<p><strong>ನವದೆಹಲಿ (ಪಿಟಿಐ):</strong> ‘ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನಾ’ಗೆ (ಪಿಎಂಎಫ್ಬಿವೈ) ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.<br /> <br /> ಈಗಾಗಲೇ ಜಾರಿಯಲ್ಲಿ ಇರುವ ರಾಷ್ಟ್ರೀಯ ಕೃಷಿ ವಿಮೆ ಯೋಜನೆ (ಎನ್ಎಐಎಸ್) ಮತ್ತು ‘ಸುಧಾರಿತ ಎನ್ಎಐಎಸ್’ ಯೋಜನೆಗಳಿಗೆ ಬದಲಾಗಿ ಈ ಹೊಸ ಯೋಜನೆ ಜಾರಿಗೆ ಬರಲಿದೆ.<br /> <br /> ಇಡೀ ರಾಜ್ಯದ ವಿಮೆ ಯೋಜನೆಯನ್ನು ಒಂದು ವಿಮೆ ಸಂಸ್ಥೆಯ ಸುಪರ್ದಿಗೆ ಒಪ್ಪಿಸಲಾಗುತ್ತದೆ. ಭಾರತೀಯ ಕೃಷಿ ವಿಮೆ ಕಂಪೆನಿ ಮತ್ತು ಖಾಸಗಿ ವಿಮೆ ಸಂಸ್ಥೆಗಳು ಈ ಯೋಜನೆಯನ್ನು ಜಾರಿ ಮಾಡಲಿವೆ.<br /> <br /> ‘ರೈತರು ಈ ಹೊಸ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಮುಂದಾಗಲಿದ್ದಾರೆ. ಇದು ಅವರ ಹಣಕಾಸಿನ ಅನಿಶ್ಚಿತತೆ ದೂರ ಮಾಡಲಿದೆ ’ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಅವರು ಪ್ರತಿಕ್ರಿಯಿಸಿದ್ದಾರೆ.<br /> <br /> ಯೋಜನೆಯ ವೈಶಿಷ್ಟ್ಯಗಳು: ‘ಅತಿ ಕಡಿಮೆ ಪ್ರೀಮಿಯಂನ ಈ ಯೋಜನೆಯಲ್ಲಿ ಮೊಬೈಲ್ನಂತಹ ಸರಳ ತಂತ್ರಜ್ಞಾನದ ಬಳಕೆ ಇರಲಿದೆ. ನಷ್ಟದ ತ್ವರಿತ ಅಂದಾಜು, ಕಾಲಮಿತಿಯೊಳಗೆ ಹಣ ಪಾವತಿ ಮುಂತಾದವು ಈ ಯೋಜನೆಯ ಪ್ರಮುಖ ವೈಶಿಷ್ಟ್ಯಗಳಾಗಿದ್ದು, ರೈತರ ಪಾಲಿಗೆ ಇದೊಂದು ಐತಿಹಾಸಿಕ ದಿನವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.<br /> <br /> ‘ಯೋಜನೆ ವ್ಯಾಪ್ತಿಗೆ ಸೇರ್ಪಡೆಯಾಗುವ ಮತ್ತು ಪ್ರಯೋಜನ ಪಡೆಯುವುದನ್ನು ಸರಳಗೊಳಿಸಲಾಗಿದೆ. ಹೀಗಾಗಿ ಯೋಜನೆಯ ಪ್ರಯೋಜನ ಪಡೆಯಿರಿ.’ ಎಂದು ಮೋದಿ ಅವರು ರೈತಾಪಿ ವರ್ಗಕ್ಕೆ ಮನವಿ ಮಾಡಿಕೊಂಡಿದ್ದಾರೆ.<br /> <br /> ನೈಸರ್ಗಿಕ ವಿಪತ್ತಿನ ವ್ಯಾಖ್ಯಾನ ವಿಸ್ತರಿಸಲಾಗಿದ್ದು, ಪ್ರವಾಹಪೀಡಿತ ಬೆಳೆ, ಬೆಳೆ ಕಟಾವು ಮಾಡಿದ ನಂತರದ ನಷ್ಟವೂ ವಿಮೆ ವ್ಯಾಪ್ತಿಗೆ ಒಳಪಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ‘ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನಾ’ಗೆ (ಪಿಎಂಎಫ್ಬಿವೈ) ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.