<p>ಬೆಳಗಾವಿ: ಕೆಟ್ಟವನಿಗೂ ಒಳ್ಳೆಯನಾಗುವ ಅವಕಾಶವಿದೆ. ಕಾರಾಗೃಹದಿಂದ ಹೊರಬಂದ ಮೇಲೆ ಹೊಸ ಬಾಳು ಬದುಕಬೇಕು ಎಂದು ನಾಟಕಕಾರ ಡಿ.ಎಸ್. ಚೌಗಲೆ ಸಲಹೆ ನೀಡಿದರು.<br /> <br /> ಮೈಸೂರಿನ ಸಂಕಲ್ಪ ಹಾಗೂ ಕರ್ನಾಟಕ ಕಾರಾಗೃಹಗಳ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಹಿಂಡಲಗಾ ಕೇಂದ್ರ ಕಾರಾಗೃಹ ವಾಸಿಗಳಿಗೆ ಹಮ್ಮಿಕೊಂಡಿದ್ದ ಮನಪರಿವರ್ತನಾ ರಂಗಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಮನುಷ್ಯನ ನಡವಳಿಕೆಯಲ್ಲಿ ಬದಲಾವಣೆ ತರುವ ಶಕ್ತಿ ರಂಗಭೂಮಿಗೆ ಇದೆ. ಇದು ಈ ಹಿಂದೆ ಮೈಸೂರಿನ ಕಾರಾಗೃಹದಲ್ಲಿ ನಡೆಸಿದ ಶಿಬಿರದಲ್ಲಿ ಸಾಬೀತಾಗಿದೆ. ಅಂತಹ ಬದಲಾವಣೆಗೆ ಇಲ್ಲಿನವರೂ ಸಜ್ಜಾಗಬೇಕು~ ಎಂದು ಅವರು ಹೇಳಿದರು.<br /> <br /> ಸಂಕಲ್ಪ ನಿರ್ದೇಶಕ ಹುಲಗಪ್ಪ ಕಟ್ಟಿಮನಿ ಮಾತನಾಡಿ, ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಅವಕಾಶವಿರುವುದು ರಂಗಭೂಮಿಯಲ್ಲಿ ಮಾತ್ರ ಎಂದರು.<br /> <br /> ಕಾರಾಗೃಹ ಮುಖ್ಯ ಅಧೀಕ್ಷಕ ಜಿ. ವೀರಭದ್ರಸ್ವಾಮಿ ಮಾತನಾಡಿದರು. ಕಾರಾಗೃಹವಾಸಿ ಧರಣೇಶ ಮಾತನಾಡಿ, ಸನ್ನಡತೆಯುಳ್ಳ ಕೈದಿಗಳ ಬಿಡುಗಡೆಗೆ ರಂಗಕರ್ಮಿಗಳು ಹಾಗೂ ಸಾಹಿತಿಗಳು ಹೋರಾಟ ಮಾಡಬೇಕು ಎಂದು ಮನವಿ ಮಾಡಿದರು.<br /> <br /> ಹಿರಿಯ ಸಾಹಿತಿ ಚಂದ್ರಕಾಂತ ಪೋಕಳೆ ಅಧ್ಯಕ್ಷತೆ ವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಕೆಟ್ಟವನಿಗೂ ಒಳ್ಳೆಯನಾಗುವ ಅವಕಾಶವಿದೆ. ಕಾರಾಗೃಹದಿಂದ ಹೊರಬಂದ ಮೇಲೆ ಹೊಸ ಬಾಳು ಬದುಕಬೇಕು ಎಂದು ನಾಟಕಕಾರ ಡಿ.ಎಸ್. ಚೌಗಲೆ ಸಲಹೆ ನೀಡಿದರು.<br /> <br /> ಮೈಸೂರಿನ ಸಂಕಲ್ಪ ಹಾಗೂ ಕರ್ನಾಟಕ ಕಾರಾಗೃಹಗಳ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಹಿಂಡಲಗಾ ಕೇಂದ್ರ ಕಾರಾಗೃಹ ವಾಸಿಗಳಿಗೆ ಹಮ್ಮಿಕೊಂಡಿದ್ದ ಮನಪರಿವರ್ತನಾ ರಂಗಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಮನುಷ್ಯನ ನಡವಳಿಕೆಯಲ್ಲಿ ಬದಲಾವಣೆ ತರುವ ಶಕ್ತಿ ರಂಗಭೂಮಿಗೆ ಇದೆ. ಇದು ಈ ಹಿಂದೆ ಮೈಸೂರಿನ ಕಾರಾಗೃಹದಲ್ಲಿ ನಡೆಸಿದ ಶಿಬಿರದಲ್ಲಿ ಸಾಬೀತಾಗಿದೆ. ಅಂತಹ ಬದಲಾವಣೆಗೆ ಇಲ್ಲಿನವರೂ ಸಜ್ಜಾಗಬೇಕು~ ಎಂದು ಅವರು ಹೇಳಿದರು.<br /> <br /> ಸಂಕಲ್ಪ ನಿರ್ದೇಶಕ ಹುಲಗಪ್ಪ ಕಟ್ಟಿಮನಿ ಮಾತನಾಡಿ, ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಅವಕಾಶವಿರುವುದು ರಂಗಭೂಮಿಯಲ್ಲಿ ಮಾತ್ರ ಎಂದರು.<br /> <br /> ಕಾರಾಗೃಹ ಮುಖ್ಯ ಅಧೀಕ್ಷಕ ಜಿ. ವೀರಭದ್ರಸ್ವಾಮಿ ಮಾತನಾಡಿದರು. ಕಾರಾಗೃಹವಾಸಿ ಧರಣೇಶ ಮಾತನಾಡಿ, ಸನ್ನಡತೆಯುಳ್ಳ ಕೈದಿಗಳ ಬಿಡುಗಡೆಗೆ ರಂಗಕರ್ಮಿಗಳು ಹಾಗೂ ಸಾಹಿತಿಗಳು ಹೋರಾಟ ಮಾಡಬೇಕು ಎಂದು ಮನವಿ ಮಾಡಿದರು.<br /> <br /> ಹಿರಿಯ ಸಾಹಿತಿ ಚಂದ್ರಕಾಂತ ಪೋಕಳೆ ಅಧ್ಯಕ್ಷತೆ ವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>