<p><strong>ಕಾರವಾರ:</strong> ಹೊಸ ಪುಸ್ತಕಗಳೊಂದಿಗೆ ಬದಲಾಗಿರುವ 5 ಮತ್ತು 8ನೇ ತರಗತಿಯ ಪಠ್ಯಕ್ರಮದ ಪುಸ್ತಕಗಳನ್ನೂ ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ಒದಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.<br /> <br /> ಇಲ್ಲಿಯ ಕಾಜುಬಾಗದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿರುವ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಸ್ತಕಗಳನ್ನು ಸರಬರಾಜು ಮಾಡಲಾಗುತ್ತಿದೆ. ಹೊಸ ಪಠ್ಯಕ್ರಮದ ಪುಸಕ್ತಗಳನ್ನು ಸೂಕ್ತ ಸಮಯದಲ್ಲಿ ಪೂರೈಸುವ ಬಗ್ಗೆ ಸಂಪುಟ ಸಭೆಯಲ್ಲೂ ನಿರ್ಣಯಿಸಲಾಗಿದೆ ಎಂದರು.<br /> <br /> ಪಿಯುಸಿ ಪ್ರಶ್ನೆ ಪತ್ರಿಕೆ ಬಹಿರಂಗವಾದಂತೆ ಎಸ್ಎಸ್ಎಲ್ಸಿ ಪರೀಕ್ಷೆ ಸಂದರ್ಭದಲ್ಲೂ ಅಂತಹ ಘಟನೆಗಳು ಮರುಕಳಿಸಬಾರದು ಎನ್ನುವ ದೃಷ್ಟಿಯಿಂದ ಅಗತ್ಯ ಮುನ್ನಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳು ಭಯಪಡಬಾರದು ಎನ್ನುವ ದೃಷ್ಟಿಯಿಂದ ಈ ಸಲದಿಂದ 15 ನಿಮಿಷ ಮುಂಚಿತವಾಗಿ ಪ್ರಶ್ನೆಪತ್ರಿಕೆ ಗಳನ್ನು ನೀಡಲಾಗುತ್ತಿದೆ ಎಂದರು. <br /> <br /> ಬೆಂಗಳೂರಿನಲ್ಲಿ ಪ್ರಶ್ನೆಪತ್ರಿಕೆ ಮಾರಾಟ ಮಾಡುತ್ತಿದ್ದ ಗುಂಪೊಂದನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರ ಬಳಿಯಿದ್ದ ಪ್ರಶ್ನೆಪತ್ರಿಕೆಯನ್ನು ಪರಿಶೀಲಿಸಲಾಗಿದ್ದು ಪರೀಕ್ಷೆಯಲ್ಲಿ ನೀಡಿರುವ ಪ್ರಶ್ನೆಪತ್ರಿಕೆಗೆ ಅವರ ಬಳಿಯಿದ್ದ ಪತ್ರಿಕೆಗೂ ಯಾವುದೇ ರೀತಿಯ ಸಾಮ್ಯತೆ ಇಲ್ಲ ಎಂದು ಸಚಿವರು ನುಡಿದರು. <br /> <br /> ಪಿಯು ಪರೀಕ್ಷಾ ಮಂಡಳಿ ನಿರ್ದೇಶಕಿ ರಶ್ಮಿ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಇಲಾಖೆ ಅಧಿಕಾರಿಗಳ ನಡುವಿನ ಅಸಮಾಧಾನವೂ ಪತ್ರಿಕೆ ಬಹಿರಂಗಕ್ಕೆ ಕಾರಣವಾಗಿದೆ ಎನ್ನುವ ಅಂಶಗಳ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> <strong>ಎಸ್ಎಸ್ಎಲ್ಸಿ ಪರೀಕ್ಷೆ: 25 ವಿದ್ಯಾರ್ಥಿಗಳು ಗೈರು</strong><br /> ಮುಂಡಗೋಡ: ಸೋಮವಾರದಿಂದ ಪ್ರಾರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಾಲ್ಲೂಕಿನ ಒಟ್ಟು ಮೂರು ಕೇಂದ್ರಗಳಲ್ಲಿ 1109 ವಿದ್ಯಾರ್ಥಿಗಳು ಪರೀಕ್ಷೆ ಬರೆ ದರು. <br /> <br /> ಪರೀಕ್ಷಾ ಕೇಂದ್ರದಲ್ಲಿ ದಾಖಲಾದ ಒಟ್ಟು 1134 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಸ.ಪ.ಪೂ.ಕಾಲೇಜಿನಲ್ಲಿ 343 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ 7 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಸ.ಪ್ರೌ.ಶಾಲೆ ಕಾತೂರನಲ್ಲಿ 306 ವಿದ್ಯಾರ್ಥಿಗಳು ಹಾಜರಾಗಿ 11 ವಿದ್ಯಾರ್ಥಿಗಳು ಗೈರಾದರು. ರೋಟರಿ ಪ್ರೌಢಶಾಲೆಯಲ್ಲಿ 460 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 7 ವಿದ್ಯಾರ್ಥಿಗಳು ಪರೀಕ್ಷೆಯಿಂದ ದೂರ ಉಳಿದರು. <br /> <br /> <strong>23 ವಿದ್ಯಾರ್ಥಿಗಳು ಗೈರು<br /> </strong>ಯಲ್ಲಾಪುರ: ಸೋಮವಾರದಿಂದ ಆರಂಭವಾದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲ್ಲೂಕಿನ ನಾಲ್ಕು ಪರೀಕ್ಷಾ ಕೇಂದ್ರಗಳ 1105 ವಿದ್ಯಾರ್ಥಿ ಗಳಲ್ಲಿ 1082 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 23 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.<br /> <br /> ಪಟ್ಟಣದ ವೈ.ಟಿ.ಎಸ್.ಎಸ್. ಶಿಕ್ಷಣಸಂಸ್ಥೆಯ ಪರೀಕ್ಷಾ ಕೇಂದ್ರದ 167 ಗಂಡು ಮಕ್ಕಳಲ್ಲಿ 165 ವಿದ್ಯಾರ್ಥಿಗಳು ಹಾಜರಾಗಿದ್ದರೆ, 129 ವಿದ್ಯಾರ್ಥಿನಿ ಯರಲ್ಲಿ 129 ವಿದ್ಯಾರ್ಥಿಗಳು ಹಾಜ ರಾಗಿದ್ದಾರೆ.<br /> <br /> ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ 161 ಗಂಡು ಮಕ್ಕಳ ಪೈಕಿ 156 ವಿದ್ಯಾರ್ಥಿಗಳು ಹಾಜರಾಗಿದ್ದು, 134 ವಿದ್ಯಾರ್ಥಿನಿ ಯರಲ್ಲಿ 131 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿರುತ್ತಾರೆ.<br /> <br /> ಸರ್ಕಾರಿ ಪ್ರೌಢಶಾಲೆ ಯಲ್ಲಾಪುರದ ಪರೀಕ್ಷಾ ಕೇಂದ್ರದಲ್ಲಿ 157 ಗಂಡು ಮಕ್ಕಳ ಪೈಕಿ 153 ಮಕ್ಕಳು ಹಾಜ ರಾಗಿದ್ದು, 139 ಹೆಣ್ನು ಮಕ್ಕಳಲ್ಲಿ 137 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾ ಗಿರುತ್ತಾರೆ.<br /> <br /> ಮಂಚಿಕೇರಿಯ ರಾಜರಾಜೇಶ್ವರಿ ಹೈಸ್ಕೂಲಿನಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ 122 ಗಂಡು ಮಕ್ಕಳ ಪೈಕಿ 116 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜ ರಾಗಿದ್ದರೆ 96 ವಿದ್ಯಾರ್ಥಿನಿಯರಲ್ಲಿ 95 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾ ಗಿರುತ್ತಾರೆ.<br /> <br /> ತಾಲ್ಲೂಕಿನಲ್ಲಿ 607 ಗಂಡು ವಿದ್ಯಾರ್ಥಿಗಳಲ್ಲಿ 590 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 498 ವಿದ್ಯಾರ್ಥಿನಿಯರಲ್ಲಿ 492 ವಿದ್ಯಾರ್ಥಿ ನಿಯರು ಪರೀಕ್ಷೆಗೆ ಹಾಜರಾಗಿರುತ್ತಾ ರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ದಿವಾಕರ ಶೆಟ್ಟಿ ಪ್ರಜಾವಣಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಹೊಸ ಪುಸ್ತಕಗಳೊಂದಿಗೆ ಬದಲಾಗಿರುವ 5 ಮತ್ತು 8ನೇ ತರಗತಿಯ ಪಠ್ಯಕ್ರಮದ ಪುಸ್ತಕಗಳನ್ನೂ ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ಒದಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.