<p>ಬೆಂಗಳೂರು: ‘ಜ್ಞಾನಪೀಠ ಪ್ರಶಸ್ತಿಯ ಹೆಸರಿನಲ್ಲಿ ಅಡ್ಡಪಲ್ಲಕ್ಕಿ ಉತ್ಸವ ಮಾಡಿಸಿಕೊಳ್ಳುವುದು ನನಗೆ ಇಷ್ಟವಿಲ್ಲ. ಹೀಗಾಗಿ ಕನ್ನಡ ಸಾಹಿತ್ಯ ಪರಿಷತ್ತು ಭಾನುವಾರ ಆಯೋಜಿಸಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕುರಿತ ವಿಚಾರ ಸಂಕಿರಣದಲ್ಲಿ ಸನ್ಮಾನ ಸ್ವೀಕರಿಸಲು ಬರಲಿಲ್ಲ’ ಎಂದು ನಾಟಕಕಾರ ಗಿರೀಶ್ ಕಾರ್ನಾಡ್ ತಿಳಿಸಿದರು.<br /> <br /> ತಮ್ಮನ್ನು ಸಂಪರ್ಕಿಸಿದ ‘ಪ್ರಜಾವಾಣಿ’ ಜತೆಗೆ ಮಾತನಾಡಿದ ಅವರು, ‘ಈ ಬಗ್ಗೆ ಕಾರ್ಯಕ್ರಮದ ಆಯೋಜಕರಿಗೆ ಮೊದಲೇ ತಿಳಿಸಿದ್ದೆ. ಆದರೂ ಅವರು ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿದ್ದಾರೆ’ ಎಂದರು.<br /> <br /> ‘ನನಗೆ ಜ್ಞಾನಪೀಠ ಪ್ರಶಸ್ತಿ ಬಂದು 13 ವರ್ಷ ಕಳೆದಿದೆ. ಈ ಪ್ರಶಸ್ತಿಯ ಕಾರಣಕ್ಕೆ ಸಾಹಿತಿಗಳನ್ನು ಮೆರೆಸುವುದನ್ನು ಕಂಡು ನನಗೆ ಸಾಕಾಗಿದೆ. ಸನ್ಮಾನ ಎನ್ನುವುದು ಸರ್ಕಸ್ನಂತಾಗಿದೆ. ಉಳಿದ ಸಾಹಿತಿಗಳಿಗೆ ಹೇಗೋ ಏನೋ ನನಗಂತೂ ಸನ್ಮಾನ ಸಾಕಾಗಿದೆ’ ಎಂದರು.<br /> <br /> ‘ಜ್ಞಾನಪೀಠ ಪ್ರಶಸ್ತಿಯಿಂದಲೇ ಸಾಹಿತ್ಯದ ಮೌಲ್ಯಮಾಪನ ಮಾಡುವುದು ತಪ್ಪು. ಗೋಪಾಲಕೃಷ್ಣ ಅಡಿಗ, ಎಸ್.ಎಲ್.ಭೈರಪ್ಪ, ಯಶವಂತ ಚಿತ್ತಾಲ ಸೇರಿದಂತೆ ಅನೇಕ ಉತ್ತಮ ಸಾಹಿತಿಗಳಿಗೆ ಜ್ಞಾನಪೀಠ ಪ್ರಶಸ್ತಿ ಬಂದಿಲ್ಲ. ಆದರೂ ಈ ಪ್ರಶಸ್ತಿ ಪುರಸ್ಕೃತರ ಬಗ್ಗೆ ಯಾಕಿಷ್ಟು ವಿಜೃಂಭಣೆಯೋ ಗೊತ್ತಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> ಈ ಬಗ್ಗೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ, ‘ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಕಾರ್ನಾಡರು ಮೊದಲೇ ಹೇಳಿದ್ದರು. ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿದರೆ ಬರಬಹುದೇನೋ ಎಂಬ ಕಾರಣಕ್ಕೆ ಆಹ್ವಾನ ಪತ್ರಿಕೆಯಲ್ಲಿ ಹೆಸರು ಮುದ್ರಿಸಿದೆವು. ಆ ನಂತರವೂ ಅವರು ಬರಲು ಒಪ್ಪಲಿಲ್ಲ. ಅವರು ಬೇಡ ಎಂದಾಗಲೂ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿದ್ದು ನಮ್ಮ ತಪ್ಪು. ಈ ಬಗ್ಗೆ ಕಾರ್ನಾಡರಲ್ಲಿ ಕ್ಷಮೆ ಕೇಳಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಜ್ಞಾನಪೀಠ ಪ್ರಶಸ್ತಿಯ ಹೆಸರಿನಲ್ಲಿ ಅಡ್ಡಪಲ್ಲಕ್ಕಿ ಉತ್ಸವ ಮಾಡಿಸಿಕೊಳ್ಳುವುದು ನನಗೆ ಇಷ್ಟವಿಲ್ಲ. ಹೀಗಾಗಿ ಕನ್ನಡ ಸಾಹಿತ್ಯ ಪರಿಷತ್ತು ಭಾನುವಾರ ಆಯೋಜಿಸಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕುರಿತ ವಿಚಾರ ಸಂಕಿರಣದಲ್ಲಿ ಸನ್ಮಾನ ಸ್ವೀಕರಿಸಲು ಬರಲಿಲ್ಲ’ ಎಂದು ನಾಟಕಕಾರ ಗಿರೀಶ್ ಕಾರ್ನಾಡ್ ತಿಳಿಸಿದರು.<br /> <br /> ತಮ್ಮನ್ನು ಸಂಪರ್ಕಿಸಿದ ‘ಪ್ರಜಾವಾಣಿ’ ಜತೆಗೆ ಮಾತನಾಡಿದ ಅವರು, ‘ಈ ಬಗ್ಗೆ ಕಾರ್ಯಕ್ರಮದ ಆಯೋಜಕರಿಗೆ ಮೊದಲೇ ತಿಳಿಸಿದ್ದೆ. ಆದರೂ ಅವರು ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿದ್ದಾರೆ’ ಎಂದರು.<br /> <br /> ‘ನನಗೆ ಜ್ಞಾನಪೀಠ ಪ್ರಶಸ್ತಿ ಬಂದು 13 ವರ್ಷ ಕಳೆದಿದೆ. ಈ ಪ್ರಶಸ್ತಿಯ ಕಾರಣಕ್ಕೆ ಸಾಹಿತಿಗಳನ್ನು ಮೆರೆಸುವುದನ್ನು ಕಂಡು ನನಗೆ ಸಾಕಾಗಿದೆ. ಸನ್ಮಾನ ಎನ್ನುವುದು ಸರ್ಕಸ್ನಂತಾಗಿದೆ. ಉಳಿದ ಸಾಹಿತಿಗಳಿಗೆ ಹೇಗೋ ಏನೋ ನನಗಂತೂ ಸನ್ಮಾನ ಸಾಕಾಗಿದೆ’ ಎಂದರು.<br /> <br /> ‘ಜ್ಞಾನಪೀಠ ಪ್ರಶಸ್ತಿಯಿಂದಲೇ ಸಾಹಿತ್ಯದ ಮೌಲ್ಯಮಾಪನ ಮಾಡುವುದು ತಪ್ಪು. ಗೋಪಾಲಕೃಷ್ಣ ಅಡಿಗ, ಎಸ್.ಎಲ್.ಭೈರಪ್ಪ, ಯಶವಂತ ಚಿತ್ತಾಲ ಸೇರಿದಂತೆ ಅನೇಕ ಉತ್ತಮ ಸಾಹಿತಿಗಳಿಗೆ ಜ್ಞಾನಪೀಠ ಪ್ರಶಸ್ತಿ ಬಂದಿಲ್ಲ. ಆದರೂ ಈ ಪ್ರಶಸ್ತಿ ಪುರಸ್ಕೃತರ ಬಗ್ಗೆ ಯಾಕಿಷ್ಟು ವಿಜೃಂಭಣೆಯೋ ಗೊತ್ತಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> ಈ ಬಗ್ಗೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ, ‘ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಕಾರ್ನಾಡರು ಮೊದಲೇ ಹೇಳಿದ್ದರು. ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿದರೆ ಬರಬಹುದೇನೋ ಎಂಬ ಕಾರಣಕ್ಕೆ ಆಹ್ವಾನ ಪತ್ರಿಕೆಯಲ್ಲಿ ಹೆಸರು ಮುದ್ರಿಸಿದೆವು. ಆ ನಂತರವೂ ಅವರು ಬರಲು ಒಪ್ಪಲಿಲ್ಲ. ಅವರು ಬೇಡ ಎಂದಾಗಲೂ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿದ್ದು ನಮ್ಮ ತಪ್ಪು. ಈ ಬಗ್ಗೆ ಕಾರ್ನಾಡರಲ್ಲಿ ಕ್ಷಮೆ ಕೇಳಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>