<p><strong>ಶಿವಮೊಗ್ಗ:</strong> ದೇಶದ ರಕ್ಷಣೆಗೆ ಹೋರಾಡುವ ಸೈನಿಕರ ಸೇವೆ ಬಗ್ಗೆ ಕೇವಲ ಮಾತಿನಲ್ಲಿ ಹೊಗಳಲಾಗುತ್ತದೆ. ಆದರೆ, ವ್ಯವಸ್ಥೆಯಲ್ಲಿ ನಿವೃತ್ತ ಸೈನಿಕರನ್ನು ನಡೆಸಿಕೊಳ್ಳುತ್ತಿರುವ ರೀತಿ ನೋಡಿದರೆ ನಿಜಕ್ಕೂ ಖೇದ ಉಂಟಾಗುತ್ತದೆ ಎಂದು ಮಲೆನಾಡು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಪಿ.ವಿ.ಕಷ್ಣರೆಡ್ಡಿ ವಿಷಾದಿಸಿದರು.<br /> <br /> ನಗರದ ಮಥುರಾ ಹೋಟೆಲ್ನಲ್ಲಿ ಭಾನುವಾರ ಮಲೆನಾಡು ಮಾಜಿ ಸೈನಿಕರ ಸಂಘ ಹಮ್ಮಿಕೊಂಡಿದ್ದ ಸರ್ವಸದಸ್ಯರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಉತ್ತರಾಖಂಡ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದಲ್ಲಿ ಸಾವಿರಾರು ಜನರನ್ನು ಸೈನಿಕರು ಜೀವದ ಹಂಗು ತೊರೆದು ರಕ್ಷಿಸಿದ್ದಾರೆ. ಈ ಹಿಂದೆ ನಡೆದ ಯುದ್ದಗಳಲ್ಲೂ ದೇಶಕ್ಕಾಗಿ ಹೋರಾಡಿದ್ದಾರೆ. ಸೈನಿಕರಿಗೆ ಮಾತುಗಳಲ್ಲಿ ಹೊಗಳುವ ಸರ್ಕಾರ, ಸಮಾಜ ಅವರಿಗೆ ನೀಡಬೇಕಾದ ಸೌಲಭ್ಯ, ಗೌರವಗಳನ್ನು ನೀಡುತ್ತಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದರು.<br /> <br /> ದೇಶದ ರಕ್ಷಣೆಗೆ ತಮ್ಮ ಜೀವವನ್ನೆ ಮುಡುಪಾಗಿಟ್ಟ ನಿವೃತ್ತ ಸೈನಿಕರ ಬಗ್ಗೆ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ವಹಿಸಿದೆ. ಕಾನೂನುಬದ್ಧವಾಗಿ ನೀಡಬೇಕಾದ ಸೌಲಭ್ಯ ಕಲ್ಪಿಸದೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.<br /> <br /> ನಗರದಲ್ಲಿ ನಿವೃತ್ತ ಸೈನಿಕರ ಸಂಘದ ಕಚೇರಿ ತೆರೆಯಲು ನಿವೇಶನ ನೀಡುವಂತೆ ಈ ಹಿಂದೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿತ್ತು. ಇದುವರೆಗೂ ಜಿಲ್ಲಾಡಳಿತ ನಿವೇಶನ ನೀಡಿಲ್ಲ. ಇದಕ್ಕಾಗಿ ಜಿಲ್ಲಾಧಿಕಾರಿ ಕಚೇರಿಗೆ ಅಲೆದಲೆದು ಸಾಕಾಗಿದೆ ಎಂದು ದೂರಿದರು.<br /> <br /> ಜಿಲ್ಲೆಯಲ್ಲಿ ಸುಮಾರು 3,500 ನಿವೃತ್ತ ಸೈನಿಕರಿದ್ದಾರೆ. ನಿವೃತ್ತ ಸೈನಿಕರಿಗೆ 5 ಎಕರೆ ಜಮೀನು ನೀಡುವುದಾಗಿ ಕೇಂದ್ರಸರ್ಕಾರ ಹೇಳುತ್ತದೆ. ಆದರೆ ಇದುವರಗೂ ನಿವೃತ್ತ ಸೈನಿಕರಿಗೆ ಜಮೀನು ಸಿಕ್ಕಿಲ್ಲ. ಜಮೀನು ನೀಡಲು ಕೂಡಲೆ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.<br /> <br /> ಸಮಾರಂಭದಲ್ಲಿ ಕರ್ನಲ್ ಡಾ.ಎ.ಎಸ್.ರಘುನಾಥ್, ಕೆ.ಎ.ರಾಮಚಂದ್ರ, ಸಂಘದ ಕಾರ್ಯದರ್ಶಿ ಎಂ.