<br /> <br /> ಇಲ್ಲಿಯ ಕಾಜುಬಾಗದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿರುವ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಸ್ತಕಗಳನ್ನು ಸರಬರಾಜು ಮಾಡಲಾಗುತ್ತಿದೆ. ಹೊಸ ಪಠ್ಯಕ್ರಮದ ಪುಸಕ್ತಗಳನ್ನು ಸೂಕ್ತ ಸಮಯದಲ್ಲಿ ಪೂರೈಸುವ ಬಗ್ಗೆ ಸಂಪುಟ ಸಭೆಯಲ್ಲೂ ನಿರ್ಣಯಿಸಲಾಗಿದೆ ಎಂದರು.<br /> <br /> ಪಿಯುಸಿ ಪ್ರಶ್ನೆ ಪತ್ರಿಕೆ ಬಹಿರಂಗವಾದಂತೆ ಎಸ್ಎಸ್ಎಲ್ಸಿ ಪರೀಕ್ಷೆ ಸಂದರ್ಭದಲ್ಲೂ ಅಂತಹ ಘಟನೆಗಳು ಮರುಕಳಿಸಬಾರದು ಎನ್ನುವ ದೃಷ್ಟಿಯಿಂದ ಅಗತ್ಯ ಮುನ್ನಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳು ಭಯಪಡಬಾರದು ಎನ್ನುವ ದೃಷ್ಟಿಯಿಂದ ಈ ಸಲದಿಂದ 15 ನಿಮಿಷ ಮುಂಚಿತವಾಗಿ ಪ್ರಶ್ನೆಪತ್ರಿಕೆ ಗಳನ್ನು ನೀಡಲಾಗುತ್ತಿದೆ ಎಂದರು. <br /> <br /> ಬೆಂಗಳೂರಿನಲ್ಲಿ ಪ್ರಶ್ನೆಪತ್ರಿಕೆ ಮಾರಾಟ ಮಾಡುತ್ತಿದ್ದ ಗುಂಪೊಂದನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರ ಬಳಿಯಿದ್ದ ಪ್ರಶ್ನೆಪತ್ರಿಕೆಯನ್ನು ಪರಿಶೀಲಿಸಲಾಗಿದ್ದು ಪರೀಕ್ಷೆಯಲ್ಲಿ ನೀಡಿರುವ ಪ್ರಶ್ನೆಪತ್ರಿಕೆಗೆ ಅವರ ಬಳಿಯಿದ್ದ ಪತ್ರಿಕೆಗೂ ಯಾವುದೇ ರೀತಿಯ ಸಾಮ್ಯತೆ ಇಲ್ಲ ಎಂದು ಸಚಿವರು ನುಡಿದರು. <br /> <br /> ಪಿಯು ಪರೀಕ್ಷಾ ಮಂಡಳಿ ನಿರ್ದೇಶಕಿ ರಶ್ಮಿ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಇಲಾಖೆ ಅಧಿಕಾರಿಗಳ ನಡುವಿನ ಅಸಮಾಧಾನವೂ ಪತ್ರಿಕೆ ಬಹಿರಂಗಕ್ಕೆ ಕಾರಣವಾಗಿದೆ ಎನ್ನುವ ಅಂಶಗಳ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> <strong>ಎಸ್ಎಸ್ಎಲ್ಸಿ ಪರೀಕ್ಷೆ: 25 ವಿದ್ಯಾರ್ಥಿಗಳು ಗೈರು</strong><br /> ಮುಂಡಗೋಡ: ಸೋಮವಾರದಿಂದ ಪ್ರಾರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಾಲ್ಲೂಕಿನ ಒಟ್ಟು ಮೂರು ಕೇಂದ್ರಗಳಲ್ಲಿ 1109 ವಿದ್ಯಾರ್ಥಿಗಳು ಪರೀಕ್ಷೆ ಬರೆ ದರು. <br /> <br /> ಪರೀಕ್ಷಾ ಕೇಂದ್ರದಲ್ಲಿ ದಾಖಲಾದ ಒಟ್ಟು 1134 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಸ.ಪ.ಪೂ.ಕಾಲೇಜಿನಲ್ಲಿ 343 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ 7 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಸ.