಎಂಬಂತೆ ಬದುಕು ಕಟ್ಟಿಕೊಂಡು ಅದೇ ರೂಢಿ ಯಲ್ಲಿ ಕಾಲ ಕಳೆಯುತ್ತಿರುವ ಈ ಪ್ರದೇಶದ ಜನತೆ ಇಂದಿಗೂ ಸಂವಿಧಾನಬದ್ಧ ಹಕ್ಕುಗಳಿಗೆ ಹಾಗೂ ಸ್ಥಾನಮಾನಕ್ಕೆ ಹೋರಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು. <br /> <br /> ಕಾಲೇಜಿನ ಪ್ರಾಚಾರ್ಯ ರವಿ ನಿಂಗೋಜಿ, ಸಂಸ್ಥೆಯ ಉಪಾಧ್ಯಕ್ಷ ವೀರಣ್ಣ ನಿಂಗೋಜಿ ಮಾತನಾಡಿದರು. ಅನೇಕರು ಅತಿಥಿಗಳಾಗಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>