<br /> <br /> ಈಗಾಗಲೇ ಜಾರಿಯಲ್ಲಿ ಇರುವ ರಾಷ್ಟ್ರೀಯ ಕೃಷಿ ವಿಮೆ ಯೋಜನೆ (ಎನ್ಎಐಎಸ್) ಮತ್ತು ‘ಸುಧಾರಿತ ಎನ್ಎಐಎಸ್’ ಯೋಜನೆಗಳಿಗೆ ಬದಲಾಗಿ ಈ ಹೊಸ ಯೋಜನೆ ಜಾರಿಗೆ ಬರಲಿದೆ.<br /> <br /> ಇಡೀ ರಾಜ್ಯದ ವಿಮೆ ಯೋಜನೆಯನ್ನು ಒಂದು ವಿಮೆ ಸಂಸ್ಥೆಯ ಸುಪರ್ದಿಗೆ ಒಪ್ಪಿಸಲಾಗುತ್ತದೆ. ಭಾರತೀಯ ಕೃಷಿ ವಿಮೆ ಕಂಪೆನಿ ಮತ್ತು ಖಾಸಗಿ ವಿಮೆ ಸಂಸ್ಥೆಗಳು ಈ ಯೋಜನೆಯನ್ನು ಜಾರಿ ಮಾಡಲಿವೆ.<br /> <br /> ‘ರೈತರು ಈ ಹೊಸ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಮುಂದಾಗಲಿದ್ದಾರೆ. ಇದು ಅವರ ಹಣಕಾಸಿನ ಅನಿಶ್ಚಿತತೆ ದೂರ ಮಾಡಲಿದೆ ’ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಅವರು ಪ್ರತಿಕ್ರಿಯಿಸಿದ್ದಾರೆ.<br /> <br /> ಯೋಜನೆಯ ವೈಶಿಷ್ಟ್ಯಗಳು: ‘ಅತಿ ಕಡಿಮೆ ಪ್ರೀಮಿಯಂನ ಈ ಯೋಜನೆಯಲ್ಲಿ ಮೊಬೈಲ್ನಂತಹ ಸರಳ ತಂತ್ರಜ್ಞಾನದ ಬಳಕೆ ಇರಲಿದೆ. ನಷ್ಟದ ತ್ವರಿತ ಅಂದಾಜು, ಕಾಲಮಿತಿಯೊಳಗೆ ಹಣ ಪಾವತಿ ಮುಂತಾದವು ಈ ಯೋಜನೆಯ ಪ್ರಮುಖ ವೈಶಿಷ್ಟ್ಯಗಳಾಗಿದ್ದು, ರೈತರ ಪಾಲಿಗೆ ಇದೊಂದು ಐತಿಹಾಸಿಕ ದಿನವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.<br /> <br /> ‘ಯೋಜನೆ ವ್ಯಾಪ್ತಿಗೆ ಸೇರ್ಪಡೆಯಾಗುವ ಮತ್ತು ಪ್ರಯೋಜನ ಪಡೆಯುವುದನ್ನು ಸರಳಗೊಳಿಸಲಾಗಿದೆ. ಹೀಗಾಗಿ ಯೋಜನೆಯ ಪ್ರಯೋಜನ ಪಡೆಯಿರಿ.’ ಎಂದು ಮೋದಿ ಅವರು ರೈತಾಪಿ ವರ್ಗಕ್ಕೆ ಮನವಿ ಮಾಡಿಕೊಂಡಿದ್ದಾರೆ.<br /> <br /> ನೈಸರ್ಗಿಕ ವಿಪತ್ತಿನ ವ್ಯಾಖ್ಯಾನ ವಿಸ್ತರಿಸಲಾಗಿದ್ದು, ಪ್ರವಾಹಪೀಡಿತ ಬೆಳೆ, ಬೆಳೆ ಕಟಾವು ಮಾಡಿದ ನಂತರದ ನಷ್ಟವೂ ವಿಮೆ ವ್ಯಾಪ್ತಿಗೆ ಒಳಪಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>