<p>ಕೋಲಾರ: ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಕುರುಡುಮಲೆ ಗ್ರಾಮದಲ್ಲಿ ಮಳೆ ನೀರು ಸಂಗ್ರಹಣೆಗೆ ಹೊಂಡ ನಿರ್ಮಿಸಲು ಅನುಮೋದನೆ ನೀಡಬೇಕು ಎಂದು ಕೋರಿ ಗ್ರಾಮ ಪಂಚಾಯಿತಿ ಸದಸ್ಯರು ನಗರದಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ ಅವರಿಗೆ ಮನವಿ ಸಲ್ಲಿಸಿದರು. <br /> <br /> ಗ್ರಾಮದ ಬೆಟ್ಟದಿಂದ ವ್ಯರ್ಥವಾಗಿ ಹರಿಯುವ ಮಳೆ ನೀರನ್ನು ತಡೆದು ಹೊಂಡಕ್ಕೆ ಹರಿಸಿ, ಶುದ್ಧೀಕರಿಸಿ ಗ್ರಾಮದ ಜನರಿಗೆ ಕುಡಿಯಲು ಪೂರೈಸ ಬೇಕೆಂದು ಮಂಗಳವಾರ ನಡೆದ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಧ ರಿಸಲಾಗಿದೆ. ಅದಕ್ಕೆ ಅನುಮೋದನೆ ನೀಡಬೇಕು ಎಂದು ಕೋರಿದರು.<br /> <br /> ಗ್ರಾಮದ ಗಣಪತಿ ದೇವಾಲಯದ ಮುಂದೆ ಹೊಂಡ ನಿರ್ಮಿಸಿ, ಅಲ್ಲಿ ಸಂಗ್ರಹವಾಗುವ ನೀರನ್ನು ಶುದ್ಧೀಕರಿಸಿ ದರೆ ಸುಮಾರು 3500 ಗ್ರಾಮಸ್ಥರಿಗೆ ಮತ್ತು ದೇವಾಲಯಕ್ಕೆ ಬರುವ ಭಕ್ತರಿಗೆ ಕುಡಿಯುವ ನೀರನ್ನು ಪೂರೈ ಸಲು ಸಾಧ್ಯ. ಈ ನಿಟ್ಟಿನಲ್ಲಿ ಯೋಜನೆ ತಯಾರಿಸಲು, ಅದಕ್ಕಾಗಿ ಸಮೀಕ್ಷೆ ನಡೆಸಲು ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು. <br /> <br /> ಗ್ರಾ.ಪಂ. ಸದಸ್ಯರಾದ ಎಂ. ಗೋಪಾಲ್, ಕೆ.ಮುನಿಯಪ್ಪ, ಜಿ.ಕೆ. ವೆಂಕಟರಾಂ, ಗ್ರಾಮಸ್ಥರಾದ ವಿನಾಯಕ, ನಾಗಮ್ಮ, ನಾರಾಯಣಪ್ಪ, ಚಲಪತಿ, ನಾರಾಯಣಸ್ವಾಮಿ, ಶಿವಣ್ಣ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಕುರುಡುಮಲೆ ಗ್ರಾಮದಲ್ಲಿ ಮಳೆ ನೀರು ಸಂಗ್ರಹಣೆಗೆ ಹೊಂಡ ನಿರ್ಮಿಸಲು ಅನುಮೋದನೆ ನೀಡಬೇಕು ಎಂದು ಕೋರಿ ಗ್ರಾಮ ಪಂಚಾಯಿತಿ ಸದಸ್ಯರು ನಗರದಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ ಅವರಿಗೆ ಮನವಿ ಸಲ್ಲಿಸಿದರು. <br /> <br /> ಗ್ರಾಮದ ಬೆಟ್ಟದಿಂದ ವ್ಯರ್ಥವಾಗಿ ಹರಿಯುವ ಮಳೆ ನೀರನ್ನು ತಡೆದು ಹೊಂಡಕ್ಕೆ ಹರಿಸಿ, ಶುದ್ಧೀಕರಿಸಿ ಗ್ರಾಮದ ಜನರಿಗೆ ಕುಡಿಯಲು ಪೂರೈಸ ಬೇಕೆಂದು ಮಂಗಳವಾರ ನಡೆದ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಧ ರಿಸಲಾಗಿದೆ. ಅದಕ್ಕೆ ಅನುಮೋದನೆ ನೀಡಬೇಕು ಎಂದು ಕೋರಿದರು.<br /> <br /> ಗ್ರಾಮದ ಗಣಪತಿ ದೇವಾಲಯದ ಮುಂದೆ ಹೊಂಡ ನಿರ್ಮಿಸಿ, ಅಲ್ಲಿ ಸಂಗ್ರಹವಾಗುವ ನೀರನ್ನು ಶುದ್ಧೀಕರಿಸಿ ದರೆ ಸುಮಾರು 3500 ಗ್ರಾಮಸ್ಥರಿಗೆ ಮತ್ತು ದೇವಾಲಯಕ್ಕೆ ಬರುವ ಭಕ್ತರಿಗೆ ಕುಡಿಯುವ ನೀರನ್ನು ಪೂರೈ ಸಲು ಸಾಧ್ಯ. ಈ ನಿಟ್ಟಿನಲ್ಲಿ ಯೋಜನೆ ತಯಾರಿಸಲು, ಅದಕ್ಕಾಗಿ ಸಮೀಕ್ಷೆ ನಡೆಸಲು ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು. <br /> <br /> ಗ್ರಾ.ಪಂ. ಸದಸ್ಯರಾದ ಎಂ. ಗೋಪಾಲ್, ಕೆ.ಮುನಿಯಪ್ಪ, ಜಿ.ಕೆ. ವೆಂಕಟರಾಂ, ಗ್ರಾಮಸ್ಥರಾದ ವಿನಾಯಕ, ನಾಗಮ್ಮ, ನಾರಾಯಣಪ್ಪ, ಚಲಪತಿ, ನಾರಾಯಣಸ್ವಾಮಿ, ಶಿವಣ್ಣ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>