<p>ರಾಮನಗರ: ಹೊಗೇನಕಲ್ನಲ್ಲಿ ತಮಿಳುನಾಡು ಸರ್ಕಾರ ಕೈಗೊಂಡಿರುವ ಕುಡಿಯುವ ನೀರಿನ ಯೋಜನೆ ವಿರೋಧಿಸಿ ನವೆಂಬರ್ 22ರಂದು ಕರ್ನಾಟಕ- ತಮಿಳುನಾಡು ಗಡಿ ಭಾಗದ ಪ್ರದೇಶಗಳಲ್ಲಿ ಬಂದ್ ಆಚರಿಸಲಾಗುವುದು ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು.<br /> <br /> ತಮಿಳುನಾಡು ಸರ್ಕಾರದ ಧೋರಣೆ ವಿರೋಧಿಸಿ ರಾಮನಗರದ ಮಿನಿ ವಿಧಾನಸೌಧದ ಮುಂಭಾಗ ತಮಟೆ ಚಳವಳಿ ನಡೆಸಿದ ಅವರು ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.<br /> <br /> ಹೊಗೇನಕಲ್ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಅಲ್ಲಿ ತಮಿಳುನಾಡು ಸರ್ಕಾರ ಅಕ್ರಮವಾಗಿ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಂಡಿದೆ. ಈ ಸಂಬಂಧ ಮೂರು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದರೂ ಕರ್ನಾಟಕ ಸರ್ಕಾರ ಮಾತ್ರ ಮೌನವಹಿಸಿರುವುದು ಅನುಮಾನ ಮೂಡಿಸುತ್ತದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಜಂಟಿ ಸಮೀಕ್ಷೆಗೆ ಒತ್ತಾಯ: ಹೊಗೇನಕಲ್ ಪ್ರದೇಶದಲ್ಲಿ ಎರಡೂ ರಾಜ್ಯಗಳ ಜಂಟಿ ಸಮೀಕ್ಷೆ ನಡೆಯಬೇಕಾದ ಅಗತ್ಯ ಇದೆ. ಈ ಕುರಿತ ಬೇಡಿಕೆಗೆ ತಮಿಳುನಾಡು ಸರ್ಕಾರ ಸಿದ್ಧವಿಲ್ಲ. ಹಾಗಾಗಿ ಕರ್ನಾಟಕದ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಕೂಡಲೇ ಪ್ರಧಾನ ಮಂತ್ರಿಗಳ ಬಳಿ ಚರ್ಚಿಸಿ ಜಂಟಿ ಸಮೀಕ್ಷೆಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಬೇಕು ಎಂದು ವಾಟಾಳ್ ಒತ್ತಾಯಿಸಿದರು.<br /> <br /> ಅಲ್ಲದೆ ತಮಿಳುನಾಡು ಸರ್ಕಾರ ಈಗಾಗಲೇ ಅಲ್ಲಿ ಕೈಗೊಂಡಿರುವ ಕುಡಿಯುವ ನೀರು ಯೋಜನೆ ಕಾಮಗಾರಿಯನ್ನು ಜಂಟಿ ಸಮೀಕ್ಷಾ ಕಾರ್ಯ ಮುಕ್ತಾಯ ಆಗುವ ತನಕ ಸ್ಥಗಿತಗೊಳಿಸುವಂತೆ ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಹೊಗೇನಕಲ್ನಲ್ಲಿ ತಮಿಳುನಾಡು ಸರ್ಕಾರ ಕೈಗೊಂಡಿರುವ ಕುಡಿಯುವ ನೀರಿನ ಯೋಜನೆ ವಿರೋಧಿಸಿ ನವೆಂಬರ್ 22ರಂದು ಕರ್ನಾಟಕ- ತಮಿಳುನಾಡು ಗಡಿ ಭಾಗದ ಪ್ರದೇಶಗಳಲ್ಲಿ ಬಂದ್ ಆಚರಿಸಲಾಗುವುದು ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು.<br /> <br /> ತಮಿಳುನಾಡು ಸರ್ಕಾರದ ಧೋರಣೆ ವಿರೋಧಿಸಿ ರಾಮನಗರದ ಮಿನಿ ವಿಧಾನಸೌಧದ ಮುಂಭಾಗ ತಮಟೆ ಚಳವಳಿ ನಡೆಸಿದ ಅವರು ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.<br /> <br /> ಹೊಗೇನಕಲ್ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಅಲ್ಲಿ ತಮಿಳುನಾಡು ಸರ್ಕಾರ ಅಕ್ರಮವಾಗಿ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಂಡಿದೆ. ಈ ಸಂಬಂಧ ಮೂರು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದರೂ ಕರ್ನಾಟಕ ಸರ್ಕಾರ ಮಾತ್ರ ಮೌನವಹಿಸಿರುವುದು ಅನುಮಾನ ಮೂಡಿಸುತ್ತದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಜಂಟಿ ಸಮೀಕ್ಷೆಗೆ ಒತ್ತಾಯ: ಹೊಗೇನಕಲ್ ಪ್ರದೇಶದಲ್ಲಿ ಎರಡೂ ರಾಜ್ಯಗಳ ಜಂಟಿ ಸಮೀಕ್ಷೆ ನಡೆಯಬೇಕಾದ ಅಗತ್ಯ ಇದೆ. ಈ ಕುರಿತ ಬೇಡಿಕೆಗೆ ತಮಿಳುನಾಡು ಸರ್ಕಾರ ಸಿದ್ಧವಿಲ್ಲ. ಹಾಗಾಗಿ ಕರ್ನಾಟಕದ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಕೂಡಲೇ ಪ್ರಧಾನ ಮಂತ್ರಿಗಳ ಬಳಿ ಚರ್ಚಿಸಿ ಜಂಟಿ ಸಮೀಕ್ಷೆಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಬೇಕು ಎಂದು ವಾಟಾಳ್ ಒತ್ತಾಯಿಸಿದರು.<br /> <br /> ಅಲ್ಲದೆ ತಮಿಳುನಾಡು ಸರ್ಕಾರ ಈಗಾಗಲೇ ಅಲ್ಲಿ ಕೈಗೊಂಡಿರುವ ಕುಡಿಯುವ ನೀರು ಯೋಜನೆ ಕಾಮಗಾರಿಯನ್ನು ಜಂಟಿ ಸಮೀಕ್ಷಾ ಕಾರ್ಯ ಮುಕ್ತಾಯ ಆಗುವ ತನಕ ಸ್ಥಗಿತಗೊಳಿಸುವಂತೆ ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>