ಪ್ರೌ.ಶಾಲೆ ಕಾತೂರನಲ್ಲಿ 306 ವಿದ್ಯಾರ್ಥಿಗಳು ಹಾಜರಾಗಿ 11 ವಿದ್ಯಾರ್ಥಿಗಳು ಗೈರಾದರು. ರೋಟರಿ ಪ್ರೌಢಶಾಲೆಯಲ್ಲಿ 460 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 7 ವಿದ್ಯಾರ್ಥಿಗಳು ಪರೀಕ್ಷೆಯಿಂದ ದೂರ ಉಳಿದರು. <br /> <br /> <strong>23 ವಿದ್ಯಾರ್ಥಿಗಳು ಗೈರು<br /> </strong>ಯಲ್ಲಾಪುರ: ಸೋಮವಾರದಿಂದ ಆರಂಭವಾದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲ್ಲೂಕಿನ ನಾಲ್ಕು ಪರೀಕ್ಷಾ ಕೇಂದ್ರಗಳ 1105 ವಿದ್ಯಾರ್ಥಿ ಗಳಲ್ಲಿ 1082 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 23 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.<br /> <br /> ಪಟ್ಟಣದ ವೈ.ಟಿ.ಎಸ್.ಎಸ್. ಶಿಕ್ಷಣಸಂಸ್ಥೆಯ ಪರೀಕ್ಷಾ ಕೇಂದ್ರದ 167 ಗಂಡು ಮಕ್ಕಳಲ್ಲಿ 165 ವಿದ್ಯಾರ್ಥಿಗಳು ಹಾಜರಾಗಿದ್ದರೆ, 129 ವಿದ್ಯಾರ್ಥಿನಿ ಯರಲ್ಲಿ 129 ವಿದ್ಯಾರ್ಥಿಗಳು ಹಾಜ ರಾಗಿದ್ದಾರೆ.<br /> <br /> ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ 161 ಗಂಡು ಮಕ್ಕಳ ಪೈಕಿ 156 ವಿದ್ಯಾರ್ಥಿಗಳು ಹಾಜರಾಗಿದ್ದು, 134 ವಿದ್ಯಾರ್ಥಿನಿ ಯರಲ್ಲಿ 131 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿರುತ್ತಾರೆ.<br /> <br /> ಸರ್ಕಾರಿ ಪ್ರೌಢಶಾಲೆ ಯಲ್ಲಾಪುರದ ಪರೀಕ್ಷಾ ಕೇಂದ್ರದಲ್ಲಿ 157 ಗಂಡು ಮಕ್ಕಳ ಪೈಕಿ 153 ಮಕ್ಕಳು ಹಾಜ ರಾಗಿದ್ದು, 139 ಹೆಣ್ನು ಮಕ್ಕಳಲ್ಲಿ 137 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾ ಗಿರುತ್ತಾರೆ.<br /> <br /> ಮಂಚಿಕೇರಿಯ ರಾಜರಾಜೇಶ್ವರಿ ಹೈಸ್ಕೂಲಿನಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ 122 ಗಂಡು ಮಕ್ಕಳ ಪೈಕಿ 116 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜ ರಾಗಿದ್ದರೆ 96 ವಿದ್ಯಾರ್ಥಿನಿಯರಲ್ಲಿ 95 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾ ಗಿರುತ್ತಾರೆ.<br /> <br /> ತಾಲ್ಲೂಕಿನಲ್ಲಿ 607 ಗಂಡು ವಿದ್ಯಾರ್ಥಿಗಳಲ್ಲಿ 590 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 498 ವಿದ್ಯಾರ್ಥಿನಿಯರಲ್ಲಿ 492 ವಿದ್ಯಾರ್ಥಿ ನಿಯರು ಪರೀಕ್ಷೆಗೆ ಹಾಜರಾಗಿರುತ್ತಾ ರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ದಿವಾಕರ ಶೆಟ್ಟಿ ಪ್ರಜಾವಣಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>