<p><strong>ಯಲಹಂಕ:</strong> `ರೈತರ ಕುರಿತ ಕಾಳಜಿ ಕೇವಲ ಭಾವನಾತ್ಮಕ ಹೇಳಿಕೆಯಾಗಿ ಉಳಿಯಬಾರದು. ಅವರ ಬದುಕನ್ನು ಕಟ್ಟಿಕೊಳ್ಳುವಂತಹ ಹೊಸ ಬೀಜ ತಳಿಗಳ ಮೇಲೆ ಸಂಶೋಧನೆ ಮತ್ತು ಆವಿಷ್ಕಾರಗಳು ನಡೆಯಬೇಕು' ಎಂದು ನವದೆಹಲಿಯ ಸಸ್ಯತಳಿ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಅಧ್ಯಕ್ಷ ಡಾ.ಆರ್.ಆರ್. ಹಂಚಿನಾಳ್ ಹೇಳಿದರು.<br /> <br /> ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹಾಗೂ ಇಂಡಿಯನ್ ಸೊಸೈಟಿ ಆಫ್ ಸೀಡ್ಸ್ ಟೆಕ್ನಾಲಜಿ ಆಶ್ರಯದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ `ಬೀಜ ಸಂಶೋಧನೆಯಲ್ಲಿ ಆವಿಷ್ಕಾರಗಳು ಹಾಗೂ ಅಭಿವೃದ್ಧಿ' ಕುರಿತ 13ನೇ ರಾಷ್ಟ್ರೀಯ ಬೀಜಸಂಕಿರಣದ ಸಮಾರೋಪ ಸಮಾರಂದಲ್ಲಿ ಮಾತನಾಡಿದ ಅವರು, `ಭತ್ತದ ನಾನಾ ತಳಿಗಳ ಅಭಿವೃದ್ಧಿಪಡಿಸಲು ಸಂಶೋಧನೆ ನಡೆಸಬೇಕು ಎಂದರು.<br /> <br /> ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ರೈತರು ಸ್ವಾವಲಂಬನೆ ಮತ್ತು ನಿಸ್ವಾರ್ಥ ಚಿಂತನೆಗಳನ್ನು ಬೆಳೆಸಿಕೊಂಡು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು. ಇದರಿಂದ ದೇಶದ ಆರ್ಥಿಕ ವ್ಯವಸ್ಥೆ ಸಮೃದ್ಧಿಯಾಗಿ, ವರಮಾನ ಹೆಚ್ಚಾಗುವುದರೊಂದಿಗೆ ಕೃಷಿಕರು ಗುಣಮಟ್ಟದ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.<br /> <br /> ಕೃಷಿ ವಿವಿಯ ಕುಲಪತಿ ಡಾ.ಕೆ.ನಾರಾಯಣಗೌಡ ಮಾತನಾಡಿ, `ರೈತರಿಗೆ ಅಗತ್ಯ ಇರುವ ಉತ್ತಮ ಗುಣಮಟ್ಟದ ಬೀಜಗಳನ್ನು ಜಿಲ್ಲಾವಾರು ಹಂಚಿಕೆ ಮಾಡಬೇಕು. ಅಲ್ಲದೆ ಸರಿಯಾದ ಸಮಯಕ್ಕೆ ಬೀಜಗಳನ್ನು ತಲುಪಿಸುವ ಮೂಲಕ ರೈತರ ಸಮಸ್ಯೆಗಳ ನಿವಾರಣೆಗೆ ವಿಜ್ಞಾನಿಗಳು ಗಮನ ಹರಿಸಬೇಕು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> `ರೈತರ ಕುರಿತ ಕಾಳಜಿ ಕೇವಲ ಭಾವನಾತ್ಮಕ ಹೇಳಿಕೆಯಾಗಿ ಉಳಿಯಬಾರದು. ಅವರ ಬದುಕನ್ನು ಕಟ್ಟಿಕೊಳ್ಳುವಂತಹ ಹೊಸ ಬೀಜ ತಳಿಗಳ ಮೇಲೆ ಸಂಶೋಧನೆ ಮತ್ತು ಆವಿಷ್ಕಾರಗಳು ನಡೆಯಬೇಕು' ಎಂದು ನವದೆಹಲಿಯ ಸಸ್ಯತಳಿ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಅಧ್ಯಕ್ಷ ಡಾ.ಆರ್.ಆರ್. ಹಂಚಿನಾಳ್ ಹೇಳಿದರು.<br /> <br /> ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹಾಗೂ ಇಂಡಿಯನ್ ಸೊಸೈಟಿ ಆಫ್ ಸೀಡ್ಸ್ ಟೆಕ್ನಾಲಜಿ ಆಶ್ರಯದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ `ಬೀಜ ಸಂಶೋಧನೆಯಲ್ಲಿ ಆವಿಷ್ಕಾರಗಳು ಹಾಗೂ ಅಭಿವೃದ್ಧಿ' ಕುರಿತ 13ನೇ ರಾಷ್ಟ್ರೀಯ ಬೀಜಸಂಕಿರಣದ ಸಮಾರೋಪ ಸಮಾರಂದಲ್ಲಿ ಮಾತನಾಡಿದ ಅವರು, `ಭತ್ತದ ನಾನಾ ತಳಿಗಳ ಅಭಿವೃದ್ಧಿಪಡಿಸಲು ಸಂಶೋಧನೆ ನಡೆಸಬೇಕು ಎಂದರು.<br /> <br /> ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ರೈತರು ಸ್ವಾವಲಂಬನೆ ಮತ್ತು ನಿಸ್ವಾರ್ಥ ಚಿಂತನೆಗಳನ್ನು ಬೆಳೆಸಿಕೊಂಡು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು. ಇದರಿಂದ ದೇಶದ ಆರ್ಥಿಕ ವ್ಯವಸ್ಥೆ ಸಮೃದ್ಧಿಯಾಗಿ, ವರಮಾನ ಹೆಚ್ಚಾಗುವುದರೊಂದಿಗೆ ಕೃಷಿಕರು ಗುಣಮಟ್ಟದ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.<br /> <br /> ಕೃಷಿ ವಿವಿಯ ಕುಲಪತಿ ಡಾ.ಕೆ.ನಾರಾಯಣಗೌಡ ಮಾತನಾಡಿ, `ರೈತರಿಗೆ ಅಗತ್ಯ ಇರುವ ಉತ್ತಮ ಗುಣಮಟ್ಟದ ಬೀಜಗಳನ್ನು ಜಿಲ್ಲಾವಾರು ಹಂಚಿಕೆ ಮಾಡಬೇಕು. ಅಲ್ಲದೆ ಸರಿಯಾದ ಸಮಯಕ್ಕೆ ಬೀಜಗಳನ್ನು ತಲುಪಿಸುವ ಮೂಲಕ ರೈತರ ಸಮಸ್ಯೆಗಳ ನಿವಾರಣೆಗೆ ವಿಜ್ಞಾನಿಗಳು ಗಮನ ಹರಿಸಬೇಕು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>