<p>ಗುಂಡ್ಲುಪೇಟೆ: ತಾಲ್ಲೂಕಿನ ಪ್ರಖ್ಯಾತ ಪ್ರವಾಸಿ ತಾಣ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಆಕಸ್ಮಿಕವಾಗಿ ವ್ಯಾಪಿಸಿದ ಬೆಂಕಿಗೆ ನೂರಾರು ಎಕರೆ ಅರಣ್ಯ ಭಸ್ಮವಾಗಿದೆ. ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಬಳಿಯಿಂದ ಪೂರ್ವಕ್ಕೆ 4 ಕಿಲೋಮೀಟರ್ ದೂರದಲ್ಲಿರುವ ಖಾರೇಮಾಳದ ಬಳಿಯಿಂದ ಪ್ರಾರಂಭವಾದ ಬೆಂಕಿಯು ಜಕ್ಕಳ್ಳಿ, ಮಂಗಲ ಸೇರಿದಂತೆ ಮದ್ದೂರು ಅರಣ್ಯ ವಲಯದವರೆವಿಗೂ ವ್ಯಾಪಿಸಿದೆ.<br /> <br /> ಪಶ್ಚಿಮವಾಗಿ ಕಿರುಬನ ಕೊಳಚೆ ಪ್ರದೇಶದ ಮೂಲಕ 500 ರಿಂದ 600 ಎಕರೆ ವ್ಯಾಪಿಸಿದ ಕಿಚ್ಚು ಅರಣ್ಯ ಮತ್ತು ವನ್ಯ ಪ್ರಾಣಿಗಳ ಆಹುತಿ ತೆಗೆದುಕೊಂಡಿದೆ.<br /> <br /> ಅರಣ್ಯ ಇಲಾಖೆಯ 300 ರಷ್ಟು ಸಿಬ್ಬಂದಿ ಬೆಂಕಿ ನಂದಿಸಲು ಅವ್ಯಾಹತವಾಗಿ ಶ್ರಮಿಸುತ್ತಿದ್ದಾರೆ. ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹುಲಿ ಯೋಜನೆ ನಿರ್ದೇಶಕ ಕಾಂತರಾಜು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.<br /> <br /> ಗುಂಡ್ಲುಪೇಟೆ ಸಬ್ ಇನ್ಸ್ಪೆಕ್ಟರ್ ಎಂ.ನಾಯಕ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಜನರನ್ನು ನಿಯಂತ್ರಿಸಲು ಶ್ರಮಿಸಿದರು. ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ತಾಲ್ಲೂಕಿನ ಪ್ರಖ್ಯಾತ ಪ್ರವಾಸಿ ತಾಣ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಆಕಸ್ಮಿಕವಾಗಿ ವ್ಯಾಪಿಸಿದ ಬೆಂಕಿಗೆ ನೂರಾರು ಎಕರೆ ಅರಣ್ಯ ಭಸ್ಮವಾಗಿದೆ. ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಬಳಿಯಿಂದ ಪೂರ್ವಕ್ಕೆ 4 ಕಿಲೋಮೀಟರ್ ದೂರದಲ್ಲಿರುವ ಖಾರೇಮಾಳದ ಬಳಿಯಿಂದ ಪ್ರಾರಂಭವಾದ ಬೆಂಕಿಯು ಜಕ್ಕಳ್ಳಿ, ಮಂಗಲ ಸೇರಿದಂತೆ ಮದ್ದೂರು ಅರಣ್ಯ ವಲಯದವರೆವಿಗೂ ವ್ಯಾಪಿಸಿದೆ.<br /> <br /> ಪಶ್ಚಿಮವಾಗಿ ಕಿರುಬನ ಕೊಳಚೆ ಪ್ರದೇಶದ ಮೂಲಕ 500 ರಿಂದ 600 ಎಕರೆ ವ್ಯಾಪಿಸಿದ ಕಿಚ್ಚು ಅರಣ್ಯ ಮತ್ತು ವನ್ಯ ಪ್ರಾಣಿಗಳ ಆಹುತಿ ತೆಗೆದುಕೊಂಡಿದೆ.<br /> <br /> ಅರಣ್ಯ ಇಲಾಖೆಯ 300 ರಷ್ಟು ಸಿಬ್ಬಂದಿ ಬೆಂಕಿ ನಂದಿಸಲು ಅವ್ಯಾಹತವಾಗಿ ಶ್ರಮಿಸುತ್ತಿದ್ದಾರೆ. ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹುಲಿ ಯೋಜನೆ ನಿರ್ದೇಶಕ ಕಾಂತರಾಜು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.<br /> <br /> ಗುಂಡ್ಲುಪೇಟೆ ಸಬ್ ಇನ್ಸ್ಪೆಕ್ಟರ್ ಎಂ.ನಾಯಕ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಜನರನ್ನು ನಿಯಂತ್ರಿಸಲು ಶ್ರಮಿಸಿದರು. ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>