<p><strong>ಹೊನ್ನಾಳಿ:</strong> ಸರ್ಕಾರ ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜಗಳನ್ನು ಒದಗಿಸುತ್ತಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು. <br /> <br /> ಇಲ್ಲಿನ ಎಪಿಎಂಸಿ ಆವರಣದಲ್ಲಿ ಬುಧವಾರ ರಿಯಾಯ್ತಿ ದರದಲ್ಲಿ ಮೆಕ್ಕೆಜೋಳದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಿ ಅವರು ಮಾತನಾಡಿದರು.<br /> <br /> ಕಸಬಾ, ಕುಂದೂರು, ನ್ಯಾಮತಿ, ಗೋವಿನಕೋವಿ, ಸಾಸ್ವೆಹಳ್ಳಿ, ಚೀಲೂರು ರೈತ ಸಂಪರ್ಕ ಕೇಂದ್ರಗಳು ಹಾಗೂ ಗೊಲ್ಲರಹಳ್ಳಿ, ಬೆಳಗುತ್ತಿ ಹೆಚ್ಚುವರಿ ಕೇಂದ್ರಗಳಲ್ಲಿ ರಿಯಾಯ್ತಿ ದರದ ಬಿತ್ತನೆ ಬೀಜ ನೀಡಲಾಗುವುದು, ರೈತರು ತಮ್ಮ ವ್ಯಾಪ್ತಿಯ ಕಂದಾಯ ಅಧಿಕಾರಿಗಳಿಂದ ಪರವಾನಗಿ ಪತ್ರ ತಂದು ಸೌಲಭ್ಯ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.<br /> <br /> ಸಹಾಯಕ ಕೃಷಿ ನಿರ್ದೇಶಕ ಎಚ್.ಕೆ. ರೇವಣಸಿದ್ದನಗೌಡ ಮಾತನಾಡಿ, ಪ್ರತಿ ಎಕರೆಗೆ ಒಂದರಂತೆ ಕನಿಷ್ಠ 5 ಎಕರೆಯವರೆಗೆ 5 ಪ್ಯಾಕೆಟ್ಗಳಷ್ಟು ಮೆಕ್ಕೆಜೋಳದ ಬಿತ್ತನೆ ಬೀಜಗಳನ್ನು ವಿತರಿಸಲಾಗುವುದು, ಸಂಕರಣ ಮೆಕ್ಕೆಜೋಳಕ್ಕೆ ಪ್ರತಿ ಕೆ.ಜಿ.ಗೆ ರೂ. 30, ಜೋಳಕ್ಕೆ ರೂ. 23.50, ತೊಗರಿಗೆ ರೂ. 32.50, ಹೆಸರು ಕಾಳಿಗೆ ರೂ. 40 ಹಾಗೂ ಅಲಸಂದೆಗೆ ರೂ. 25 ನಿಗದಿಪಡಿಸಲಾಗಿದೆ ಎಂದರು.<br /> <br /> ರೈತರು ಗೊಬ್ಬರ ಮತ್ತು ಬಿತ್ತನೆ ಬೀಜ ಖರೀದಿಯ ರಸೀದಿಗಳನ್ನು ಇಟ್ಟುಕೊಳ್ಳಬೇಕು, ಅಕ್ಕಡಿ ಬೆಳೆಗಳಾಗಿ ದ್ವಿದಳ ಧಾನ್ಯಗಳಾದ ತೊಗರಿ, ಅಲಸಂದೆ, ಹೆಸರು, ಉದ್ದಿನ ಬೆಳೆಗಳನ್ನು ಕಡ್ಡಾಯವಾಗಿ ಬೆಳೆಯಬೇಕು ಎಂದು ಅವರು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ಸರ್ಕಾರ ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜಗಳನ್ನು ಒದಗಿಸುತ್ತಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು. <br /> <br /> ಇಲ್ಲಿನ ಎಪಿಎಂಸಿ ಆವರಣದಲ್ಲಿ ಬುಧವಾರ ರಿಯಾಯ್ತಿ ದರದಲ್ಲಿ ಮೆಕ್ಕೆಜೋಳದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಿ ಅವರು ಮಾತನಾಡಿದರು.<br /> <br /> ಕಸಬಾ, ಕುಂದೂರು, ನ್ಯಾಮತಿ, ಗೋವಿನಕೋವಿ, ಸಾಸ್ವೆಹಳ್ಳಿ, ಚೀಲೂರು ರೈತ ಸಂಪರ್ಕ ಕೇಂದ್ರಗಳು ಹಾಗೂ ಗೊಲ್ಲರಹಳ್ಳಿ, ಬೆಳಗುತ್ತಿ ಹೆಚ್ಚುವರಿ ಕೇಂದ್ರಗಳಲ್ಲಿ ರಿಯಾಯ್ತಿ ದರದ ಬಿತ್ತನೆ ಬೀಜ ನೀಡಲಾಗುವುದು, ರೈತರು ತಮ್ಮ ವ್ಯಾಪ್ತಿಯ ಕಂದಾಯ ಅಧಿಕಾರಿಗಳಿಂದ ಪರವಾನಗಿ ಪತ್ರ ತಂದು ಸೌಲಭ್ಯ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.<br /> <br /> ಸಹಾಯಕ ಕೃಷಿ ನಿರ್ದೇಶಕ ಎಚ್.ಕೆ. ರೇವಣಸಿದ್ದನಗೌಡ ಮಾತನಾಡಿ, ಪ್ರತಿ ಎಕರೆಗೆ ಒಂದರಂತೆ ಕನಿಷ್ಠ 5 ಎಕರೆಯವರೆಗೆ 5 ಪ್ಯಾಕೆಟ್ಗಳಷ್ಟು ಮೆಕ್ಕೆಜೋಳದ ಬಿತ್ತನೆ ಬೀಜಗಳನ್ನು ವಿತರಿಸಲಾಗುವುದು, ಸಂಕರಣ ಮೆಕ್ಕೆಜೋಳಕ್ಕೆ ಪ್ರತಿ ಕೆ.ಜಿ.ಗೆ ರೂ. 30, ಜೋಳಕ್ಕೆ ರೂ. 23.50, ತೊಗರಿಗೆ ರೂ. 32.50, ಹೆಸರು ಕಾಳಿಗೆ ರೂ. 40 ಹಾಗೂ ಅಲಸಂದೆಗೆ ರೂ. 25 ನಿಗದಿಪಡಿಸಲಾಗಿದೆ ಎಂದರು.<br /> <br /> ರೈತರು ಗೊಬ್ಬರ ಮತ್ತು ಬಿತ್ತನೆ ಬೀಜ ಖರೀದಿಯ ರಸೀದಿಗಳನ್ನು ಇಟ್ಟುಕೊಳ್ಳಬೇಕು, ಅಕ್ಕಡಿ ಬೆಳೆಗಳಾಗಿ ದ್ವಿದಳ ಧಾನ್ಯಗಳಾದ ತೊಗರಿ, ಅಲಸಂದೆ, ಹೆಸರು, ಉದ್ದಿನ ಬೆಳೆಗಳನ್ನು ಕಡ್ಡಾಯವಾಗಿ ಬೆಳೆಯಬೇಕು ಎಂದು ಅವರು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>