<p><strong>ಬೆಳಗಾವಿ: </strong>ಯುವ ಚಯನ್ನು ರಚಿಸಿಕೊಂಡು ರೈತರ ಅಭಿವೃದ್ಧಿಯಾಗಿ ಹಾಗೂ ಅನ್ಯಾಯದ ವಿರುದ್ಧ ಹೋರಾಟ ನಡೆಸಲು ಭಾರತೀಯ ಕೃಷಿ ಸಮಾಜವು ನಿರ್ಧರಿಸಿದೆ. <br /> <br /> ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ನಡೆದ ಭಾರತೀಯ ಕೃಷಿಕ ಸಮಾಜದ ಜಿಲ್ಲಾ ಮಟ್ಟದ ಸಭೆಯಲ್ಲಿ, ಮೇ ತಿಂಗಳಿನಲ್ಲಿ ಕನಿಷ್ಠ 10 ಸಾವಿರ ರೈತರನ್ನೊಳಗೊಂಡ ಜಿಲ್ಲಾ ಸಮಾವೇಶವನ್ನು ಮಾಡುವ ಮೂಲಕ ರೈತಪರ ಹೋರಾಟದ ಬಗ್ಗೆ ರೂಪುರೇಷೆ ನಿರ್ಮಿಸಲು ತೀರ್ಮಾನಿಸಲಾಯಿತು. <br /> <br /> ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನದಂತಹ ಯೋಜನೆಗಳ ಫಲಾನುಭವಿಗಳಾಗಿರುವ ರೈತರಿಗೆ ಪುನಃ ಆರಂಭಿಸುವಂತೆ ಒತ್ತಾಯಿಸಿ ಪ್ರತಿಭಟನೆ ರೂಪಿಸಲು ನಿರ್ಧರಿಸಲಾಯಿತು. <br /> ಅಧ್ಯಕ್ಷತೆ ವಹಿಸಿದ್ದ ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜ ಪಾಟೀಲ `ಜಿಲ್ಲೆಯ ಪ್ರತಿಯೊಂದು ಗ್ರಾಮದಲ್ಲೂ ಕೃಷಿಕ ಸಮಾಜದ ಗ್ರಾಮ ಘಟಕವನ್ನು ರಚಿಸಬೇಕು. ಯುವ ರೈತ ಪಡೆಯನ್ನು ನಿರ್ಮಿಸಿ ಕೃಷಿಕ ಸಮಾಜವು ರೈತರ ಹೋರಾಟವನ್ನು ಬಲಗೊಳಿಸಬೇಕು~ ಎಂದು ಸಲಹೆ ನೀಡಿದರು. <br /> <br /> `ಜಿಲ್ಲೆಯಲ್ಲಿ ಬರಗಾಲದಿಂದಾಗಿ ದನಕರುಗಳಿಗೆ ಮೇವು, ನೀರಿನ ಕೊರತೆ ಉದ್ಭವಿಸುತ್ತಿದೆ. ವಿದ್ಯುತ್ ಕೊರತೆಯಿಂದಾಗಿ ರೈತರು ತೊಂದರೆಗೀಡಾಗುತ್ತಿದ್ದಾರೆ. ಹೀಗಾಗಿ ಈ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲೆಯ ರೈತ ಮುಖಂಡರನ್ನು ಆಹ್ವಾನಿಸಿ ಜಿಲ್ಲಾಧಿಕಾರಿಗಳು ಸಭೆ ನಡೆಸಬೇಕು~ ಎಂದು ಒತ್ತಾಯಿಸಿದರು. <br /> <br /> ಸಭೆಯಲ್ಲಿ ಭಾರತೀಯ ಕೃಷಿಕ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧಗೌಡ ಕಲಗೌಡ ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಳಜ್ಜ ಗೊದಳ್ಳಿ, ಮಂಜುನಾಥ ವಸ್ತ್ರದ, ಶ್ರೀಕಾಂತ ಪಾಟೀಲ, ಸಿ.ಎಸ್. ಉಣಕಲ್, ವಿಜಯಲಕ್ಷ್ಮಿ ಶೆಟ್ಟೆಣ್ಣವರ, ಡಾ. ಎಸ್.