<p><strong>ಶಿವಮೊಗ್ಗ:</strong> ಕಾಂಗ್ರೆಸ್ ಇಂದು ತನ್ನ ಹೋರಾಟ ಮರೆತಿದೆ. ಅದು ಉಳಿದುಕೊಂಡಿರುವುದು ತನ್ನ ಪರಂಪರೆಯಿಂದ ಹೊರತು ಸಂಘಟನಾ ಶಕ್ತಿಯಿಂದ ಅಲ್ಲ. ಇಡೀ ರಾಷ್ಟ್ರದಲ್ಲಿ ಬದಲಾವಣೆ ಶಕ್ತಿ ಇರುವುದು ರೈತರಿಗೆ. ಅವರಿಗೆ ಅಧಿಕಾರ ಸಿಕ್ಕರೆ ಈ ವ್ಯವಸ್ಥೆಯಲ್ಲಿ ಸ್ವಲ್ಪ ಬದಲಾವಣೆ ಕಾಣಲು ಸಾಧ್ಯ ಎಂದು ವಿಧಾನ-ಸಭಾ ಅಧ್ಯಕ್ಷ ಕಾಗೋಡು ತಿಮ್ಮಪ್ಪ ವಿಶ್ವಾಸ ವ್ಯಕ್ತಪಡಿಸಿದರು.<br /> <br /> ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಪ್ರೊ.ನಂಜುಂಡಸ್ವಾಮಿ ರಾಜಕೀಯೇತರ ಬಣ) ಹಮ್ಮಿಕೊಂಡಿದ್ದ ರೈತ ಮುಖಂಡ ಎನ್.ಡಿ.ಸುಂದರೇಶ್ರವರ 21ನೇ ಸ್ಮರಣೆ ಮತ್ತು ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಇಂದು ರಾಜಕಾರಣ ದಿಕ್ಕು ತಪ್ಪಿದೆ. ತತ್ವಬದ್ಧ ರಾಜಕಾರಣ ಇಲ್ಲವಾಗಿದೆ. ದುಡ್ಡು ಮಾಡುವುದೇ ದಂಧೆಯಾಗಿದೆ. ಒಟ್ಟಾರೆ ರಾಜಕೀಯವೇ ಜಿಗುಪ್ಸೆಯಾಗಿದೆ. ಬದಲಾವಣೆ ಸಾಧ್ಯವಾಗುವುದಿಲ್ಲವೆಂದು ಅನಿಸುತ್ತಿದೆ ಎಂದರು.<br /> <br /> ಪ್ರಸ್ತುತ ಆಡಳಿತ ಸುಧಾರಣೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಒಂದೊಂದು ಕಡತ ಮತ್ತೊಂದು ಟೇಬಲ್ಗೆ ಹೋಗಲು ಕನಿಷ್ಠ ಮೂರು ತಿಂಗಳು ಬೇಕಾಗುತ್ತದೆ. ಸರ್ಕಾರ, ಕಡತ ವಿಲೇವಾರಿ ವಿಳಂಬ ಮಾಡುವ ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ಹಾಗೂ ದಂಡ ವಿಧಿಸಲು ಆರಂಭಿಸಿದೆ. ಈ ಪದ್ಧತಿ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿಗೂ ವಿಸ್ತರಿಸಬೇಕು ಎಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಕಾಂಗ್ರೆಸ್ ಇಂದು ತನ್ನ ಹೋರಾಟ ಮರೆತಿದೆ. ಅದು ಉಳಿದುಕೊಂಡಿರುವುದು ತನ್ನ ಪರಂಪರೆಯಿಂದ ಹೊರತು ಸಂಘಟನಾ ಶಕ್ತಿಯಿಂದ ಅಲ್ಲ. ಇಡೀ ರಾಷ್ಟ್ರದಲ್ಲಿ ಬದಲಾವಣೆ ಶಕ್ತಿ ಇರುವುದು ರೈತರಿಗೆ. ಅವರಿಗೆ ಅಧಿಕಾರ ಸಿಕ್ಕರೆ ಈ ವ್ಯವಸ್ಥೆಯಲ್ಲಿ ಸ್ವಲ್ಪ ಬದಲಾವಣೆ ಕಾಣಲು ಸಾಧ್ಯ ಎಂದು ವಿಧಾನ-ಸಭಾ ಅಧ್ಯಕ್ಷ ಕಾಗೋಡು ತಿಮ್ಮಪ್ಪ ವಿಶ್ವಾಸ ವ್ಯಕ್ತಪಡಿಸಿದರು.<br /> <br /> ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಪ್ರೊ.ನಂಜುಂಡಸ್ವಾಮಿ ರಾಜಕೀಯೇತರ ಬಣ) ಹಮ್ಮಿಕೊಂಡಿದ್ದ ರೈತ ಮುಖಂಡ ಎನ್.ಡಿ.ಸುಂದರೇಶ್ರವರ 21ನೇ ಸ್ಮರಣೆ ಮತ್ತು ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಇಂದು ರಾಜಕಾರಣ ದಿಕ್ಕು ತಪ್ಪಿದೆ. ತತ್ವಬದ್ಧ ರಾಜಕಾರಣ ಇಲ್ಲವಾಗಿದೆ. ದುಡ್ಡು ಮಾಡುವುದೇ ದಂಧೆಯಾಗಿದೆ. ಒಟ್ಟಾರೆ ರಾಜಕೀಯವೇ ಜಿಗುಪ್ಸೆಯಾಗಿದೆ. ಬದಲಾವಣೆ ಸಾಧ್ಯವಾಗುವುದಿಲ್ಲವೆಂದು ಅನಿಸುತ್ತಿದೆ ಎಂದರು.<br /> <br /> ಪ್ರಸ್ತುತ ಆಡಳಿತ ಸುಧಾರಣೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಒಂದೊಂದು ಕಡತ ಮತ್ತೊಂದು ಟೇಬಲ್ಗೆ ಹೋಗಲು ಕನಿಷ್ಠ ಮೂರು ತಿಂಗಳು ಬೇಕಾಗುತ್ತದೆ. ಸರ್ಕಾರ, ಕಡತ ವಿಲೇವಾರಿ ವಿಳಂಬ ಮಾಡುವ ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ಹಾಗೂ ದಂಡ ವಿಧಿಸಲು ಆರಂಭಿಸಿದೆ. ಈ ಪದ್ಧತಿ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿಗೂ ವಿಸ್ತರಿಸಬೇಕು ಎಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>