<p><strong>ಹೊನ್ನಾಳಿ:</strong> ವಾರದೊಳಗೆ ಹೊನ್ನಾಳಿಗೆ ಕೆಎಸ್ಆರ್ಟಿಸಿ ಬಸ್ ಡಿಪೋ ಮಂಜೂರಾಗಲಿದೆ ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು. <br /> <br /> ಪಟ್ಟಣದ ದೇವನಾಯ್ಕನಹಳ್ಳಿಯಲ್ಲಿ ಕೆಎಸ್ಆರ್ಟಿಸಿ ಬಸ್ ಡಿಪೋ ಸ್ಥಾಪನೆಗೆ ಅಗತ್ಯವಿರುವ 6.15ನಿವೇಶನ ಮಂಜೂರಾಗಿದೆ. ಶೀಘ್ರದಲ್ಲೇ ಕೆಎಸ್ಆರ್ಟಿಸಿ ಬಸ್ ಡಿಪೋ ಮಂಜೂರಾಗಲಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.<br /> <br /> ವಾರದೊಳಗೆ ಪಟ್ಟಣಕ್ಕೆ ಸರ್ಕಾರಿ ಡಿಪ್ಲೊಮಾ ಕಾಲೇಜು ಕೂಡಾ ಮಂಜೂರಾಗಲಿದೆ ಎಂದು ಅವರು ಹೇಳಿದರು. ಪಟ್ಟಣದಲ್ಲಿ ಒಳಚರಂಡಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮೂಲಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ತಾಲ್ಲೂಕಿನ ಮಲ್ಲೇದೇವರಕಟ್ಟೆ ಗ್ರಾಮದಲ್ಲಿ 10 ಎಕರೆ ಜಮೀನು ಗುರುತಿಸಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗುತ್ತದೆ ಎಂದರು. <br /> <br /> ತಾಲ್ಲೂಕಿನ ಮಾದನಬಾವಿ ಬಳಿ 12 ಎಕರೆ ಪ್ರದೇಶದಲ್ಲಿ ಮೊರಾರ್ಜಿ ದೇಸಾಯಿ ಮಾದರಿ ವಸತಿಶಾಲೆ ನಿರ್ಮಾಣಗೊಳ್ಳುತ್ತಿದೆ. ಕಿತ್ತೂರ ರಾಣಿ ಚೆನ್ನಮ್ಮ ವಸತಿಶಾಲೆ ನಿರ್ಮಾಣಕ್ಕಾಗಿ ಎಚ್. ಕಡದಕಟ್ಟೆ ಗ್ರಾಮದ ಬಳಿ 9.15 ಎಕರೆ ಜಮೀನು ಗುರುತಿಸಲಾಗಿದೆ. ಪಟ್ಟಣದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ 7 ಎಕರೆ ಜಮೀನು ನೀಡಲಾಗಿದೆ.<br /> <br /> ಪ್ರಾಥಮಿಕ ಶಾಲೆಗೆ 3 ಎಕರೆ ಜಮೀನು ದೊರಕಿಸಲಾಗಿದೆ. ತಾಲ್ಲೂಕಿನ ಟಿ. ಗೋಪಗೊಂಡನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಗೆಂದು 5 ಎಕರೆ ಜಮೀನು ನೀಡಲಾಗಿದೆ. ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಬಿಸಿಎಂ ಹಾಸ್ಟೆಲ್ ನಿರ್ಮಾಣಕ್ಕೆ 1 ಎಕರೆ ಜಮೀನು ನೀಡಲಾಗಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ವಾರದೊಳಗೆ ಹೊನ್ನಾಳಿಗೆ ಕೆಎಸ್ಆರ್ಟಿಸಿ ಬಸ್ ಡಿಪೋ ಮಂಜೂರಾಗಲಿದೆ ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು. <br /> <br /> ಪಟ್ಟಣದ ದೇವನಾಯ್ಕನಹಳ್ಳಿಯಲ್ಲಿ ಕೆಎಸ್ಆರ್ಟಿಸಿ ಬಸ್ ಡಿಪೋ ಸ್ಥಾಪನೆಗೆ ಅಗತ್ಯವಿರುವ 6.15ನಿವೇಶನ ಮಂಜೂರಾಗಿದೆ. ಶೀಘ್ರದಲ್ಲೇ ಕೆಎಸ್ಆರ್ಟಿಸಿ ಬಸ್ ಡಿಪೋ ಮಂಜೂರಾಗಲಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.<br /> <br /> ವಾರದೊಳಗೆ ಪಟ್ಟಣಕ್ಕೆ ಸರ್ಕಾರಿ ಡಿಪ್ಲೊಮಾ ಕಾಲೇಜು ಕೂಡಾ ಮಂಜೂರಾಗಲಿದೆ ಎಂದು ಅವರು ಹೇಳಿದರು. ಪಟ್ಟಣದಲ್ಲಿ ಒಳಚರಂಡಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮೂಲಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ತಾಲ್ಲೂಕಿನ ಮಲ್ಲೇದೇವರಕಟ್ಟೆ ಗ್ರಾಮದಲ್ಲಿ 10 ಎಕರೆ ಜಮೀನು ಗುರುತಿಸಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗುತ್ತದೆ ಎಂದರು. <br /> <br /> ತಾಲ್ಲೂಕಿನ ಮಾದನಬಾವಿ ಬಳಿ 12 ಎಕರೆ ಪ್ರದೇಶದಲ್ಲಿ ಮೊರಾರ್ಜಿ ದೇಸಾಯಿ ಮಾದರಿ ವಸತಿಶಾಲೆ ನಿರ್ಮಾಣಗೊಳ್ಳುತ್ತಿದೆ. ಕಿತ್ತೂರ ರಾಣಿ ಚೆನ್ನಮ್ಮ ವಸತಿಶಾಲೆ ನಿರ್ಮಾಣಕ್ಕಾಗಿ ಎಚ್. ಕಡದಕಟ್ಟೆ ಗ್ರಾಮದ ಬಳಿ 9.15 ಎಕರೆ ಜಮೀನು ಗುರುತಿಸಲಾಗಿದೆ. ಪಟ್ಟಣದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ 7 ಎಕರೆ ಜಮೀನು ನೀಡಲಾಗಿದೆ.<br /> <br /> ಪ್ರಾಥಮಿಕ ಶಾಲೆಗೆ 3 ಎಕರೆ ಜಮೀನು ದೊರಕಿಸಲಾಗಿದೆ. ತಾಲ್ಲೂಕಿನ ಟಿ. ಗೋಪಗೊಂಡನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಗೆಂದು 5 ಎಕರೆ ಜಮೀನು ನೀಡಲಾಗಿದೆ. ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಬಿಸಿಎಂ ಹಾಸ್ಟೆಲ್ ನಿರ್ಮಾಣಕ್ಕೆ 1 ಎಕರೆ ಜಮೀನು ನೀಡಲಾಗಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>