ಐ. ರಾಜಿ ಹಾಜರಿದ್ದರು. ಸಿದ್ಧಾರ್ಥ ಸಂತಾಗೋಳ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಯುವ ಚಯನ್ನು ರಚಿಸಿಕೊಂಡು ರೈತರ ಅಭಿವೃದ್ಧಿಯಾಗಿ ಹಾಗೂ ಅನ್ಯಾಯದ ವಿರುದ್ಧ ಹೋರಾಟ ನಡೆಸಲು ಭಾರತೀಯ ಕೃಷಿ ಸಮಾಜವು ನಿರ್ಧರಿಸಿದೆ. <br /> <br /> ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ನಡೆದ ಭಾರತೀಯ ಕೃಷಿಕ ಸಮಾಜದ ಜಿಲ್ಲಾ ಮಟ್ಟದ ಸಭೆಯಲ್ಲಿ, ಮೇ ತಿಂಗಳಿನಲ್ಲಿ ಕನಿಷ್ಠ 10 ಸಾವಿರ ರೈತರನ್ನೊಳಗೊಂಡ ಜಿಲ್ಲಾ ಸಮಾವೇಶವನ್ನು ಮಾಡುವ ಮೂಲಕ ರೈತಪರ ಹೋರಾಟದ ಬಗ್ಗೆ ರೂಪುರೇಷೆ ನಿರ್ಮಿಸಲು ತೀರ್ಮಾನಿಸಲಾಯಿತು. <br /> <br /> ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನದಂತಹ ಯೋಜನೆಗಳ ಫಲಾನುಭವಿಗಳಾಗಿರುವ ರೈತರಿಗೆ ಪುನಃ ಆರಂಭಿಸುವಂತೆ ಒತ್ತಾಯಿಸಿ ಪ್ರತಿಭಟನೆ ರೂಪಿಸಲು ನಿರ್ಧರಿಸಲಾಯಿತು. <br /> ಅಧ್ಯಕ್ಷತೆ ವಹಿಸಿದ್ದ ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜ ಪಾಟೀಲ `ಜಿಲ್ಲೆಯ ಪ್ರತಿಯೊಂದು ಗ್ರಾಮದಲ್ಲೂ ಕೃಷಿಕ ಸಮಾಜದ ಗ್ರಾಮ ಘಟಕವನ್ನು ರಚಿಸಬೇಕು. ಯುವ ರೈತ ಪಡೆಯನ್ನು ನಿರ್ಮಿಸಿ ಕೃಷಿಕ ಸಮಾಜವು ರೈತರ ಹೋರಾಟವನ್ನು ಬಲಗೊಳಿಸಬೇಕು~ ಎಂದು ಸಲಹೆ ನೀಡಿದರು. <br /> <br /> `ಜಿಲ್ಲೆಯಲ್ಲಿ ಬರಗಾಲದಿಂದಾಗಿ ದನಕರುಗಳಿಗೆ ಮೇವು, ನೀರಿನ ಕೊರತೆ ಉದ್ಭವಿಸುತ್ತಿದೆ. ವಿದ್ಯುತ್ ಕೊರತೆಯಿಂದಾಗಿ ರೈತರು ತೊಂದರೆಗೀಡಾಗುತ್ತಿದ್ದಾರೆ. ಹೀಗಾಗಿ ಈ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲೆಯ ರೈತ ಮುಖಂಡರನ್ನು ಆಹ್ವಾನಿಸಿ ಜಿಲ್ಲಾಧಿಕಾರಿಗಳು ಸಭೆ ನಡೆಸಬೇಕು~ ಎಂದು ಒತ್ತಾಯಿಸಿದರು. <br /> <br /> ಸಭೆಯಲ್ಲಿ ಭಾರತೀಯ ಕೃಷಿಕ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧಗೌಡ ಕಲಗೌಡ ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಳಜ್ಜ ಗೊದಳ್ಳಿ, ಮಂಜುನಾಥ ವಸ್ತ್ರದ, ಶ್ರೀಕಾಂತ ಪಾಟೀಲ, ಸಿ.ಎಸ್. ಉಣಕಲ್, ವಿಜಯಲಕ್ಷ್ಮಿ ಶೆಟ್ಟೆಣ್ಣವರ, ಡಾ. ಎಸ್.ಐ. ರಾಜಿ ಹಾಜರಿದ್ದರು. ಸಿದ್ಧಾರ್ಥ ಸಂತಾಗೋಳ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>