<p><strong>ಹೊಸದುರ್ಗ:</strong> ಲಘು ಭೂಕಂಪನ ಸಂಭವಿಸಿದ್ದ ತಾಲ್ಲೂಕಿನ ದೊಡ್ಡಕಿಟ್ಟದಹಳ್ಳಿ, ಸಣ್ಣಕಿಟ್ಟದಹಳ್ಳಿ, ಕೆಂಕೆರೆ, ನಾಕಿಕೆರೆ, ದೇವಪುರ, ಮಾಡದಕೆರೆ, ಪೂಜಾರಹಟ್ಟಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಸೋಮವಾರ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಯೋಜನಾ ತಜ್ಞ ರಮೇಶ್ ದಿಕ್ಪಾಲ್ ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿದರು. <br /> <br /> ನಂತರ ರಮೇಶ್ ದಿಕ್ಪಾಲ್ ಮಾತನಾಡಿ, ದೊಡ್ಡಕಿಟ್ಟದಹಳ್ಳಿ ಗ್ರಾಮದ ಅಂಚೆ ಕಚೇರಿ ಕಟ್ಟಡದ ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿರುವುದು ಸೇರಿದಂತೆ ಭೂಕಂಪ ಸಂಭವಿಸಿದ್ದ ಇನ್ನಿತರ ಸ್ಥಳಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ಈ ಬಗ್ಗೆ ಕೂಲಂಕಷ ಸಂಶೋಧನೆ ಮಾಡಲಾಗುವುದು ಎಂದು ತಿಳಿಸಿದರು.<br /> <br /> ಭೂಮಿಯ ಒಳಗಿನ ಪದರಗಳು ಭೂಕಂಪ ಸಂಭವಿಸಿದ ವಿವಿಧ ಸ್ಥಳಗಳೊಂದಿಗೆ ಸಂಬಂಧ ಹೊಂದಿವೆಯೇ ಎಂಬ ವಿಚಾರವನ್ನು ಆಧಾರವಾಗಿಟ್ಟುಕೊಂಡು ಬೆಂಗಳೂರಿನ ಭೂವಿಜ್ಞಾನ ಕೇಂದ್ರದಲ್ಲಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ, ಭೂಕಂಪದ ಫಲಿತಾಂಶ ಧನಾತ್ಮಕವಾಗಿ ಕಂಡುಬಂದಲ್ಲಿ ಮುಂದಿನ ದಿನದಲ್ಲಿ ಭೂಕಂಪನ ಮಾಪಕ ಅಳವಡಿಸಲಾಗುವುದು ಎಂದರು.<br /> <br /> ಡಿ.ಕೆ.ಹಳ್ಳಿ ಗ್ರಾಮದ ಯುವ ಮುಖಂಡ ಎಚ್.ಪ್ರಸನ್ನ ಮಾತನಾಡಿ, ನ.30ರಂದು ಭೂಕಂಪ ಸಂಭವಿಸಿದ ಪರಿಣಾಮದಿಂದ ಗ್ರಾಮಸ್ಥರೆಲ್ಲರೂ ಭಯಭೀತರಾಗಿ ಜೀವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ:</strong> ಲಘು ಭೂಕಂಪನ ಸಂಭವಿಸಿದ್ದ ತಾಲ್ಲೂಕಿನ ದೊಡ್ಡಕಿಟ್ಟದಹಳ್ಳಿ, ಸಣ್ಣಕಿಟ್ಟದಹಳ್ಳಿ, ಕೆಂಕೆರೆ, ನಾಕಿಕೆರೆ, ದೇವಪುರ, ಮಾಡದಕೆರೆ, ಪೂಜಾರಹಟ್ಟಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಸೋಮವಾರ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಯೋಜನಾ ತಜ್ಞ ರಮೇಶ್ ದಿಕ್ಪಾಲ್ ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿದರು. <br /> <br /> ನಂತರ ರಮೇಶ್ ದಿಕ್ಪಾಲ್ ಮಾತನಾಡಿ, ದೊಡ್ಡಕಿಟ್ಟದಹಳ್ಳಿ ಗ್ರಾಮದ ಅಂಚೆ ಕಚೇರಿ ಕಟ್ಟಡದ ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿರುವುದು ಸೇರಿದಂತೆ ಭೂಕಂಪ ಸಂಭವಿಸಿದ್ದ ಇನ್ನಿತರ ಸ್ಥಳಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ಈ ಬಗ್ಗೆ ಕೂಲಂಕಷ ಸಂಶೋಧನೆ ಮಾಡಲಾಗುವುದು ಎಂದು ತಿಳಿಸಿದರು.<br /> <br /> ಭೂಮಿಯ ಒಳಗಿನ ಪದರಗಳು ಭೂಕಂಪ ಸಂಭವಿಸಿದ ವಿವಿಧ ಸ್ಥಳಗಳೊಂದಿಗೆ ಸಂಬಂಧ ಹೊಂದಿವೆಯೇ ಎಂಬ ವಿಚಾರವನ್ನು ಆಧಾರವಾಗಿಟ್ಟುಕೊಂಡು ಬೆಂಗಳೂರಿನ ಭೂವಿಜ್ಞಾನ ಕೇಂದ್ರದಲ್ಲಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ, ಭೂಕಂಪದ ಫಲಿತಾಂಶ ಧನಾತ್ಮಕವಾಗಿ ಕಂಡುಬಂದಲ್ಲಿ ಮುಂದಿನ ದಿನದಲ್ಲಿ ಭೂಕಂಪನ ಮಾಪಕ ಅಳವಡಿಸಲಾಗುವುದು ಎಂದರು.<br /> <br /> ಡಿ.ಕೆ.ಹಳ್ಳಿ ಗ್ರಾಮದ ಯುವ ಮುಖಂಡ ಎಚ್.ಪ್ರಸನ್ನ ಮಾತನಾಡಿ, ನ.30ರಂದು ಭೂಕಂಪ ಸಂಭವಿಸಿದ ಪರಿಣಾಮದಿಂದ ಗ್ರಾಮಸ್ಥರೆಲ್ಲರೂ ಭಯಭೀತರಾಗಿ ಜೀವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>