ರವೀಂದ್ರನ್, ಖಜಾಂಚಿ ಮಹೇಶ್ವರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ದೇಶದ ರಕ್ಷಣೆಗೆ ಹೋರಾಡುವ ಸೈನಿಕರ ಸೇವೆ ಬಗ್ಗೆ ಕೇವಲ ಮಾತಿನಲ್ಲಿ ಹೊಗಳಲಾಗುತ್ತದೆ. ಆದರೆ, ವ್ಯವಸ್ಥೆಯಲ್ಲಿ ನಿವೃತ್ತ ಸೈನಿಕರನ್ನು ನಡೆಸಿಕೊಳ್ಳುತ್ತಿರುವ ರೀತಿ ನೋಡಿದರೆ ನಿಜಕ್ಕೂ ಖೇದ ಉಂಟಾಗುತ್ತದೆ ಎಂದು ಮಲೆನಾಡು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಪಿ.ವಿ.ಕಷ್ಣರೆಡ್ಡಿ ವಿಷಾದಿಸಿದರು.<br /> <br /> ನಗರದ ಮಥುರಾ ಹೋಟೆಲ್ನಲ್ಲಿ ಭಾನುವಾರ ಮಲೆನಾಡು ಮಾಜಿ ಸೈನಿಕರ ಸಂಘ ಹಮ್ಮಿಕೊಂಡಿದ್ದ ಸರ್ವಸದಸ್ಯರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಉತ್ತರಾಖಂಡ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದಲ್ಲಿ ಸಾವಿರಾರು ಜನರನ್ನು ಸೈನಿಕರು ಜೀವದ ಹಂಗು ತೊರೆದು ರಕ್ಷಿಸಿದ್ದಾರೆ. ಈ ಹಿಂದೆ ನಡೆದ ಯುದ್ದಗಳಲ್ಲೂ ದೇಶಕ್ಕಾಗಿ ಹೋರಾಡಿದ್ದಾರೆ. ಸೈನಿಕರಿಗೆ ಮಾತುಗಳಲ್ಲಿ ಹೊಗಳುವ ಸರ್ಕಾರ, ಸಮಾಜ ಅವರಿಗೆ ನೀಡಬೇಕಾದ ಸೌಲಭ್ಯ, ಗೌರವಗಳನ್ನು ನೀಡುತ್ತಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದರು.<br /> <br /> ದೇಶದ ರಕ್ಷಣೆಗೆ ತಮ್ಮ ಜೀವವನ್ನೆ ಮುಡುಪಾಗಿಟ್ಟ ನಿವೃತ್ತ ಸೈನಿಕರ ಬಗ್ಗೆ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ವಹಿಸಿದೆ. ಕಾನೂನುಬದ್ಧವಾಗಿ ನೀಡಬೇಕಾದ ಸೌಲಭ್ಯ ಕಲ್ಪಿಸದೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.<br /> <br /> ನಗರದಲ್ಲಿ ನಿವೃತ್ತ ಸೈನಿಕರ ಸಂಘದ ಕಚೇರಿ ತೆರೆಯಲು ನಿವೇಶನ ನೀಡುವಂತೆ ಈ ಹಿಂದೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿತ್ತು. ಇದುವರೆಗೂ ಜಿಲ್ಲಾಡಳಿತ ನಿವೇಶನ ನೀಡಿಲ್ಲ. ಇದಕ್ಕಾಗಿ ಜಿಲ್ಲಾಧಿಕಾರಿ ಕಚೇರಿಗೆ ಅಲೆದಲೆದು ಸಾಕಾಗಿದೆ ಎಂದು ದೂರಿದರು.<br /> <br /> ಜಿಲ್ಲೆಯಲ್ಲಿ ಸುಮಾರು 3,500 ನಿವೃತ್ತ ಸೈನಿಕರಿದ್ದಾರೆ. ನಿವೃತ್ತ ಸೈನಿಕರಿಗೆ 5 ಎಕರೆ ಜಮೀನು ನೀಡುವುದಾಗಿ ಕೇಂದ್ರಸರ್ಕಾರ ಹೇಳುತ್ತದೆ. ಆದರೆ ಇದುವರಗೂ ನಿವೃತ್ತ ಸೈನಿಕರಿಗೆ ಜಮೀನು ಸಿಕ್ಕಿಲ್ಲ. ಜಮೀನು ನೀಡಲು ಕೂಡಲೆ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.<br /> <br /> ಸಮಾರಂಭದಲ್ಲಿ ಕರ್ನಲ್ ಡಾ.ಎ.ಎಸ್.ರಘುನಾಥ್, ಕೆ.ಎ.ರಾಮಚಂದ್ರ, ಸಂಘದ ಕಾರ್ಯದರ್ಶಿ ಎಂ.ರವೀಂದ್ರನ್, ಖಜಾಂಚಿ ಮಹೇಶ್ವರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>